Home / ಲೇಖನ / ವಿಜ್ಞಾನ / ಪರಿಸರ ಮಾಲಿನ್ಯವಿಲ್ಲದ ಸೌರಶಕ್ತಿಕಾರು (ನೂತನ ಪ್ರಯೋಗ)

ಪರಿಸರ ಮಾಲಿನ್ಯವಿಲ್ಲದ ಸೌರಶಕ್ತಿಕಾರು (ನೂತನ ಪ್ರಯೋಗ)

ಬೆಂಗಳೂರಿನ ಅಜಾದ್ ನಗರದ ವಾಸಿ ಸೈಯ್ಯದ್ ಅಹಮ್ಮದ್ ಅವರಿಗೆ ಸೌರಶಕ್ತಿಯಲ್ಲಿ ಗಾಡಿ ಓಡಿಸುವ ಬಯಕೆಯ ತೀವ್ರತೆಯಿಂದಾಗಿ ಕಳೆದ ೩೦ ವರ್‍ಷಗಳ ಸತತ ಪ್ರಯತ್ನದ ಫಲವಾಗಿ ಸೌರಶಕ್ತಿಯಿಂದ ಕಾರು, ಮೂರುಚಕ್ರ, ದ್ವಿಚಕ್ರ ವಾಹನಗಳನ್ನು ಆರಾಮವಾಗಿ ಒಡಿಸಬಹುದೆಂದು ಸಾಬೀತು ಪಡಿಸಿದ್ದಾರೆ. (ಕಡಿಮೆ ವ್ಯಚ್ಚದಲ್ಲಿ) ವೃತ್ತಿಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮಾರಾಟ ಮಾಡುತ್ತಿರುವ ಅಹಮ್ಮದ್ ಏನನ್ನಾದರೂ ಸಾಧಿಸಬೇಕೆಂಬ ಛಲವುಳ್ಳವರು. ತಮ್ಮ ಕೈಗೆ ಸಿಕ್ಕ ವಸ್ತುಗಳನ್ನು (ಉಪಕರಣ) ಬಳಸಿಕೊಂಡು, ಅದಕ್ಕೊಂದು ರೂಪನೀಡಿ ಸೂರ್ಯನ ಶಾಖಾವನ್ನು ಹಾಯಿಸಿ ಪರಿಸರ ಪ್ರೇಮಿ ಕಾರೊಂದನ್ನು ಕೊನೆಗೂ ಸಿದ್ಧಪಡಿಸಿದರು. ಈ ಕಾರಿಗೆ ಇವರು ಖರ್ಚು ಮಾಡಿರುವುದು ಕೇವಲ ೫೦ ಸಾವಿರ ರೂಪಾಯಿಗಳು ಮಾತ್ರ. ಸೌರಶಕ್ತಿ ಚಾಲಿತ ಈ ಕಾರು ೩೨೫ ಕೆ.ಜಿ. ತೂಗುತ್ತದೆ. ಮೋಡ ಸೂರ್ಯನನ್ನು ಮುಚ್ಚಿಕೊಂಡ ಸಂದರ್ಭದಲ್ಲಿಯೂ ಕಾರುಕೆಡದೆಂಬ ಆತಂಕ ಪಡಬೇಕಿಲ್ಲ ಈ ಕಾರಿಗೆ ವಿಶೇಷ ಬ್ಯಾಟರಿ ವ್ಯವಸ್ಥೆಯನ್ನು ಮಾಡಲಾಗಿದೆ. ಒಮ್ಮೆ ಬ್ಯಾಟ್ರಿ ಚಾರ್ಜ್ ಮಾಡಿದರೆ ನೂರು ಕಿ.ಮೀ. ಗಾಡಿ ಓಡಿಸಬಹುದು.

ಈ ಕಾರು ಇತರೆ ಕಾರುಗಳಂತೆ ಸದ್ದು ಮಾಡುವುದಿಲ್ಲ ಹೊಗೆಯನ್ನು ಉಗಳುವುದೇ ಇಲ್ಲ ಗೇರು ಬದಲಿಸುವ ಗೊಂದಲ ಇಲ್ಲ. ಗಾಡಿಹತ್ತಿ ಸೀದಾ ಸ್ಟೇರಿಂಗ್ ತಿರುಗಿಸುತ್ತ ಹೋಗುವುದಷ್ಟೇ ಕೆಲಸ. ಈಗಾಗಲೇ ಬೆಂಗಳೂರಿನ ಸುತ್ತಮುತ್ತ ಎಲ್ಲಿಯೂ ಕೈ ಕೊಡದ ಈ ಕಾರು ಯಶಸ್ವಿಯಾಗಿದೆ. ಬಡವರಿಗೆ ಕೈ ಗೆಟಕುವ ಬೆಲೆಯಲ್ಲಿ ಸಿಗುವ ಈ ಕಾರು ಶ್ರೀಮಂತರಿಗೆ ಮಾಲಿನ್ಯ ರಹಿತ ಈ ಕಾರನ್ನು ಓಡಿಸುವಾಗ ತೃಪ್ತಿಯನ್ನು ನೀಡುತ್ತದೆ. ಪರಿಸರ ಮಾಲಿನ್ಯವಿಲ್ಲದೇ ಕೇವಲ ಸೌರಶಕ್ತಿಯಿಂದಲೇ ನಡೆಯುವ ಈ ಕಾರು ಪರಿಸರವಾದಿಗಳಿಗೆಲ್ಲ ಅತ್ಯಂತ ಅಚ್ಚು ಮೆಚ್ಚಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...