Home / ಕಥೆ / ಕಿರು ಕಥೆ / ಗುರುಗಳ ಹಿರಿಮೆ

ಗುರುಗಳ ಹಿರಿಮೆ

ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವಹೇಳನ ಮಾಡುತ್ತಿದ್ದರು.

ಆ ಊರಿಗೆ ಒಬ್ಬ ಸಾಧು ಬಂದರು. ಮಠಗಳ ನಡುವೆ, ಗುರುಗಳ ನಡುವೆ, ಶಿಷ್ಯರ ನಡುವೆ ಇರುವ ಈರ್ಷೆ ವೈಷಮ್ಯ, ಅಹಂಭಾವ, ಹೆಮ್ಮೆ ನೋಡಿ ಮರುಗುತಿದ್ದರು.

ಒಮ್ಮೆ ಅಲ್ಲಿ ಸಾಧು ಸಂತರ, ಗುರುಗಳ ಸಮ್ಮೇಳನ ನಡೆಯಿತು. ಎಲ್ಲಾ ಮಠಾಧೀಶರು ತಮಗಾಗಿ ಅಲಂಕರಿಸಿದ ಪೀಠಗಳಲ್ಲಿ ಆಸೀನರಾದರು. ಅವರವರ ಶಿಷ್ಯರು ವಂದಿಮಾಗದಿಗರಂತ ಅವರ ಬಗ್ಗೆ ಹಿರಿಮೆಯಿಂದ ಹೇಳುತಿದ್ದರು.

“ನಮ್ಮ ಮಠಾಧೀಶರು, ಸಾರ್ವಭೌಮ, ಬೆಟ್ಟವನ್ನು ಭುಜದಲ್ಲಿ ಹೊತ್ತವರು.” ಎಂದ ಓರ್ವ ಮಠದ ಶಿಷ್ಯ.

“ನಮ್ಮ ಮಠಾಧೀಶರು ಆಕಾಶವನ್ನೇ ತಲೆಯಲ್ಲಿ ಹೊತ್ತವರು” ಎಂದ.

ಮತ್ತೊರ್ವ ಶಿಷ್ಯ ಅತಿ ಹೆಮ್ಮೆಯಿಂದ ಇದೆಲ್ಲಾ, ಏನು ಮಹಾ? ”ನಮ್ಮ ಮಠಾಧೀಶರು ನದಿಯ ಒಂದು ದಡದಲ್ಲಿ ಕುಳಿತು ಇನ್ನೊಂದು ದಡದಲ್ಲಿ ಇರುವವರಿಗೆ ಉಪದೇಶಮಾಡುತ್ತಾರೆ” ಎಂದ.

“ನಿಮ್ಮ ಮಠಾಧೀಶರು ಏನು? ನಮ್ಮ ಗುರುಗಳು ನಕ್ಷತ್ರಗಳಿಂದ ದೇವರನ್ನು ಪೂಜಿಸುತ್ತಾರೆ” ಎಂದ ಮತ್ತೋರ್ವ.

ಅಲ್ಲಿ ನೆರದಿದ್ದ ಅತಿ ಸಾಮಾನ್ಯ ಸಾಧುವಿನ ಶಿಷ್ಯನೊಬ್ಬ ಎದ್ದು ನಿಂತು ಹೇಳಿದ- ”ನಮ್ಮ ಸಾಧು ಗುರುಗಳು ಮುಚ್ಚಿದ ಕಣ್ಣನ್ನು ತೆರೆಯಲು ಕಲಿಸಿದ್ದಾರೆ. ಮುಚ್ಚಿದ ಎದೆಯ ಬಾಗಿಲನ್ನು ತೆರೆಯಲು ಕಲಿಸಿದ್ದಾರೆ. ನಿರ್ಭಯ ಸತ್ಯ ಆಡುವದನ್ನು ಕಲಿಸಿದ್ದಾರೆ. ಹೆಚ್ಚೇಕೆ ಶಾಂತಿ ಬಾಳ್ವೆ ಮಾಡಿ ಬದುಕುವುದನ್ನು ಕಲಿಸಿದ್ದಾರೆ. ಈ ಸಾಮಾನ್ಯ ಪವಾಡಗಳು ನಮ್ಮ ಬಾಳಿಗೆ ಅಸಾಮಾನ್ಯ ಹಿರಿಮೆ ತಂದಿದೆ.” ಎಂದರು. – ಬೇರೆ ಮಠಾಧೀಶರು ತಲೆಗೆ ಮುಸುಕನ್ನು ಎಳೆದುಕೊಂಡು ತಮ್ಮ ತಮ್ಮ ಮಠಗಳಿಗೆ ತೆರಳಿದರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...