ದಬ್ಬಾಳಿಕೆಗೆ – ೨

ಯಜ್ಞಕುಂಡದ ಹಾಗೆ ಹಗಲಿರುಳು ಹೊತ್ತುತಿಹ
ತಪಸಿಗಳ ಎದೆಯ ವೇದಿಕೆಯ ತುಳಿದು,
ಜ್ಞಾನಶಕ್ತಿಗೆ ಇಟ್ಟ ನಿತ್ಯನಂದಾದೀಪ-
ದಂದ ಮಿದುಳಿನ ತಲೆಗಳನ್ನು ಮುಟ್ಟಿ,

ಸತ್ಯವೀರರ ನಿತ್ಯ ಶುದ್ಧ ನಾಲಗೆಯಿಂದ
ಬಂದುಸಿರ ಕಣೆಗಳಿಗೆ ಬೆನ್ನುಗೊಟ್ಟು,
ಪ್ರೀತಿವಾತ್ಸಲ್ಯಕ್ಕೆ ಅಭಿಷೇಕ ಗೈಯುತಿಹ
ಸಾಧ್ವಿಯರ ಕಣ್ಣೀರ ನಂಜ ಕುಡಿದು,

ನಿನ್ನ ಕೋಪದ ಪಿತ್ತವನು ಕಾರಿಕೊಂಡು
ಅದರ ಕೋಪದ ಹಿರಿಯ ಹೊರೆ ಹೇರಿಕೊಂಡು
ಮುಕ್ಕರಿಸಿ ಮುಗಿಬಿದ್ದು ಕಣ್ಮುಚ್ಚುವಂದು
ನಿನಗೊಂದು ಶಾಂತಿ- ಆ ಜನಕೆ ಬೇರೊಂದು-!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಂಗಾರದ ನಾಣ್ಯ

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…