ರೋದನ

ಹಣ್ಣೆಲೆಯು ಹಾರುತಿರೆ, ನೀರಿನುಗೆಯಾಗುತಿರೆ
ದಿನದ ಬಿಸಿಲಿಗೆ ಹೂವು ಬಾಡುತಿರಲು,
ಮೈಗರೆದು ಮಿಡುಕುತಿದೆ ಮೂಕ ಶೋಕವು, ಸೃಷ್ಟಿ
ಕೋಗಿಲೆಯ ಕೊರಳಿನಲಿ ಹಾಡುತಿರಲು.

ಮನದ ಮಗಳಾದ ನುಡಿ ಹುರುಳಿನಲಿ ನರಳುತಿದೆ.
ಹಾಡು ನೆಲೆಗಾಣದಲೆ ನವೆಯುತಿಹುದು.
ಬಾಳಸಿರಿ ಎಂದಿತ್ತ ಉಸಿರು ಮಸೆದಲಗಾಗಿ,
ಮುಗಿಲ ಮೊಗವನೆ ಕವಿದು, ತಿವಿಯುತಿಹುದು.

ಹುಟ್ಟ ಬೆನ್ನಟ್ಟಿ ಬರುತಿಹುದು ಸಾವು,
ಮಾಯದಿಹ ಗಾಯದಲಿ ಮೊಳೆಯೆ ನೋವು.
ತಾಯಿ ಕರೆಯಲು ಮುಗ್ಧ ಬಾಲಸರಣಿ-
ರೋದನವು ಕೂಗುತಿದೆ ‘ಬಾರೊ ಕರುಣಿ’
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೊದಲ ಮುಖ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…