Home / ಕಥೆ / ಕಿರು ಕಥೆ / ಮಹಾನ್ ಕಲಾಕಾರ

ಮಹಾನ್ ಕಲಾಕಾರ

ಒಬ್ಬ ದೊಡ್ಡ ಕಲಾವಿದನ ಹತ್ತಿರ ಒಬ್ಬ ವ್ಯಾಪಾರಿ ಬಂದು ಒಂದು ಸುಂದರ ಚಿತ್ರ ಬರೆದು ಕೊಡಲು ಹೇಳಿದ. ಅವನು ಒಂದು ನಿಬಂಧನೆ ಹಾಕಿದ. “ಬರಿಯುವ ಚಿತ್ರದಲ್ಲಿ, ಹಕ್ಕಿ ಹಾಡಬೇಕು, ಹಾರ ಬೇಕು, ಗಿಡ ಚಿಗುರ ಬೇಕು, ಹೂವು ಅರಳಬೇಕು, ಹಣ್ಣು ಬಿಡಬೇಕು, ಕೋಗಿಲೆ ಹಾಡಬೇಕು, ಕೊಳದಲ್ಲಿ ಹಂಸ ತೇಲಬೇಕು. ಆಗಸದಲ್ಲಿ ಬೆಳ್ಳಿಯ ಮೋಡ ತೇಲಬೇಕು. ಇಂಥ ಚಿತ್ರ ಬರೆದು ತೋರಿಸಿದರೆ ನಾನು ನೂರು ಕೋಟಿ ರೂಪಾಯಿ ಕೊಡುವೆ” ಎಂದ.

ಚಿತ್ರಕಾರ ಹೇಳಿದ “ಇದು ನನ್ನಿಂದ ಸಾಧ್ಯವಿಲ್ಲದಿರಬಹುದು. ಆದರೆ ಓರ್ವ ಅತ್ಯಂತ ಮಹಾನ್ ಕಲಾವಿದ, ಅವನು ಕುಂಚವೂ ಇಲ್ಲದೆ ಕೌಶಲ್ಯದಿಂದ ಆಗಲೆ ಬಿಡಿಸಿದ ಚಿತ್ರ ನಾ ತೋರಿಸುವೆ. ಆದರೆ ಅವನ ನಿಬಂಧನೆ ನಿಮಗೆ ಏನು ಗೊತ್ತಾ?” ಎಂದ.

“ಆ ಚಿತ್ರದಲ್ಲಿ ಕಾಣುವ ಭೂಮಿ ಎಂದೂ ಹಸುರಾಗಿರಬೇಕು. ಆಕಾಶವನ್ನು ಕಲುಷಿತ ಗೊಳಿಸಬಾರದು. ಹಕ್ಕಿ ಕೊರಲ ನಿರ್ಲಕ್ಷಿಸ ಬಾರದು. ಹೂವು ಚಿಗುರು ಬಾಡದಿರಬೇಕು. ಹಾಗೇ ಇಡದಿದ್ದರೆ ನಿನ್ನ ಸರ್ವ ನಾಶಕ್ಕೆ ತಯಾರಿರಬೇಕು.” ಎಂದನು. ಮೊದಲು ಅಂತಹ ಚಿತ್ರ ಬರೆಯಲಿ ಆ ಕಲಾವಿದ. ಆಮೇಲೆ ನೋಡೋಣ ಎಂದ ವ್ಯಾಪಾರಿ. ಚಿತ್ರ ಈಗಲೆ ತಯಾರಿದೆ. ಕಲಾವಿದನನ್ನು ಈಗ ಕಾಣದಾದರು ಅವನ ಕಲಾಕೃತಿ ನೋಡಬಹುದು ಎಂದ ಕಲಾವಿದ.

“ಖಂಡಿತ ನೋಡಲು ಇಚ್ಛಿಸುತ್ತೇನೆ” ಎಂದ ವ್ಯಾಪಾರಿ. ಕಲಾವಿದ ಅವನ ಮನೆಯ ಹಿಂದಿನ ತೋಟಕ್ಕೆ ಕರೆದುಕೊಂಡು ಹೋದ. ಅದು ಅತಿ ಸುಂದರ ತೋಟ. ವ್ಯಾಪಾರಿ ಬಯಸಿದ ಗಿಡ ವೃಕ್ಷ, ಚಿಗುರು, ಹೂವು, ಕೊಳ ಹಂಸ, ಕೋಗಿಲೆ ಗಾನ, ಹಕ್ಕಿ ಚಿಲಿಪಿಲಿ ಎಲ್ಲಾ ಇದ್ದವು. ಇದು ಮಹಾನ್ ಕಲಾಕಾರನ ದೈವ ಸೃಷ್ಟಿ. ಇದಕ್ಕೆ ನೀನು ನೂರು ಕೋಟಿ ಬೆಲೆ ಕಟ್ಟುತ್ತೀಯಾ?” ಎಂದ.

“ಮೊದಲು ಪ್ರಕೃತಿ ಪೂಜಿಸು, ಕಾಪಾಡು, ಆಮೇಲೆ ನಿನ್ನ ವ್ಯಾಪಾರ,” ಅಂದಾಗ ವ್ಯಾಪಾರಿಯ ಕಣ್ಣು ತೆರೆಯಿತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...