Home / ಕವನ / ಅನುವಾದ / ಧೂರ್‍ತ ಒರಟು ಮುದುಕ

ಧೂರ್‍ತ ಒರಟು ಮುದುಕ

ಮೂಲ: ವಿಲಿಯಂ ಬಟ್ಲರ್ ಏಟ್ಸ್

‘ಹೆಣ್ಣುಗಳ ವ್ಯಾಮೋಹ ಇದೆಯೆಂತಲೇ ನನಗೆ
ಮಲೆಗಳಲ್ಲೂ ಇಂಥ ಮೋಹ’
ದೈವ ಕಳಿಸಿದ ಜಾಗದಲ್ಲಿ ಅಲೆಯುವ ಒರಟು
ಮುದುಕ ನುಡಿದನು ಹೀಗೆ ಮನವ.
“ಸಾಯಲಾರೆನೆ ನಾನು ಮನೆಯ ಚಾಪೆಯ ಮೇಲೆ
ಮುಚ್ಚು ಕಣ್ಣನು ನಿನ್ನ ಕೈಯಿಂದಲೇ,
ಆಕಾಶದಲ್ಲಿರುವ ಆ ಮುದುಕನಿಂದ ನಾ
ಇಷ್ಟನ್ನೆ ಕೇಳುವುದು ನಲ್ಲೆ’
– ಬೆಳಗಾಯ್ತು, ಮುಂಬತ್ತಿ ಮುಗಿಯಿತು.

‘ಏನು ಹಿತವೇ ಚಿನ್ನ ನಿನ್ನ ಮಾತುಗಳೆಲ್ಲ
ಉಳಿದಿದ್ದ ಕೊಡದೆ ಇರಬೇಡೇ;
ಹತ್ತ ಮುದುಕನ ರಕ್ತ ಯಾವಾಗ ಆರೀತೊ
ತಿಳಿಯಬಲ್ಲವರಾರು ಹೇಳೆ?
ಭಾರಿ ಪ್ರೀತಿಸುವಂಥ ಯಾವ ಯುವಕಗೂ ಇರದ
ಬೇರೇನೊ ಇದೆ ನನ್ನ ಒಳಗೆ
ಬಹಳವೆಂದರೆ ಆತ ಸೋಕಬಲ್ಲನು, ನಾನೊ
ಮಾತಿನಲೆ ಹೃದಯವನ್ನಿರಿವೆ?
-ಬೆಳಗಾಯ್ತು, ಮುಂಬತ್ತಿ ಮುಗಿಯಿತು.

ಬಗಲಲ್ಲಿ ದಪ್ಪದೊಣ್ಣೆಯ ಊರಿ ನಿಂತಿದ್ದ
ಧೂರ್‍ತ ಮುದುಕನಿಗಾಕೆ ನುಡಿದಳು:
‘ಪ್ರೇಮವನು ಕೊಡುವುದೋ, ಇಲ್ಲ ಹೋಗೆನ್ನುವುದೊ
ನನ್ನದಾಗಿಲ್ಲ ನಾ ಆಳು.
ಮುಗಿಲಮನೆ ಮುದುಕನಿಗೆ, ನಿನಗಿಂತ ಹಿರಿಯನಿಗೆ
ಕೊಟ್ಟು ಬಿಟ್ಟೆನೊ ಎಲ್ಲವನ್ನ
ಅವನ ಜಪಮಣಿ ಹಿಡಿದ ಬೆರಳಿಗಿಲ್ಲವೊ
ಬಿಡುವು ಮುಚ್ಚಲಾರವು ಅವು ಕಣ್ಣ’.
– ಬೆಳಗಾಯ್ತು ಮುಂಬತ್ತಿ ಮುಗಿಯಿತು.

‘ನಿನ್ನ ದಾರಿಯ ಹಿಡಿದು ಹೋಗೆ ಹಾಗೇ ಹೆಣ್ಣೆ
ನನ್ನ ಗುರಿಯೇ ಬೇರೆ ಇದೆಯೆ,
ಕಡಲ ದಂಡೆಯ ಮೇಲೆ ಕತ್ತಲಿನರ್‍ಥ ತಿಳಿದು
ಸುಳಿವ ಹುಡುಗಿಯರ ಗುಂಪಿದೆಯ,
ಮೀನುಗಾರರ ಕೂಡ ಪೋಲಿಮಾತಿನ ಲಲ್ಲೆ
ಬೆಸ್ತ ಚಿಣ್ಣರಿಗಾಗಿ ಕುಣಿತ,
ಕತ್ತಲಿಳಿಯಿತೊ ಕಡಲಮೇಲೆ ಹೆಣ್ಣುಗಳಿಗೆ
ಹಾಸಿಗೆಯ ಅರಳಿಸುವ ತವಕ,’
– ಬೆಳಗಾಯ್ತು ಮುಂಬಡ್ತಿ ಮುಗಿಯಿತು.

‘ಒಡ್ಡು ಮಾತಿನ ಮುದುಕ ನಾನು ಹಗಲಲ್ಲಷ್ಟೆ
ಕತ್ತಲಾಯಿತೊ ಗಟ್ಟಿಯುವಕ,
ಬೆಕ್ಕ ನಗಿಸಲು ಬಲ್ಲೆ, ಗುಟ್ಟ ಕೂಗಿಸಬಲ್ಲೆ
ಜಾಣನುಡಿಯಲಿ ತೆಗೆದು ಚಿಲಕ.
ಮೊಡವೆ ಮೂಡಿದ ಮುಖದ ಎಳೆಯ ನುಡಿಸುವನೇನೆ
ನೆಣದೊಳಗೆ ಹುದುಗಿರುವ ಹಾಡ?
ಬದಿಗೆ ಮಲಗಿದ್ದ ಮಾತ್ರಕ್ಕೆ ದಕ್ಕೀತೇನು
ಕಾಲಪಾತಾಳಗಳ ಗೂಢ?’
– ಬೆಳಗಾಯ್ತು ಮುಂಬತ್ತಿ ಮುಗಿಯಿತು.

‘ಹುಟ್ಟುಹಾಕಲು ಮುಂದೆ ಬಾಗಿರುವ ಅಂಬಿಗನೊ,
ಮಗ್ಗದಲಿ ಬಗ್ಗಿರುವ ನೇಯ್ಗೆಯವನೊ,
ಎದೆಸೆಟಿಸಿ ಕೂತ ಅಶ್ವಾರೋಹಿಯೋ ಅಥವ
ಬಸಿರಿನಲಿ ಮುದುಡಿ ಮಲಗಿರುವ ಶಿಶುವೊ,
ಮೇಲಕೊಯ್ಯುವ ದಾರಿ ಹಿಡಿದವರೆ ಆಗಿರಲಿ
ಕೆಳನೆಲೆಯಲುಳಿದಂಥ ತೃಪ್ತರಿರಲಿ,
ನೋವಿನಲೆ ಬಾಳುವರು ಎಲ್ಲ ಮಾನವರೂ
ನನ್ನಂಥ ಕೆಲವರೇ ಇದ ಬಲ್ಲರು.’
– ಬೆಳಗಾಯ್ತು, ಮುಂಬತ್ತಿ ಮುಗಿಯಿತು.

‘ಬಲ್ಲ ಜನ ಯಾರೂ ಅಲ್ಲಗಳೆಯುವುದಿಲ್ಲ
ಮುಗಿಲಿನೊಳಗಿರುವ ಆ ಮುದುಕ
ಮಿಂಚಿನ ಧಾರೆ ಕಳಿಸಿ ಯಾತನೆಯ ಹರಿಸುವನು
ಎಂಬ ನಂಬಿಕೆಯ ಹಳೆಮಾತ.
ಆದರೂ ನಾ ಮಾತ್ರ ಬಲು ಒರಟು ಮುದುಕನೇ,
ನನಗಿರಲಿ ಎರಡನೆಯ ದಾರಿ,
ಹೆಣ್ಣಿನೆದೆ ಮೇಲೊರಗಿ ಮಲಗುವೆನು ಹಾಯಾಗಿ
ಯಾತನೆಯ ಮರವೆಯಲಿ ಹೂಳಿ.’
– ಬೆಳಗಾಯ್ತು, ಮುಂಬತ್ತಿ ಮುಗಿಯಿತು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...