Home / ಕವನ / ಕವಿತೆ / ಮಡಿಕೇರೀಲಿ ರತ್ನ

ಮಡಿಕೇರೀಲಿ ರತ್ನ

ಮಡಿಕೇರೀಲಿ ರತ್ನ
ಕಂಡಾ ವೊಸಾ ಮತ್ನ. ೧

‘ಮಡಿಕೇರೀಲಿ ಮಡಿಕೆ ಯೆಂಡ
ಯೀರ್ದಿದ್ರ್ ಅಲ್ಲೀಗ್ ವೋದ್ದೂ ದಂಡ’
ಅಂದಿ ರತ್ನ ಪಡಕಾನೇಗೆ
ವೊಂಟಿ, ಬೆಟ್ಟದ ನೆತ್ತಿ ಮೇಗೆ
ವೋಯ್ತಿದ್ದಂಗೆ ನಿಂತ!
ಕಲ್ಲಾದಂಗೆ ಕುಂತ! ೨

ಸುತ್ತ ಸಾಯೋ ಬಿಸಿಲಿನ್ ಚಾಪೆ!
ಅಲ್ಲಲ್ಲಿ ವೊಸಿ ನೆರಳಿನ್ ತೇಪೆ!
ಅಲೆಯಲೆಯಾಗಿ ಬಿಸಿಲಿನ್ ಜೊತೆಗೆ
ಸುತ್ತಿನ್ ಗುಡ್ಡಗೊಳ್ ಕುಣದರ್ ಮೆತ್ಗೆ
ಮನಸೀಗ್ ಅರ್‍ಸ ತರ್‍ತ-
ರತ್ನ ಯೆಂಡ ಮರ್‍ತ! ೩

‘ಮುದಕನ್ ಸಾವೇ ನೋಡಾಕ್ ಚಂದ!’
ಅಂದ್ರೆ ಸೂರ್‍ಯ ಸಾಯಾಲ್ಲೇಂದ;
‘ಸಾಯೋ ಮುದುಕ ಸಂಜೆ ಸೂರ್‍ಯ
ನೆಗತ ನಿಲ್ಲೋಕ್ ಇವ್ಗೇನ್ ಕಾರ್‍ಯ?’
ಅಂತ ಹಿಂದಕ್ಕ್ ತಿರ್‍ಗಿ
ನೋಡ್ದ್ರೆ-ಬತ್ತು ಗಿರ್‍ಕಿ! ೪

ದೇವರದೊಂದು ಚೆಂದದ್ ಸೋತ್ರ
ಕೊಡಗಿನ್ ಮೇಗಿನ್ ಒಂದ್ ನಕ್ಸತ್ರ
ಕೊಡಗಿನ್ ಒಂದ್ ಊ ಗಾಳೀಲ್ ತೇಲ್ತ
ಬಂದಂಗಿದ್ಲು ಅತ್ರ ಕಾಲ್ತಾವ್
ಒಂದು ಕೊಡಗೀನುಡಗಿ!
ಐದಾರೊರಸದ್ ವುಡಗಿ! ೫

ಕೊಡಗಿನ್ ತೋಟದ್ ಕಾಪೀ ಅಣ್ಣು
ತುಟಿಗೊಳ್! ಇಳ್ಳಿನ್ ಬೆಳಕೆ ಕಣ್ಣು!
ಕೆನ್ನೆ ಅನಕ ಕೊಡಗಿನ್ ಕಿತ್ಲೆ!
ಔಳೇಳಿದ್ಲು ನಾ ಕೇಳೂತ್ಲೆ :
‘ನಿಂಗೆ ಯೆಸರೇನಮ್ಮ?’
‘ನನ್ನೆಸರು ಪೂವಮ್ಮ!’ ೬

‘ಪೂವಮ್ಮ!’ ಹಾ ! ಯೆಂತಾ ಯೆಸರು!
ಕಣ್ಣಿಗೆ ಚಿತ್ರ ಕಟ್ಟೋ ಯೆಸರು!
ರೂಪು ರಾಗಕೆ ತಕ್ಕಂತ್ ಯೆಸರು!
ಯಂಗ್ ನೋಡಿದ್ರು ವೊಪ್ಪೋ ಯೆಸರು!
‘ಪೂವಮ್ಮಾ! ಪೂವಮ್ಮಾ!’
‘ಪೂವಮ್ಮಾ! ಪೂವಮ್ಮಾ!’

ಔಳ್ ನೋಡೂತ್ಲೆ ನಂಗ್ ಮತ್ತಾಯ್ತು!
ಔಳ್ ಮಾತ್ಕೇಳಿ ಒಂದ್ ಅತ್ತಾಯ್ತು!
ಔಳ್ ಮಾತ್ ಇನ್ನಾ ಕೇಳ್ಬೇಕೂಂತ
‘ನಾನ್ಯಾರ್ ಗೊತ್ತೆ?’ ಅಂದ್ರೆ ‘ಹೂ’ತ
‘ನೀ ಯೆಂಡಕುಡಕ’ ಅಂದ್ಲು
ನೆಗ್ತ ಅತ್ರ ಬಂದ್ಲು. ೮

‘ನೀ ನಾ ಕುಡಿಯೋದ್ನ್ ಎಲ್ ನೋಡ್ದೇಮ್ಮ?’
ಅಂದ್ರೆ, ‘ಯಾವೋನ್ಗೈತೆ ಜಮ್ಮ
ಔನ್ಗೆ ಯೋಳ್ತಿವ್ ಕೊಡವಾಂತಂದಿ!
ಕುಡದಂಗ್ ಆಡೋನ್ ಕುಡುಕಾಂ’ತ್ ಅಂದಿ
ತೊಡೇನ್ ಅತ್ತಿದ್ಲು ಮೆಲ್ಗೆ!
ಕುಡದೋನ್ ಅಂದ್ರೆ ಸಲ್ಗೆ! ೯

ಕತ್ತಿನ್ ಸುತ್ತ ಕೈ ಆಕ್ಕೊಂಡಿ
‘ಅಣ್ಣ ರತ್ನ’ ಅಂತ್ ನೆಕ್ಕೊಂಡಿ
‘ಯೆಂಡದ ಪದಗೊಳ್ ಏಳ್ ನೋಡಾನೆ!
ನಾನೂ ನಿನ್ನಂಗ್ ಕಲ್ತ್ ಆಡಾನೆ!’
ಅಂದ್ಲು ಮೊಕಾನ್ ನೋಡಿ!
ಕಣ್ಣ ದೊಡ್ದು ಮಾಡಿ! ೧೦

ಇಲ್ದಿದ್ ತಂಗಿ ಆಗ್ ವುಟ್ಟಿದ್ಲು
ಪೂವಮ್ಮಾನೆ ನಂಗೆ ಮೊದಲು!
ತಂಗಿ ವುಟ್ಟಿದ್ ದಿವಸಾಂತೇಳಿ
ಆಡ್ದೆ ಯೆಂಗೀಸ್ ಇಡದಂಗ್ ತಾಲಿ-
ಸೂರ್‍ಯ ಮುಳಗಿದ್ ಕಾಣ್ದೆ!
ಯೆಂಡ ಬೇಕಂತ್ ಅನ್ದೆ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...