Home / ಕವನ / ಕವಿತೆ / ಮಡಿಕೇರೀಲಿ ಮಂಜು

ಮಡಿಕೇರೀಲಿ ಮಂಜು

ಬೂಮೀನ್ ತಬ್ಬಿದ್ ಮೋಡ್ ಇದ್ದಂಗೆ
ಬೆಳ್ಳಿ ಬಳಿದಿದ್ ರೋಡ್ ಇದ್ದಂಗೆ
ಸಾಫಾಗ್ ಅಳ್ಳ ತಿಟ್ಟಿಲ್ದಂಗೆ
ಮಡಿಕೇರೀಲಿ ಮಂಜು!
ಮಡಗಿದ್ ಅಲ್ಲೇ ಮಡಗಿದ್ದಂಗೆ
ಲಂಗರ್ ಬಿದ್ದಿದ್ ಅಡಗಿದ್ದಂಗೆ
ಸೀತಕ್ ಸಕ್ತಿ ಉಡಗೋದಂಗೆ
ಅಳ್ಳಾಡಾಲ್ದು ಮಂಜು! ೧

ತಾಯಿ ಮೊಗೀನ್ ಎತ್ಕಂಡಂಗೆ
ಒಂದಕ್ಕೊಂದು ಅತ್ಕೊಂಡಂಗೆ
ಮಡಿಕೇರೀನ ಎದೆಗೊತ್ಕೊಂಡಿ
ಜೂಗೀಡ್ಸಿತ್ತು ಮಂಜು!
ಮಲಗಾಕ್ ಸೊಳ್ಳೆ ಪರದೆ ಕಟ್ಟಿ
ಒದಿಯಾಕ್ ಒಗದಿದ್ ದುಪಟಿ ಕೊಟ್ಟಿ
ಪಕ್ದಾಗ್ ಗಂದದ್ ದೂಪ ಆಕ್ದಂಗ್
ಮಡಿಕೇರೀ ಮೇಲ್ ಮಂಜು! ೨

ಮಂಜಿನ ಮಸಕಿನ್ ಕಾವಲ್ನಲ್ಲಿ
ಒಣಗಿದ್ ಉದ್ದಾನೆ ವುಲ್ನಲ್ಲಿ
ಒಳಗೇ ಏನೋ ಸರದೋದಂಗೆ
ಅಲಗಾಡ್ತಿತ್ತು ಮಂಜು!
ನಡಿಯೋ ದೊಡ್ದೊಡ್ ದೇವಲ್ನಂಗೆ
ಪಟ್ಣದ್ ಸುತ್ತಿನ್ ಕಾವಲ್ನಂಗೆ
ಅಲ್ಲಲ್ಲೇನೆ ಅಂಗಂಗೇನೆ
ಗಸ್ತಾಕಿತ್ತು ಮಂಜು! ೩

ಸೂರ್‍ಯನ್ ಕರೆಯೋಕ್ ಬಂದ್ ನಿಂತೋರು
ಕೊಡಗೀನ್ ಎಲ್ಲಾ ಪೂವಮ್ನೋರು
ತೆಳ್ನೆ ಬೆಳ್ನೆ ಬಟ್ಟೇನಾಕಿ
ಬಂದಂಗಿತ್ತು ಮಂಜು!
ಚಿಮ್ತಾನಿದ್ರ್ ಎಳಬಿಸಿಲಿನ್ ಕೆಂಪು
ಮಂಜಿನ್ ಬಣ್ಣ ಕಣ್ಗೆ ತಂಪು!
ಕೊಡಗಿನ್ ಲಸ್ಮೀರ್ ಪೂವಮ್ನೊರ್‍ಗೆ
ಆಲಿನ್ ಸೌಂದ್ರೀ ಮಂಜು! ೪

ಅಗಲೇ ಬರಲಿ ರಾತ್ರೇ ಬರಲಿ
ಬಿಸಲು ನೆಳ್ಳು ಏನೇ ಇರಲಿ
ಕಣ್ಮರೆಯಾಗಾಕ್ ತಾವ್ ಕೊಡಾಲ್ದು
ಮಡಿಕೇರೀಗೆ ಮಂಜು!
ತೈಲ ನೀರಿನ್ ಮೇಗಿದ್ದಂಗೆ
ಪೂವಮ್ಮ-ನನ್ ತಂಗೀದ್ದಂಗೆ
ಬಿಟ್ಟೂ ಬಿಡದಂಗ್ ಇಡಕೋಂತಿತ್ತು
ಮಡಿಕೇರೀಗೆ ಮಂಜು! ೫
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...