Home / ಲೇಖನ / ಇತರೆ / ನವಿಲುಗರಿ..

ನವಿಲುಗರಿ..

* ಹಲವರು ನಡೆದು ನಡೆದು ದಾರಿ.

* ಸಿನಿಮಾ ನಟರಾಗುವ ಗುರಿ ಹೊಂದಿ, ಅದಕ್ಕಾಗಿ ಇಂದಿನಿಂದಲೇ ಒಳ್ಳೆಯ ಮೈಕಟ್ಟು, ಮಾತು, ಹಾಸ್ಯ, ಅನುಕರಣೆ ಇತ್ಯಾದಿ ಅಭ್ಯಾಸ ಮಾಡಿ.

* ಹಸಿಶುಂಠಿ, ಒಣ ಶುಂಠಿಯಿಂದ ಆರೋಗ್ಯ, ಸೌಂದರ್‍ಯ ವೃದ್ಧಿಗಾಗಿ, ನಿತ್ಯ ಆಹಾರದಲ್ಲಿ ಬಳಸಿ.

* ತಿರುಪತಿ ತಿಮ್ಮಪ್ಪನ ಹೆಸರಿನಲ್ಲಿ ೫,೫೦೦ ಕೇಜಿ ಚಿನ್ನವಿದೆ. ಅದನ್ನು ವಿವಿಧ ಬ್ಯಾಂಕಿನಲ್ಲಿಟ್ಟಿರುವರು. ವರ್ಷಕ್ಕೆ ೮೦ ಕೇಜಿ ಚಿನ್ನ ಬಡ್ಡಿಯಾಗಿ ಬರುವುದು.

* ಕ್ರಿಸ್ತ ಶಕ ೫ನೆಯ ಶತಮಾನದಲ್ಲಿ ಚೀನಾದ ತತ್ವಜ್ಞಾನಿಗಳಾದ ಗೊಂಗುಬನ್ (ಲುಬನ್) ಮೋದಿ (ಮೋಝಿ) ಅವರು ಗಾಳಿ ಪಟವನ್ನು ಕಂಡು ಹಿಡಿದರು.

* ಶುಂಠಿ ಸುವಾಸನೆ, ರುಚಿ, ಹಸಿವು ವೃದ್ಧಿಸುವುದು.

* ದಿನಾಂಕ ೦೨-೦೮-೧೭೧೫ರಂದು ಪ್ರಸಾದವೆಂದು ಲಡ್ಡು ನೀಡುವ ಸಂಪ್ರದಾಯವು ತಿರುಪತಿ ದೇವಸ್ಥಾನದಲ್ಲಿ ಮೊದಲಾಯಿತು. ಈ ಸಂಪ್ರದಾಯಕ್ಕೆ ಈಗ ೩೦೦ ವರ್ಷಗಳು ವರ್ಷಕ್ಕೆ ಬರೀ ಲಡ್ಡಿನಿಂದಲೇ ೧೯೦ ಕೋಟಿ ರೂಪಾಯಿ ಬರುತ್ತಿದೆ.

* ಕನ್ನಡಕ್ಕೊಬ್ಬರೇ ಕೈಲಾಸಂ ಅವರು ದಿನಾಂಕ ೨೯-೦೭-೧೮೮೫ರಂದು ಮೈಸೂರಿನಲ್ಲಿ ಹುಟ್ಟಿದರು. ಇವರ ತಂದೆ-ತಮಿಳುನಾಡಿನ ಜಸ್ಟೀಸ್ ತ್ಯಾಗರಾಜ ಪರಮಶಿವ ಅಯ್ಯರ್, ತಾಯಿ- ಕಮಲಮ್ಮ.

* ಒಣ ಶುಂಠಿ ಹಾಲಿನಲ್ಲಿ ಹಾಕಿ ಕುದಿಸಿ, ಬೆಲ್ಲದೊಂದಿಗೆ ಕಲಿಸಿ ನಿತ್ಯ ಕುಡಿಯುವುದರಿಂದ ಗಂಟಲು ನೋವು, ಕೆಮ್ಮು, ಕಫ, ನಿವಾರಣೆಯಾಗುವುದು.

* ಕಳ್ಳಿ ಗಿಡಕ್ಕೆ ಎಲೆಗಳಿಲ್ಲ!

* ಸೋಡಿಯಂನಿಂದ ಕಂದು- ಕಬ್ಬಿಣದಿಂದ ಕೆಂಪು ಬಣ್ಣ ಪೊಟಾಸಿಯಂನಿಂದ ಹಳದಿ- ಮ್ಯಾಂಗನೀಸ್‌ನಿಂದ ಗುಲಾಬಿ ಬಣ್ಣ… ಹೀಗೆ ವಿವಿಧ ಬಣ್ಣಗಳಿಂದ ಶಿಲೆಗಳು ರೂಪುಗೊಳ್ಳಲಿದೆ.

* ಆಲ್ಬೇನಿಯಾದಲ್ಲಿ ಶೇಕಡ ೭೦% ರಷ್ಟು ಟರ್‍ಕಿಯಲ್ಲಿ ಶೇಕಡ ೯೮% ರಷ್ಟು ಮುಸ್ಲಿಮರಿದ್ದಾರೆ. ಇವು ಎರಡು ದೇಶಗಳೂ ಯುರೋಪ್‌ನಲ್ಲಿವೆ.

* ಜನಪ್ರಿಯ ಹಾಡುಗಾರ ಮನ್ನಾಡೆ ದಿನಾಂಕ ೦೧-೦೫-೧೯೧೯ ರಲ್ಲಿ ಕೋಲ್ಕತ್ತದಲ್ಲಿ ಜನಿಸಿದರು. ಇವರ ಹೆಸರು- ಪ್ರಬೋಧ ಚಂದ್ರ ಅಡ್ಡ ಹೆಸರು- ಮನ್ನಾ ಎಂದು. ೩,೫೦೦ ಹಾಡುಗಳನ್ನು ಸಿನಿಮಾದಲ್ಲಿ ಹಾಡಿದ್ದಾರೆ. ೨೦೦೭ರಲ್ಲಿ ಇವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿತು. “ಜಿಮೊನೆರ್ ಜುಲ್ಲಾ ಘೋರೆ” ಎನ್ನುವುದು ಇವರ ಬಂಗಾಳಿ ಆತ್ಮಕಥೆ ಇದನ್ನು “ಮೆಮೊರೀಸ್ ಕಮ್ ಆಲೈವ್” ಎಂದು ಇಂಗ್ಲೀಷ್‌ಗೆ ಅನುವಾದಗೊಂಡಿದೆಯಲ್ಲದೆ ಹಿಂದಿ-ಮರಾಠಿಗೂ ಅನುವಾದವಾಗಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...