Home / ಕವನ / ಕವಿತೆ / ಮಡಿಕೇರೀಲಿ ಮಂಜು

ಮಡಿಕೇರೀಲಿ ಮಂಜು

ಬೂಮೀನ್ ತಬ್ಬಿದ್ ಮೋಡ್ ಇದ್ದಂಗೆ
ಬೆಳ್ಳಿ ಬಳಿದಿದ್ ರೋಡ್ ಇದ್ದಂಗೆ
ಸಾಫಾಗ್ ಅಳ್ಳ ತಿಟ್ಟಿಲ್ದಂಗೆ
ಮಡಿಕೇರೀಲಿ ಮಂಜು!
ಮಡಗಿದ್ ಅಲ್ಲೇ ಮಡಗಿದ್ದಂಗೆ
ಲಂಗರ್ ಬಿದ್ದಿದ್ ಅಡಗಿದ್ದಂಗೆ
ಸೀತಕ್ ಸಕ್ತಿ ಉಡಗೋದಂಗೆ
ಅಳ್ಳಾಡಾಲ್ದು ಮಂಜು! ೧

ತಾಯಿ ಮೊಗೀನ್ ಎತ್ಕಂಡಂಗೆ
ಒಂದಕ್ಕೊಂದು ಅತ್ಕೊಂಡಂಗೆ
ಮಡಿಕೇರೀನ ಎದೆಗೊತ್ಕೊಂಡಿ
ಜೂಗೀಡ್ಸಿತ್ತು ಮಂಜು!
ಮಲಗಾಕ್ ಸೊಳ್ಳೆ ಪರದೆ ಕಟ್ಟಿ
ಒದಿಯಾಕ್ ಒಗದಿದ್ ದುಪಟಿ ಕೊಟ್ಟಿ
ಪಕ್ದಾಗ್ ಗಂದದ್ ದೂಪ ಆಕ್ದಂಗ್
ಮಡಿಕೇರೀ ಮೇಲ್ ಮಂಜು! ೨

ಮಂಜಿನ ಮಸಕಿನ್ ಕಾವಲ್ನಲ್ಲಿ
ಒಣಗಿದ್ ಉದ್ದಾನೆ ವುಲ್ನಲ್ಲಿ
ಒಳಗೇ ಏನೋ ಸರದೋದಂಗೆ
ಅಲಗಾಡ್ತಿತ್ತು ಮಂಜು!
ನಡಿಯೋ ದೊಡ್ದೊಡ್ ದೇವಲ್ನಂಗೆ
ಪಟ್ಣದ್ ಸುತ್ತಿನ್ ಕಾವಲ್ನಂಗೆ
ಅಲ್ಲಲ್ಲೇನೆ ಅಂಗಂಗೇನೆ
ಗಸ್ತಾಕಿತ್ತು ಮಂಜು! ೩

ಸೂರ್‍ಯನ್ ಕರೆಯೋಕ್ ಬಂದ್ ನಿಂತೋರು
ಕೊಡಗೀನ್ ಎಲ್ಲಾ ಪೂವಮ್ನೋರು
ತೆಳ್ನೆ ಬೆಳ್ನೆ ಬಟ್ಟೇನಾಕಿ
ಬಂದಂಗಿತ್ತು ಮಂಜು!
ಚಿಮ್ತಾನಿದ್ರ್ ಎಳಬಿಸಿಲಿನ್ ಕೆಂಪು
ಮಂಜಿನ್ ಬಣ್ಣ ಕಣ್ಗೆ ತಂಪು!
ಕೊಡಗಿನ್ ಲಸ್ಮೀರ್ ಪೂವಮ್ನೊರ್‍ಗೆ
ಆಲಿನ್ ಸೌಂದ್ರೀ ಮಂಜು! ೪

ಅಗಲೇ ಬರಲಿ ರಾತ್ರೇ ಬರಲಿ
ಬಿಸಲು ನೆಳ್ಳು ಏನೇ ಇರಲಿ
ಕಣ್ಮರೆಯಾಗಾಕ್ ತಾವ್ ಕೊಡಾಲ್ದು
ಮಡಿಕೇರೀಗೆ ಮಂಜು!
ತೈಲ ನೀರಿನ್ ಮೇಗಿದ್ದಂಗೆ
ಪೂವಮ್ಮ-ನನ್ ತಂಗೀದ್ದಂಗೆ
ಬಿಟ್ಟೂ ಬಿಡದಂಗ್ ಇಡಕೋಂತಿತ್ತು
ಮಡಿಕೇರೀಗೆ ಮಂಜು! ೫
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...