ಹಡೆದ ತಾಯಿ ಒಡಲುಂಡ ನೋವೆಷ್ಟೊ?
ಈ ಪುಣ್ಯಫಲವನ್ನಿಲ್ಲಿ ಬಿಟ್ಟು ಎಲ್ಲಿ ಹೋದಳೊ?
ಚೆಂದದ ಕಂದನ ನೋಡಿ ಅಬ್ಬ ಆಹಾ ಎಂದು ಕೆಲ ಮಂದಿ
ಸುತ್ತಮುತ್ತಿ ಅದನ್ನು ಪೋಷಿಸುವ ಪಣತೊಟ್ಟರು
ಒಡವೆ ವಸ್ತ್ರಗಳಿಂದಲಂಕರಿಸಿದರು ಕುತ್ತಿಗೆ ಮಟ ಉಸಿರು ಕಟ್ಟುವವರೆಗೆ
ತಿಂಡಿತಿನಿಸುಗಳ ಎಡೆಮಾಡಿಕೊಂಡು ಮೆರೆಸಿದರು ಅದನುಪವಾಸ
ಅದಕಾಗಿ ಮನೆಯೆಂದು ಕಲ್ಲಿಗೆ ಕಲ್ಲೇರಿಸಿ ಕಟ್ಟಿ
ಭದ್ರವಾಗಿರಲೆಂದು ಬೀಗ ಜಡಿದು ಕೂಡಿಟ್ಟರು
ಆ ಕೂಸಿನ ಗೋತ್ರೇತಿಹಾಸವ ಬಣ್ಣ ಬಣ್ಣ ಮಸಿಗಳಿಂದ
ಹೆಬ್ಬೊತ್ತಿಗೆಗಳಲಿ ಬರೆದು ಹಳೆಸಂದೂಕಗಳಲಿಟ್ಟು
ಪಾವಿತ್ರ್ಯತೆಯ ಸರ್ಪಗಾವಲು ಹಾಕಿದರು
ಅದರ ಹೆಸರಲ್ಲಿ ವರುಷವರುಷವೂ ಪರಿಷೆ ನಡೆಯುತ್ತದೆ
ಆಗ ಅದರ ಸಿದಿಗೆಯ ಕಟ್ಟಿ ಕೂಡಿಸಿ ಕುಣಿದಾಡುತ್ತಾರೆ
ಅಸಲಿಲ್ಲದೀ ಬಡ್ಡಿ ಮಕ್ಕಳು, ಬೆಂಕಿಯಿಲ್ಲದೆಡೆಯೂದಿ ಹೊಗೆ ಹಾಕುತ್ತಾರೆ
ತಾಯಿ, ಮರಳಿ ಬಂದು ತನ್ನ ಕಂದಮ್ಮನನ್ನು ನೋಡಿದರೆ???
ಸಮಾಧಿಯಡಿ ದೀರ್ಘನಿದ್ರೆಯಲ್ಲಿದೆ ಪಾಪ
*****
Related Post
ಸಣ್ಣ ಕತೆ
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…