ಆಯ್ಕೆ

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಬಾಳಿನ ಸಫಲತೆಯನ್ನೋ
ಕೃತಿಯ ಪರಿಪೂರ್‍ಣತೆಯನ್ನೋ
ಆಯಬೇಕು ಒಂದನ್ನೇ ಮನುಷ್ಯಮತಿ ಇಲ್ಲಿ,
ಆಯ್ದರೆ ಎರಡನೆಯದನ್ನು
ಬಿಟ್ಟುಕೊಡಬೇಕು ದೇವಸೌಧವನ್ನು,
ಕುದಿಯಬೇಕು ತಡಕಾಡುತ್ತ ಕತ್ತಲಲ್ಲಿ.

ಎಲ್ಲ ಕಥೆ ಕೊನೆಗಂಡು
ಉಳಿಯುವುದಾದರೂ ಏನು?
ಗೆಲುವೋ, ಸೋಲೋ, ಒಟ್ಟು ಪಟ್ಟಪಾಡಿನ ಗುರುತು:
ಖಾಲಿ ಜೇಬಾದವನ ಕಂಗಾಲು ನೋಟ,
ಹಗಲಿನ ನಿರರ್‍ಥಕತೆ, ರಾತ್ರಿಯ ವಿಲಾಪ.
*****
ಸಫಲವಾದ ಜೀವನ ಮತ್ತು ಸಾರ್‍ಥಕವಾದ ಕೃತಿರಚನೆ ಈ ಎರಡೂ ಒಟ್ಟಿಗೇ ಮನುಷ್ಯನಿಗೆ ದಕ್ಕುವುದಿಲ್ಲ. ಕೃತಿಯ ಸಾಫಲ್ಯತೆಗೆ ಬಾಳಿನ ಎಲ್ಲ ಬಗೆಯ ಸಾಕ್ಷಾತ್ತಾದ ಅನುಭವ ಅಗತ್ಯ. ಕೃತಿಕಾರ ತನ್ನ ಬಾಳನ್ನು ಬಲಿಕೊಟ್ಟಲ್ಲದೆ ಅದನ್ನು ಪಡೆಯಲು ಸಾಧ್ಯವಿಲ್ಲ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಡುತಾವ ನೆನಪುಗಳು – ೧೨
Next post ಸಿರಿಯೆ ನೀ ಸಿರಿಯೆ

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…