Home / ಲೇಖನ / ವಿಜ್ಞಾನ / ಪರಿಸರ ಮಾಲಿನ್ಯವಿಲ್ಲದ ಸೌರಶಕ್ತಿಕಾರು (ನೂತನ ಪ್ರಯೋಗ)

ಪರಿಸರ ಮಾಲಿನ್ಯವಿಲ್ಲದ ಸೌರಶಕ್ತಿಕಾರು (ನೂತನ ಪ್ರಯೋಗ)

ಬೆಂಗಳೂರಿನ ಅಜಾದ್ ನಗರದ ವಾಸಿ ಸೈಯ್ಯದ್ ಅಹಮ್ಮದ್ ಅವರಿಗೆ ಸೌರಶಕ್ತಿಯಲ್ಲಿ ಗಾಡಿ ಓಡಿಸುವ ಬಯಕೆಯ ತೀವ್ರತೆಯಿಂದಾಗಿ ಕಳೆದ ೩೦ ವರ್‍ಷಗಳ ಸತತ ಪ್ರಯತ್ನದ ಫಲವಾಗಿ ಸೌರಶಕ್ತಿಯಿಂದ ಕಾರು, ಮೂರುಚಕ್ರ, ದ್ವಿಚಕ್ರ ವಾಹನಗಳನ್ನು ಆರಾಮವಾಗಿ ಒಡಿಸಬಹುದೆಂದು ಸಾಬೀತು ಪಡಿಸಿದ್ದಾರೆ. (ಕಡಿಮೆ ವ್ಯಚ್ಚದಲ್ಲಿ) ವೃತ್ತಿಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮಾರಾಟ ಮಾಡುತ್ತಿರುವ ಅಹಮ್ಮದ್ ಏನನ್ನಾದರೂ ಸಾಧಿಸಬೇಕೆಂಬ ಛಲವುಳ್ಳವರು. ತಮ್ಮ ಕೈಗೆ ಸಿಕ್ಕ ವಸ್ತುಗಳನ್ನು (ಉಪಕರಣ) ಬಳಸಿಕೊಂಡು, ಅದಕ್ಕೊಂದು ರೂಪನೀಡಿ ಸೂರ್ಯನ ಶಾಖಾವನ್ನು ಹಾಯಿಸಿ ಪರಿಸರ ಪ್ರೇಮಿ ಕಾರೊಂದನ್ನು ಕೊನೆಗೂ ಸಿದ್ಧಪಡಿಸಿದರು. ಈ ಕಾರಿಗೆ ಇವರು ಖರ್ಚು ಮಾಡಿರುವುದು ಕೇವಲ ೫೦ ಸಾವಿರ ರೂಪಾಯಿಗಳು ಮಾತ್ರ. ಸೌರಶಕ್ತಿ ಚಾಲಿತ ಈ ಕಾರು ೩೨೫ ಕೆ.ಜಿ. ತೂಗುತ್ತದೆ. ಮೋಡ ಸೂರ್ಯನನ್ನು ಮುಚ್ಚಿಕೊಂಡ ಸಂದರ್ಭದಲ್ಲಿಯೂ ಕಾರುಕೆಡದೆಂಬ ಆತಂಕ ಪಡಬೇಕಿಲ್ಲ ಈ ಕಾರಿಗೆ ವಿಶೇಷ ಬ್ಯಾಟರಿ ವ್ಯವಸ್ಥೆಯನ್ನು ಮಾಡಲಾಗಿದೆ. ಒಮ್ಮೆ ಬ್ಯಾಟ್ರಿ ಚಾರ್ಜ್ ಮಾಡಿದರೆ ನೂರು ಕಿ.ಮೀ. ಗಾಡಿ ಓಡಿಸಬಹುದು.

ಈ ಕಾರು ಇತರೆ ಕಾರುಗಳಂತೆ ಸದ್ದು ಮಾಡುವುದಿಲ್ಲ ಹೊಗೆಯನ್ನು ಉಗಳುವುದೇ ಇಲ್ಲ ಗೇರು ಬದಲಿಸುವ ಗೊಂದಲ ಇಲ್ಲ. ಗಾಡಿಹತ್ತಿ ಸೀದಾ ಸ್ಟೇರಿಂಗ್ ತಿರುಗಿಸುತ್ತ ಹೋಗುವುದಷ್ಟೇ ಕೆಲಸ. ಈಗಾಗಲೇ ಬೆಂಗಳೂರಿನ ಸುತ್ತಮುತ್ತ ಎಲ್ಲಿಯೂ ಕೈ ಕೊಡದ ಈ ಕಾರು ಯಶಸ್ವಿಯಾಗಿದೆ. ಬಡವರಿಗೆ ಕೈ ಗೆಟಕುವ ಬೆಲೆಯಲ್ಲಿ ಸಿಗುವ ಈ ಕಾರು ಶ್ರೀಮಂತರಿಗೆ ಮಾಲಿನ್ಯ ರಹಿತ ಈ ಕಾರನ್ನು ಓಡಿಸುವಾಗ ತೃಪ್ತಿಯನ್ನು ನೀಡುತ್ತದೆ. ಪರಿಸರ ಮಾಲಿನ್ಯವಿಲ್ಲದೇ ಕೇವಲ ಸೌರಶಕ್ತಿಯಿಂದಲೇ ನಡೆಯುವ ಈ ಕಾರು ಪರಿಸರವಾದಿಗಳಿಗೆಲ್ಲ ಅತ್ಯಂತ ಅಚ್ಚು ಮೆಚ್ಚಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...