Home / ಕವನ / ಕವಿತೆ / ಇಲ್ಲ

ಇಲ್ಲ

ಅಂಗಿಯೊಳ ಅಂಗಿಯಲ್ಲಡಗಿರುವ ಇವನು
ಒಂದೊಂದೇ ಪದರ ಕಳಚಿ
ತನ್ನ ಬೆಳ್ಳುಳ್ಳಿ ಮುಖವನ್ನು ತೋರಿಸಲಿಲ್ಲ
ಅಥವಾ ಬಿಚ್ಚೀ ಬಿಚ್ಚೀ ಉಳ್ಳಾಗಡ್ಡೆಯಂತೆ
ಬಟ್ಟ ಬಯಲಾಗಲಿಲ್ಲ
ಬರೀ ಕಲ್ಲು ಕೆಸರುಗಳೇ ತುಂಬಿದ
ಸರೋವರದ ತಳದಲ್ಲಿ ರತ್ನ ಮುತ್ತುಗಳು
ಹೊಳೆಯಲೆ ಇಲ್ಲ
ಕತ್ತರಿ ಕೋಲುಗಳಿಗೆ ಸಿಕ್ಕಿ ಮೋಟಾದ
ಇವನ ಜೀವವೃಕ್ಷಕ್ಕೆ
ಚೈತನ್ಯದ ಕೊಂಬೆರೆಂಬೆಗಳೊಡೆಯಲೆ ಇಲ್ಲ
ಚೆಲುವಿನೆಲೆ ಹೂ ಹಣ್ಣುರಸ ಚಿಮ್ಮಲೇ ಇಲ್ಲ
ಆ ಹೂಗಳಿಗೆರಗುವ ದುಂಬಿಗಳಿಲ್ಲ
ಆ ಹಣ್ಣ ಕುಕ್ಕಿ ಸವಿಯೀಂಟುವ ಹಕ್ಕಿಗಳಿಲ್ಲ
ಆ ಕೊಂಬೆಗಳಲ್ಲಿ ಗೂಡು ಕಟ್ಟಿ ಕಲಕಲನಾದ ಹೊಮ್ಮಲೆ ಇಲ
ಕತ್ತಲ ಮೆತ್ತಿದೀ ಚಿತ್ರದಾಗಸದಲ್ಲಿ
ಚಿತ್ತಾರ ತಾರಗೆಗಳು ಮಿನುಗಲೆ ಇಲ್ಲ
ತಂಗದಿರ ಚಂದಿರನು ಆಡಲೆ ಇಲ್ಲ
ಬಲವಂತ ಬಾಯಿ ಹೊಲಿದ ಮೌನದಿಂದ
ಹಿಗ್ಗಿನ ಹಾಡೊಂದೂ ಸೆಲೆಯೊಡೆಯಲಿಲ್ಲ
ಮುಖ ಮುಚ್ಚಿದ ಮಬ್ಬು ಮೋಡದಂಚಿಗೆ
ತಿಳಿನಗೆಯ ತೆರೆಮಿಂಚು ಸುಳಿಯಲೆ ಇಲ್ಲ
ಬಗೆ ಮೊಗ್ಗು ಗಾಳಿಗೆದೆಯೊಡ್ಡಲರಳಲೆ ಇಲ್ಲ
ನುಸಿವಿಡಿದ ಮತಿಯಲ್ಲಿ ಚಿಕ್ಕೆ ಮೊಗ್ಗೆಯ ಸಾಲು
ಥಳಥಳಿಸಿ ಕಸವನ್ನು ಕಳೆಯಲೆ ಇಲ್ಲ
ಕುಳಿತು ಕೈಕಾಲು ಸೇದಿಹೋದ ಇವನ ನಡೆ
ನೂರಾರು ನರ್ತನ ಲೀಲೆಗಳ ಮೆರೆಯಲಿಲ್ಲ
ಮನಸಿನೊಳ ಮಂದಾರ ತಳ ಬಿಟ್ಟು ಮೇಲೆ ಬಂದು
ನೀರ ಮೇಲಲೆಗಳನು ಚುಂಬಿಸಲೆ ಇಲ್ಲ
ಬೆಳೆಯುತ್ತಲೇ ಬರದಾದ ಕೊರಡು ಕೈಗಳು
ಯಾವ ಕೋಮಲತೆಯನೂ ತಬ್ಬಲಿಲ್ಲ ತಬ್ಬಿ ಉಬ್ಬಲಿಲ್ಲ
ಹಿಮದಂಥ ಬಿಗಿದ ತುಟಿಯು
ಯಾವ ಮಧುವನು ಹೀರಿ ಸವಿಯಲೆ ಇಲ್ಲ
ಬರೀ ಕರಿಮೋಡವಾದಿವನ ಒಡಲಿಂದ
ಹೆಪ್ಪಮುರಿವ ಹೆಬ್ಬಯಕೆ ಧಾರೆಯಾಗಿಳಿಯಲೆ ಇಲ್ಲ
ಇಳಿದರೂ ಯಾವ ಬೀಜವೂ ಬಾಯ್ದೆರೆದು ಮೃತ್ಯುವನಣಕಿಸಲಿಲ್ಲ
ಮರುಭೂಮಿಯ ಒಣಮರಳಿನಲ್ಲಿ
ಯಾವ ಹಸಿಮಣ್ಣು ಉಸಿರಾಡಿ ಚಿಗುರಲೆ ಇಲ್ಲ
ಅಲೆದಾಡಿದರೂ ಯಾವ ಕಣ್ಣಬಟ್ಟಲೂ ತುಂಬಿ ಹನಿಸಲೆ ಇಲ್ಲ
ಯಾವ ಗಂಟಲು ತುಂಬಿ ತಿನಿಸಲೆ ಇಲ್ಲ
ಯಾವ ಹಕ್ಕಿಯು ಹಾಡಿ ಹರಸಲೆ ಇಲ್ಲ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...