Home / ಕಥೆ / ಆತ್ಮ ಕಥೆ / ಕಾಡುತಾವ ನೆನಪುಗಳು – ೩೨

ಕಾಡುತಾವ ನೆನಪುಗಳು – ೩೨

ನನಗೂ ವಯಸ್ಸಾಯ್ತಲ್ಲ ಚಿನ್ನು… ಜೊತೆಗೆ ಈ ಮಾನಸಿಕ ‘ಖಿನ್ನತೆ’ ಬೇರೆ… ಹೀಗಾಗಿ ನಾನೆಲ್ಲೂ ಹೋಗುವುದೇ ಇಲ್ಲ. ಹೊರಗೊಂದು ಪ್ರಪಂಚವೊಂದಿದೆ ಎಂಬುದನ್ನು ಮರೆಯಲು ಯತ್ನಿಸುತ್ತಿದ್ದೇನೆ… ಯಾರಾದರೂ ನೋಡಲು ಮಾತನಾಡಲು ಬರುತ್ತಾರೆಂದರೆ, ನಾನು ಮುಖ ತಪ್ಪಿಸಿಕೊಳ್ಳುತ್ತೇನೆ. ಈಗ ನನಗೆ ಒಂಟಿತನದ ಭೂತದ ಭಯವಿಲ್ಲ… ನಾನೇ ಅದರೊಳಗೆ ಸೇರಿಕೊಂಡುಬಿಟ್ಟಿದ್ದೇನೆ. ಕೆಳಗಿನ ದೊಡ್ಡಮನೆ ಅವ್ವನ ನೆನಪುಗಳಿಂದ ತುಂಬಿರುವುದರಿಂದ, ತಾರಸಿಯ ಮೇಲೊಂದು ರೂಮು ಕಟ್ಟಿಸಿಕೊಂಡು, ನನ್ನ ಲೈಬ್ರರಿ, ಅವಶ್ಯಕತೆಗಳಿರುವ ಪಾತ್ರೆಗಳೊಂದಿಗೆ Shift ಆಗಿದ್ದೇನೆ. ನನಗೀಗ ಅರಮನೆಯೂ ಈ ಪುಟ್ಟ ಗೂಡು ಒಂದೇ ಆಗಿದೆ. ಆಮೆ ಚಿಪ್ಪಿನೊಳಗೆ ಅಡಗಿಕೊಳ್ಳುವಂತೆ ನನ್ನ ‘ಖಿನ್ನತೆ’ಯ ಚಿಪ್ಪಿನೊಳಗೆ ಅಡಗಿಕೊಂಡಿದ್ದೇನೆ.

ಇನ್ನೇನು ನಿನ್ನ ಮೆಡಿಕಲ್ ಕೋರ್ಸ್ ಮುಗಿಯುತ್ತಾ ಬಂದಿತಲ್ವಾ? ಡಾಕ್ಟರಾಗುವ ನಿನ್ನ ತಾಯಿ-ತಂದೆಯ ನಿನ್ನ ಕನಸು ನನಸಾಗಿದ್ದು, ನನಗೆ ನೆಮ್ಮದಿ, ಸಂತೋಷ ತಂದಿತೆ ಇಷ್ಟೆಲ್ಲಾ ಬರೆದು ತಲೆಕೆಡಿಸಿದೇಂತ ಭಾವಿಸಬೇಡಾ. ನೀನು ಪ್ರಬುದ್ಧ ಹುಡುಗಿ, ತರ್ಕಬದ್ಧವಾಗಿ ಯೋಚಿಸುತ್ತೀಯಾ… ಜಾಣೆ ಕೂಡಾ. ಸಾವು-ಹುಟ್ಟು ನಮ್ಮ ಕೈಲಿಲ್ಲ. ಆದರೆ ಬದುಕು ನಮ್ಮದು… ನಾವೇ ಕಟ್ಟಿಕೊಳ್ಳಬೇಕೆಂದು ಎಲ್ಲರೂ ಬುದ್ದಿ ಹೇಳುತ್ತಾರೆ. ಆದರದು ತುಂಬಾ ಕಷ್ಟ, ಕಠಿಣ ಕಣೆ…! ಬೇವಿನ ಮರದ ಬುಡಕ್ಕೆ ನೀನೂ ದಿನವೂ ಬೆಲ್ಲದ ನೀರು ಸುರಿದು ಬೆಳೆಸಿದರೂ, ದೊಡ್ಡದಾದ ಮೇಲೆ ಅದು ಕೊಡುವುದು, ಬೇವಿನ ಹಣ್ಣನ್ನೇ ಮಾವಿನ ಹಣ್ಣನಲ್ಲ. ನನ್ನನ್ನು ಕಾಡಿದ್ದು ನನ್ನ ವ್ಯಕ್ತಿತ್ವ, ಇದರಲ್ಲಿ ಆನುವಂಶೀಯತೆಯೂ ಕಾರಣವಾಗಿರುತ್ತದೆ. ಆದರೆ ನಾವುಗಳು ಶಿಲೆಯನ್ನು ಉಳಿಯಿಂದ ಕೆತ್ತಿ-ಕೆತ್ತಿ ಸುಂದರ ಮೂರ್ತಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅದೇ ಬದುಕು ಕಟ್ಟಿಕೊಳ್ಳುವ ರೀತಿ ಮಗಳೇ. ಕೆಟ್ಟವುಗಳನ್ನೆಲ್ಲಾ ವರ್ಜಿಸಿ, ಅಧ್ಯಯನ, ಒಳ್ಳೆಯ ಗೆಳತಿಯರು, ಸಜ್ಜನರ ಸಂಗದಿಂದ ನಮ್ಮ ವ್ಯಕ್ತಿತ್ವವನ್ನು ತಿದ್ದಿಕೊಳ್ಳಬಹುದು. ಆದರೆ ನಾನು ಹಾಗೆ ಮಾಡಲಿಲ್ಲ. ಆನೇ ನಡೆದಿದ್ದೇ ದಾರಿಯೆಂಬಂತೆ ನಡೆದಿದ್ದೇನೋ… ಏನೋ… ನಂಗೆ ಗೊತ್ತಿಲ್ಲ…!

ಒಳ್ಳೆಯ ಬದುಕು ಕಟ್ಟಿಕೊಳ್ಳಲು ‘ಡಿಗ್ರಿ’ಗಳು ಬೇಕಾಗಿಲ್ಲ ಚಿನ್ನು. ಜಾಣತನ, ಸಮಯಸ್ಫೂರ್ತಿ, ಸಂಯಮ, ಸಮತೋಲನ, ದೂರದೃಷ್ಟಿ ಮುಖ್ಯವಾಗುತ್ತದೆ. ಅರೇ ನನಗಿರಲಿಲ್ಲಾಂತ ಅನ್ನಿಸುತ್ತದೆ. ಭಾವನೆಗಳೊಂದಿಗೇ ಬದುಕಲು ಆಗದು ಎಂಬುದಕ್ಕೆ ನಾನೇ ಉದಾಹರಣೆ. ತಿರಸ್ಕೃತಳಾಗಿ, ಶಾಪಗ್ರಸ್ತಳಂತೆ, ಬದುಕಿದ ನನ್ನ ಬದುಕೂ ಒಂದು ಬದುಕೇ?

ಏನೂ ಬೇಕೆನ್ನಿಸುವುದಿಲ್ಲ. ಕಾಲನೇಮಿಯ ಕರೆಗಾಗಿ ಕಾಯುತ್ತಾ ಇದ್ದೇನೆ. ಹೋಗಲಿ ಬಿಡು… ನನ್ನ ಬಗ್ಗೆ ತಲೆ ಕೆಡಿಸಿಕೊಳ್ಳಬೇಡ. ನಾನು ನನ್ನಂತೆಯೇ ಆರಾಮವಾಗಿದ್ದೇನೆ. ನಿರ್ಭಾವುಕೆ, ನಿರ್ಲಿಪ್ತತೆಯ ಹೊದಿಕೆಯನ್ನು ಹೊದ್ದು ಬದುಕಿದ್ದೇನೆ. ಕಳೆದುಕೊಳ್ಳಲೂ ಏನೂ ಇಲ್ಲ. ಪಡೆದುಕೊಳ್ಳುವಂತಹುದೂ ಯಾವುದೂ ಇಲ್ಲ. ಅಂತಹ ನಿರೀಕ್ಷೆಗಳೂ ಉಳಿದಿಲ್ಲ ಮಗಳೇ.

ಇನ್ನು… ಸಾಕು… ನಿಲ್ಲಿಸುತ್ತೇನೆ. ಬದುಕಿನಲ್ಲಿ ಹೆಕ್ಕಿ ತೆಗೆದ ಕಾಡುತ್ತಿರುವ ನೆನಪುಗಳು. ಅವುಗಳು ನನ್ನವು… ನಿನ್ನವಾಗಬಾರದೆಂದು,

ಹಾರೈಸುವ…

ನಿನ್ನ ಅವ್ವಾ
ಮುಗಿಯಿತು

ಚಿತ್ರಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...