Home / ಲೇಖನ / ಇತರೆ / ಮಾಟಗಾತಿಯರ ಕತೆ

ಮಾಟಗಾತಿಯರ ಕತೆ

ಮುದ್ದು ಪುಟಾಣಿಗಳೆ.. ನೀವೆಲ್ಲ ಮಾಟಗಾತಿಯರ ಬಗ್ಗೆ ಈಗಾಗಲೇ ಓದಿರಬಹುದು. ಕಂಡಿರಲೂಬಹುದು, ಕೇಳಿರಲೂ ಬಹುದು.

ನೀವೆಲ್ಲ.. ಜಾರ್‍ಖಂಡ ರಾಜ್ಯದ ಹೆಸರನ್ನು ಕೇಳಿರಬಹುದು. ಅಲ್ಲಿ ರಾಂಚಿ ಎಂಬ ಪಟ್ಟಣವಿದೆ. ಅಲ್ಲೇ ಸಮೀಪದಲ್ಲೇ ಮಂದರ್ ಎಂಬ ಪುಟ್ಟ ಗ್ರಾಮವಿದೆ. ಇದು ರಾಂಚಿಯಿಂದ ಸುಮಾರು ನಲವತ್ತು ಕಿಲೋಮೀಟರ್ ದೂರದಲ್ಲಿದೆ. ಅಂದರೆ ಅದೊಂದು ಕುಗ್ರಾಮ ತೀರಾ ಹಿಂದುಳಿದ ಸಣ್ಣದೊಂದು ಹಳ್ಳಿ.

ಅಲ್ಲಿ ಒಬ್ಬರಲ್ಲ! ಐದು ಜನ ಮಾಟಗಾತಿಯರು…! ಅಬ್ಬಾ! ಒಬ್ಬರಿದ್ದರೆ ತಡೆಯಲಾಗುವುದಿಲ್ಲ. ಇನ್ನು ಐದು ಜನರೆಂದರೆ ಜನ ಹೌಹಾರಿ ಬಿಟ್ಟರು.

ಮಂದರ್ ಗ್ರಾಮದ ತುಂಬೆಲ್ಲ ಇವರದೇ ಉಪಟಳ, ಮನೆಯಲ್ಲಿನ ಹಾಲು ಇಂಗಿ ಹೋಗುವುದು. ಮಕ್ಕಳಿಗೆ ಸುಸ್ತಾಗಿ ಸಾಯುವುದು, ದೊಡ್ಡವರಿಗೆ ಕೈಕಾಲು ಬಿದ್ದೋಗುವುದು. ಮನೆಯಲ್ಲಿನ ಜೀವ ದನಗಳು ಸಾಯುವುದು. ಒಂದೇ ಎರಡೇ ನಿತ್ಯ ಹತ್ತಾರು ಜನರಿಗೆ ಈ ಮಾಟಗಾತಿಯರು ಮಾಟ ಮಾಡಿಸಿದ್ದೇ ಮಾಡಿಸಿದ್ದು!

ಇನ್ನು ಹೆಣ್ಣು ಮಕ್ಕಳಿಗೆ ಮದುವೆಯಾಗದಂತೆ, ಗಂಡು ಅವರ ಮನೆಗೆ ಬರದಂತೆ ಮಾಡುವುದು, ಋತುಮತಿಯಾಗದಂತೆ ಮಾಡುವುದು, ಹುಚ್ಚಿಯಾಗಿಸುವುದು, ಮನೆಬಿಟ್ಟು ಓಡಿ ಹೋಗುವಂತೆ, ಮನೆಯಲ್ಲಿ ಯಂತ್ರ, ಮಂತ್ರ, ನಿಂಬೆಹಣ್ಣು ಗೊಂಬೆ ಮಾಡಿ ಇಡುವುದು! ನಿತ್ಯ ಜಗಳ, ಹೊಡೆದಾಟ ಬಡಿದಾಟ ನ್ಯಾಯಾ ಪಂಚಾಯ್ತಿ ಬೆಳೆ ಹಾನಿ ನೀರಿಲ್ಲದಂತೆ ಮಾಟ ಮಾಡಿಸುವುದು ಸಾಗಿಯೇ ಇತ್ತು.

ಜನರು ರೋಸಿ ಹೋಗಿದ್ದರು. ಗ್ರಾಮದಲ್ಲಿ ಉಸಿರು ಗಟ್ಟಿಸುವ ವಾತಾವರಣವಿತ್ತು.

ದಿನಾಂಕ ೦೭-೦೮-೨೦೧೫ರಂದು ಶುಕ್ರವಾರ ತಡರಾತ್ರಿ ಮಾಟ ಮಾಡುತ್ತಿದ್ದ ಐವರ ಮನೆಗೆ ನುಗ್ಗಿದ ಗ್ರಾಮಸ್ಥರು ಅವರನ್ನು ಧರಧರನೆ ಹೊರಗೆ ಎಳೆದು ದೊಣ್ಣೆ, ಕಲ್ಲು, ಕಬ್ಬಿಣದ ರಾಡ್, ಬಡಿಗೆ ಕಟ್ಟಿಗೆಗಳಿಂದ ನಾಯಿಗೆ ಬಡಿದಂತೆ ಚೆಂದ ಮಾಡಿ ಬಡಿದು ಬಡಿದು ಕೊಂದಿದ್ದಾರೆ.

ದಿನಾಂಕ ೦೮-೦೮-೨೦೧೫ರಂದು ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಆ ಐವರ ಶವಗಳನ್ನು ವಶಕ್ಕೆ ಪಡೆದುಕೊಂಡು ಶವ ಪರೀಕ್ಷೆಗೆ ಕಳಿಸಿದರು.

– ಹೀಗೆ ಜಾರ್‍ಖಂಡ್‌ನಲ್ಲಿ ಒಟ್ಟು ಈಗಾಗಲೇ ೭೫೦ ಜನ ಮಹಿಳೆಯರನ್ನು ಮಾಟಗಾತಿಯರೆಂಬ ಆರೋಪ, ಶಂಕೆ, ಅನುಮಾನಾಸ್ಪದದ ಮೇಲೆ, ಹೀಗೆ ಕೊಂದಿರುವರು.

ನಮ್ಮಲ್ಲಿ ಹಳ್ಳಿಗಳಲ್ಲಿ – ಪಟ್ಟಣಗಳಲ್ಲಿ – ಹೀಗೆ ಮಾಟಗಾರರು ಮಾಟಗಾತಿಯರಿದ್ದಾರೆ! ಅವರ ಬಗ್ಗೆ ಪೊಲೀಸ್ಸರಿಗೆ ದೂರು ನೀಡಬಹುದಾಗಿದೆ. ಸುಮ್ಮನೆ ನೋಡಿ, ಕೇಳಿ, ಓದಿ ಸುಮ್ಮನಿರಬೇಡಿ…
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...