ತೊಗಲ ಚೀಲ

ತೊಗಲ ಚೀಲಗಳಲ್ಲಿ ಬದುಕು ನಡೆದಿದೆ. ಹೊಟ್ಟೆ
ಹೊಸೆಯುವದೆ ಬಾಳುವೆಯು; ನಿದ್ದೆ ಹಿಗ್ಗು;
ಮಣ್ಣಿನಲಿ ಅನ್ನವನು ಹುಡುಕುತಿವೆ ಕಣ್ಣುಗಳು;
ಇನ್ನುವೂ ಹೂತಿಲ್ಲ ಮನದ ಮೊಗ್ಗು.

ಬಾನ ತುಂಬಿದೆ ಶಂಖನಾದ, ತಿರುತಿರುಗುತಿದೆ
ಚಕ್ರ, ಬಣ್ಣಗಳಲ್ಲಿ ಬೀರಿ ಪ್ರಭೆಯ.
ಕಣ್ಣೆತ್ತಿ ಕಿವಿದೆರೆದು ಬಾಳಬೇಕೆಂಬುವರ
ಕರೆಯುತಿದೆ ಸಾಹಸಕೆ, ಸಾರಿ ಅಭಯ.

ಆಡಿಸಿರಿ ಚಕ್ರವನು, ನುಡಿಸಿರಿ ಶಂಖ
ನಕ್ಷತ್ರ ಗುರಿಯಿರಲಿ, ಪುಂಖಾನು ಪುಂಖ.
ಕಣೆಗಳೆಸೆಯಿರಿ, ಸಾರಿ ಸ್ವರ್ಗಕೊಳನುಗ್ಗಿ
ಬರಲಿ ಹೂವಿನ ಹಬ್ಬ, ನಲ್ಲೆದೆಯ ಸುಗ್ಗಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಾಸ್ತ್ರ ಪುರಾಣ
Next post ಹುಲ್ಲು ಗರಿಕೆಯ ಆಸೆ

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…