ಬೈಜಾಂಟಿಯಮ್

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಸರಿಯುವ ಹಿಂದೆ, ಹಗಲಿನ ಅಶುದ್ಧ ಪ್ರತಿಮೆಗಳು;
ನಿದ್ರಿಸಿದ್ದಾರೆ ಚಕ್ರವರ್‍ತಿಯ ಮತ್ತ ಸೈನಿಕರು;
ಇರುಳ ದನಿಯನುರಣನ ಮೆಲ್ಲಮೆಲ್ಲಗೆ ಅಳಿದು
ದೊಡ್ಡ ಚರ್‍ಚಿನ ಗಂಟೆ ಬಡಿದು, ಗಾಳಿಯಲೀಗ
ರಾತ್ರಿಂಚರರ ಹಾಡು. ಚಿಕ್ಕಯೋ ಚಂದ್ರನೋ
ಹಚ್ಚಿಟ್ಟ ಧವಳಗುಮ್ಮಟ ತಿರಸ್ಕರಿಸುತಿದೆ ಮರ್‍ತ್ಯನ ಸಮಸ್ತವನ್ನೂ,
ಮರ್‍ತ್ಯ ಬಾಳಿನ ಎಲ್ಲ ಸಂಕೀರ್‍ಣತೆಗಳನ್ನು
ಮರ್‍ತ್ಯಧಮನಿಗಳ ರೊಚ್ಚೆ ರೋಷಗಳನ್ನು

ತುಯ್ಯುತಿದೆ ಕಣ್ಣ ಮುಂದೊಂದು ಪ್ರತಿಮೆ, ಮನುಷ್ಯನೋ ನೆರಳೋ,
ನೆರಳೆನ್ನುವುದೆ ಸರಿ, ನೆರಳಿಗಿಂತಲು ಪ್ರತಿಮೆ ಎಂದರಿನ್ನೂ ಸರಿ;
ಮಮ್ಮಿವಸ್ತ್ರದಲಿ ಹುಗಿದಿಟ್ಟ ಅಧೋಲೋಕದ ಆತ್ಮ
ಸುತ್ತಬೇಕಾದ ಪಥವ ಬಿಚ್ಚಬಹುದು;
ಉಸಿರಿರದ ತೇವವಿಲ್ಲದ ಬಾಯಿಯೊಂದು
ಉಸಿರು ಬಿಗಿಹಿಡಿದ ಬಾಯಿಗಳ ತನ್ನಲ್ಲಿಗೆ ಕರೆಸಬಹುದು;
ಅತಿಮಾನುಷಕ್ಕೆ ಉಘೇ ಎನ್ನುವವ ನಾನು;
ಬಾಳಿನಲ್ಲಿನ ಸಾವು, ಸಾವಿನಲ್ಲಿನ ಬಾಳು ಎನ್ನುವೆ ಅದನ್ನು

ಇದು ಪವಾಡವೆ, ಹಕ್ಕಿಯೆ, ಹೊನ್ನಿನಲಿ ಕೊರೆದ ಕುಶಲ ಕೈಕಸುಬೆ?
ಹಕ್ಕಿಗಿಂತ, ಹಸ್ತಕೌಶಲಕ್ಕಿಂತ ಇದು ದಿಟ ಪವಾಡವೆ,
ನಕ್ಷತ್ರದೀಪ್ತ ಚಿನ್ನದ ಕೊಂಬೆಮೇಲೆ ಇದು ನೆಟ್ಟು ನಿಲಿಸಿದ್ದು
ಅಧೋಲೋಕದ ಹುಂಜಗಳ ಹಾಗೆ ಕೊರಳೆತ್ತಿ ಕೂಗಬಲ್ಲದ್ದು.
ಚಂದ್ರಕಾಂತಿಯ ತಿವಿತಕುದ್ದೀಪ್ತವಾಗಿ ಇದು ಮೂದಲಿಸೀತು ಕೂಗಿ
ನಿಜದ ಹಕ್ಕಿಗಳನ್ನು ಹೂವಿನೆಸಳುಗಳನ್ನು
ರಕ್ತದ್ದೊ ರೊಚ್ಚೆಯದೊ ಎಲ್ಲ ಗೋಜಲುಗಳನ್ನು
ಪರಿವರ್‍ತನೆಯೆ ಇರದ ಲೋಹವೈಭವದಲ್ಲಿ ಬೀಗಿ.

ಚಕ್ರವರ್‍ತಿಯ ಮಹಲ ನೃತ್ಯದಂಗಣದಲ್ಲಿ
ಅರಣಿ ಉದ್ದೀಪಿಸದ, ಉಕ್ಕು ಉರಿಹೊತ್ತಿಸದ, ಬಿರುಗಾಳಿ ಬಾಧಿಸದ,
ಜ್ವಾಲೆಯಿಂದಲೆ ಎದ್ದ ಜ್ವಾಲೆ ಜಿಗಿದಾಡುವುವು,
ಅಲ್ಲಿ ಬರುವುವು ರಕ್ತಸಂಜನಿತ ಜೀವಗಳು,
ಕೆರಳು ಮೊಳೆಸಿದ ತೊಡಕುಗಳನ್ನೆಲ್ಲ ನೀಗುವುವು,
ಲಯವಾಗಿ ನೃತ್ಯದಲಿ
ಸಮಾಧಿಯ ಮಧುರ ನೋವಿನಲಿ
ವಸ್ತ್ರದಂಚನ್ನು ಸಹ ಸುಡಲಾರದಂಥ ಜ್ವಾಲೆಯ ವೇದನೆಯಲ್ಲಿ

ಕೆಸರು ನೆತ್ತರ ಮಧ್ಯೆ ಡಾಲ್ಫಿನಿನ ಬೆನ್ನೇರಿ ಜೀವಗಳ ಸಾಲು,
ಸಾಲುಜೀವದ ಧಾರೆಯನ್ನು ಅಲ್ಲಲ್ಲೇ ಛೇದಿಸುವ ಕುಲುಮೆಗಳು,
ಚಕ್ರವರ್‍ತಿಯ ಗೃಹದ ಹೊನ್ನ ಕುಲುಮೆಗಳು!
ಒಡೆಯುತಿವೆ ಕೆರಳು ಮೂಡಿಸಿದ ಗೋಜಲುಗಳನ್ನು
ನೃತ್ಯದಂಗಣದ ಅಮೃತಶಿಲೆಯ ಹಾಸುಗಳು;
ಆ ಪ್ರತಿಮೆಗಳು ಅವುಗಳಿಂದ ಒಡಮೂಡುವ
ಬೇರೆ ಹೊಸ ಪ್ರತಿಮೆಗಳು,
ಆ ಡಾಲ್ಫಿನನ್ನು ಸೀಳಿರುವ, ಆ ಗಂಟೆದನಿ ಪೀಡಿಸುವ ಕಡಲುಗಳು.
*****
(೩೩) ಡಾಲ್ಫಿನ್ನಿನ ಬೆನ್ನೇರಿ: ಸತ್ತವರ ಜೀವಗಳು ಡಾಲ್ಫಿನ್ನಿನ ಬೆನ್ನು ಹತ್ತಿ ಪರಲೋಕಕ್ಕೆ ಬರುತ್ತವೆ ಎಂಬ ನಂಬಿಕೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಡುತಾವ ನೆನಪುಗಳು – ೧೩
Next post ಕನ್ನಡ ತುತ್ತೂರಿ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…