Home / ಕವನ / ಅನುವಾದ / ಬೈಜಾಂಟಿಯಮ್

ಬೈಜಾಂಟಿಯಮ್

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಸರಿಯುವ ಹಿಂದೆ, ಹಗಲಿನ ಅಶುದ್ಧ ಪ್ರತಿಮೆಗಳು;
ನಿದ್ರಿಸಿದ್ದಾರೆ ಚಕ್ರವರ್‍ತಿಯ ಮತ್ತ ಸೈನಿಕರು;
ಇರುಳ ದನಿಯನುರಣನ ಮೆಲ್ಲಮೆಲ್ಲಗೆ ಅಳಿದು
ದೊಡ್ಡ ಚರ್‍ಚಿನ ಗಂಟೆ ಬಡಿದು, ಗಾಳಿಯಲೀಗ
ರಾತ್ರಿಂಚರರ ಹಾಡು. ಚಿಕ್ಕಯೋ ಚಂದ್ರನೋ
ಹಚ್ಚಿಟ್ಟ ಧವಳಗುಮ್ಮಟ ತಿರಸ್ಕರಿಸುತಿದೆ ಮರ್‍ತ್ಯನ ಸಮಸ್ತವನ್ನೂ,
ಮರ್‍ತ್ಯ ಬಾಳಿನ ಎಲ್ಲ ಸಂಕೀರ್‍ಣತೆಗಳನ್ನು
ಮರ್‍ತ್ಯಧಮನಿಗಳ ರೊಚ್ಚೆ ರೋಷಗಳನ್ನು

ತುಯ್ಯುತಿದೆ ಕಣ್ಣ ಮುಂದೊಂದು ಪ್ರತಿಮೆ, ಮನುಷ್ಯನೋ ನೆರಳೋ,
ನೆರಳೆನ್ನುವುದೆ ಸರಿ, ನೆರಳಿಗಿಂತಲು ಪ್ರತಿಮೆ ಎಂದರಿನ್ನೂ ಸರಿ;
ಮಮ್ಮಿವಸ್ತ್ರದಲಿ ಹುಗಿದಿಟ್ಟ ಅಧೋಲೋಕದ ಆತ್ಮ
ಸುತ್ತಬೇಕಾದ ಪಥವ ಬಿಚ್ಚಬಹುದು;
ಉಸಿರಿರದ ತೇವವಿಲ್ಲದ ಬಾಯಿಯೊಂದು
ಉಸಿರು ಬಿಗಿಹಿಡಿದ ಬಾಯಿಗಳ ತನ್ನಲ್ಲಿಗೆ ಕರೆಸಬಹುದು;
ಅತಿಮಾನುಷಕ್ಕೆ ಉಘೇ ಎನ್ನುವವ ನಾನು;
ಬಾಳಿನಲ್ಲಿನ ಸಾವು, ಸಾವಿನಲ್ಲಿನ ಬಾಳು ಎನ್ನುವೆ ಅದನ್ನು

ಇದು ಪವಾಡವೆ, ಹಕ್ಕಿಯೆ, ಹೊನ್ನಿನಲಿ ಕೊರೆದ ಕುಶಲ ಕೈಕಸುಬೆ?
ಹಕ್ಕಿಗಿಂತ, ಹಸ್ತಕೌಶಲಕ್ಕಿಂತ ಇದು ದಿಟ ಪವಾಡವೆ,
ನಕ್ಷತ್ರದೀಪ್ತ ಚಿನ್ನದ ಕೊಂಬೆಮೇಲೆ ಇದು ನೆಟ್ಟು ನಿಲಿಸಿದ್ದು
ಅಧೋಲೋಕದ ಹುಂಜಗಳ ಹಾಗೆ ಕೊರಳೆತ್ತಿ ಕೂಗಬಲ್ಲದ್ದು.
ಚಂದ್ರಕಾಂತಿಯ ತಿವಿತಕುದ್ದೀಪ್ತವಾಗಿ ಇದು ಮೂದಲಿಸೀತು ಕೂಗಿ
ನಿಜದ ಹಕ್ಕಿಗಳನ್ನು ಹೂವಿನೆಸಳುಗಳನ್ನು
ರಕ್ತದ್ದೊ ರೊಚ್ಚೆಯದೊ ಎಲ್ಲ ಗೋಜಲುಗಳನ್ನು
ಪರಿವರ್‍ತನೆಯೆ ಇರದ ಲೋಹವೈಭವದಲ್ಲಿ ಬೀಗಿ.

ಚಕ್ರವರ್‍ತಿಯ ಮಹಲ ನೃತ್ಯದಂಗಣದಲ್ಲಿ
ಅರಣಿ ಉದ್ದೀಪಿಸದ, ಉಕ್ಕು ಉರಿಹೊತ್ತಿಸದ, ಬಿರುಗಾಳಿ ಬಾಧಿಸದ,
ಜ್ವಾಲೆಯಿಂದಲೆ ಎದ್ದ ಜ್ವಾಲೆ ಜಿಗಿದಾಡುವುವು,
ಅಲ್ಲಿ ಬರುವುವು ರಕ್ತಸಂಜನಿತ ಜೀವಗಳು,
ಕೆರಳು ಮೊಳೆಸಿದ ತೊಡಕುಗಳನ್ನೆಲ್ಲ ನೀಗುವುವು,
ಲಯವಾಗಿ ನೃತ್ಯದಲಿ
ಸಮಾಧಿಯ ಮಧುರ ನೋವಿನಲಿ
ವಸ್ತ್ರದಂಚನ್ನು ಸಹ ಸುಡಲಾರದಂಥ ಜ್ವಾಲೆಯ ವೇದನೆಯಲ್ಲಿ

ಕೆಸರು ನೆತ್ತರ ಮಧ್ಯೆ ಡಾಲ್ಫಿನಿನ ಬೆನ್ನೇರಿ ಜೀವಗಳ ಸಾಲು,
ಸಾಲುಜೀವದ ಧಾರೆಯನ್ನು ಅಲ್ಲಲ್ಲೇ ಛೇದಿಸುವ ಕುಲುಮೆಗಳು,
ಚಕ್ರವರ್‍ತಿಯ ಗೃಹದ ಹೊನ್ನ ಕುಲುಮೆಗಳು!
ಒಡೆಯುತಿವೆ ಕೆರಳು ಮೂಡಿಸಿದ ಗೋಜಲುಗಳನ್ನು
ನೃತ್ಯದಂಗಣದ ಅಮೃತಶಿಲೆಯ ಹಾಸುಗಳು;
ಆ ಪ್ರತಿಮೆಗಳು ಅವುಗಳಿಂದ ಒಡಮೂಡುವ
ಬೇರೆ ಹೊಸ ಪ್ರತಿಮೆಗಳು,
ಆ ಡಾಲ್ಫಿನನ್ನು ಸೀಳಿರುವ, ಆ ಗಂಟೆದನಿ ಪೀಡಿಸುವ ಕಡಲುಗಳು.
*****
(೩೩) ಡಾಲ್ಫಿನ್ನಿನ ಬೆನ್ನೇರಿ: ಸತ್ತವರ ಜೀವಗಳು ಡಾಲ್ಫಿನ್ನಿನ ಬೆನ್ನು ಹತ್ತಿ ಪರಲೋಕಕ್ಕೆ ಬರುತ್ತವೆ ಎಂಬ ನಂಬಿಕೆ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...