Home / ಕಥೆ / ಆತ್ಮ ಕಥೆ / ಕಾಡುತಾವ ನೆನಪುಗಳು – ೩೨

ಕಾಡುತಾವ ನೆನಪುಗಳು – ೩೨

ನನಗೂ ವಯಸ್ಸಾಯ್ತಲ್ಲ ಚಿನ್ನು… ಜೊತೆಗೆ ಈ ಮಾನಸಿಕ ‘ಖಿನ್ನತೆ’ ಬೇರೆ… ಹೀಗಾಗಿ ನಾನೆಲ್ಲೂ ಹೋಗುವುದೇ ಇಲ್ಲ. ಹೊರಗೊಂದು ಪ್ರಪಂಚವೊಂದಿದೆ ಎಂಬುದನ್ನು ಮರೆಯಲು ಯತ್ನಿಸುತ್ತಿದ್ದೇನೆ… ಯಾರಾದರೂ ನೋಡಲು ಮಾತನಾಡಲು ಬರುತ್ತಾರೆಂದರೆ, ನಾನು ಮುಖ ತಪ್ಪಿಸಿಕೊಳ್ಳುತ್ತೇನೆ. ಈಗ ನನಗೆ ಒಂಟಿತನದ ಭೂತದ ಭಯವಿಲ್ಲ… ನಾನೇ ಅದರೊಳಗೆ ಸೇರಿಕೊಂಡುಬಿಟ್ಟಿದ್ದೇನೆ. ಕೆಳಗಿನ ದೊಡ್ಡಮನೆ ಅವ್ವನ ನೆನಪುಗಳಿಂದ ತುಂಬಿರುವುದರಿಂದ, ತಾರಸಿಯ ಮೇಲೊಂದು ರೂಮು ಕಟ್ಟಿಸಿಕೊಂಡು, ನನ್ನ ಲೈಬ್ರರಿ, ಅವಶ್ಯಕತೆಗಳಿರುವ ಪಾತ್ರೆಗಳೊಂದಿಗೆ Shift ಆಗಿದ್ದೇನೆ. ನನಗೀಗ ಅರಮನೆಯೂ ಈ ಪುಟ್ಟ ಗೂಡು ಒಂದೇ ಆಗಿದೆ. ಆಮೆ ಚಿಪ್ಪಿನೊಳಗೆ ಅಡಗಿಕೊಳ್ಳುವಂತೆ ನನ್ನ ‘ಖಿನ್ನತೆ’ಯ ಚಿಪ್ಪಿನೊಳಗೆ ಅಡಗಿಕೊಂಡಿದ್ದೇನೆ.

ಇನ್ನೇನು ನಿನ್ನ ಮೆಡಿಕಲ್ ಕೋರ್ಸ್ ಮುಗಿಯುತ್ತಾ ಬಂದಿತಲ್ವಾ? ಡಾಕ್ಟರಾಗುವ ನಿನ್ನ ತಾಯಿ-ತಂದೆಯ ನಿನ್ನ ಕನಸು ನನಸಾಗಿದ್ದು, ನನಗೆ ನೆಮ್ಮದಿ, ಸಂತೋಷ ತಂದಿತೆ ಇಷ್ಟೆಲ್ಲಾ ಬರೆದು ತಲೆಕೆಡಿಸಿದೇಂತ ಭಾವಿಸಬೇಡಾ. ನೀನು ಪ್ರಬುದ್ಧ ಹುಡುಗಿ, ತರ್ಕಬದ್ಧವಾಗಿ ಯೋಚಿಸುತ್ತೀಯಾ… ಜಾಣೆ ಕೂಡಾ. ಸಾವು-ಹುಟ್ಟು ನಮ್ಮ ಕೈಲಿಲ್ಲ. ಆದರೆ ಬದುಕು ನಮ್ಮದು… ನಾವೇ ಕಟ್ಟಿಕೊಳ್ಳಬೇಕೆಂದು ಎಲ್ಲರೂ ಬುದ್ದಿ ಹೇಳುತ್ತಾರೆ. ಆದರದು ತುಂಬಾ ಕಷ್ಟ, ಕಠಿಣ ಕಣೆ…! ಬೇವಿನ ಮರದ ಬುಡಕ್ಕೆ ನೀನೂ ದಿನವೂ ಬೆಲ್ಲದ ನೀರು ಸುರಿದು ಬೆಳೆಸಿದರೂ, ದೊಡ್ಡದಾದ ಮೇಲೆ ಅದು ಕೊಡುವುದು, ಬೇವಿನ ಹಣ್ಣನ್ನೇ ಮಾವಿನ ಹಣ್ಣನಲ್ಲ. ನನ್ನನ್ನು ಕಾಡಿದ್ದು ನನ್ನ ವ್ಯಕ್ತಿತ್ವ, ಇದರಲ್ಲಿ ಆನುವಂಶೀಯತೆಯೂ ಕಾರಣವಾಗಿರುತ್ತದೆ. ಆದರೆ ನಾವುಗಳು ಶಿಲೆಯನ್ನು ಉಳಿಯಿಂದ ಕೆತ್ತಿ-ಕೆತ್ತಿ ಸುಂದರ ಮೂರ್ತಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅದೇ ಬದುಕು ಕಟ್ಟಿಕೊಳ್ಳುವ ರೀತಿ ಮಗಳೇ. ಕೆಟ್ಟವುಗಳನ್ನೆಲ್ಲಾ ವರ್ಜಿಸಿ, ಅಧ್ಯಯನ, ಒಳ್ಳೆಯ ಗೆಳತಿಯರು, ಸಜ್ಜನರ ಸಂಗದಿಂದ ನಮ್ಮ ವ್ಯಕ್ತಿತ್ವವನ್ನು ತಿದ್ದಿಕೊಳ್ಳಬಹುದು. ಆದರೆ ನಾನು ಹಾಗೆ ಮಾಡಲಿಲ್ಲ. ಆನೇ ನಡೆದಿದ್ದೇ ದಾರಿಯೆಂಬಂತೆ ನಡೆದಿದ್ದೇನೋ… ಏನೋ… ನಂಗೆ ಗೊತ್ತಿಲ್ಲ…!

ಒಳ್ಳೆಯ ಬದುಕು ಕಟ್ಟಿಕೊಳ್ಳಲು ‘ಡಿಗ್ರಿ’ಗಳು ಬೇಕಾಗಿಲ್ಲ ಚಿನ್ನು. ಜಾಣತನ, ಸಮಯಸ್ಫೂರ್ತಿ, ಸಂಯಮ, ಸಮತೋಲನ, ದೂರದೃಷ್ಟಿ ಮುಖ್ಯವಾಗುತ್ತದೆ. ಅರೇ ನನಗಿರಲಿಲ್ಲಾಂತ ಅನ್ನಿಸುತ್ತದೆ. ಭಾವನೆಗಳೊಂದಿಗೇ ಬದುಕಲು ಆಗದು ಎಂಬುದಕ್ಕೆ ನಾನೇ ಉದಾಹರಣೆ. ತಿರಸ್ಕೃತಳಾಗಿ, ಶಾಪಗ್ರಸ್ತಳಂತೆ, ಬದುಕಿದ ನನ್ನ ಬದುಕೂ ಒಂದು ಬದುಕೇ?

ಏನೂ ಬೇಕೆನ್ನಿಸುವುದಿಲ್ಲ. ಕಾಲನೇಮಿಯ ಕರೆಗಾಗಿ ಕಾಯುತ್ತಾ ಇದ್ದೇನೆ. ಹೋಗಲಿ ಬಿಡು… ನನ್ನ ಬಗ್ಗೆ ತಲೆ ಕೆಡಿಸಿಕೊಳ್ಳಬೇಡ. ನಾನು ನನ್ನಂತೆಯೇ ಆರಾಮವಾಗಿದ್ದೇನೆ. ನಿರ್ಭಾವುಕೆ, ನಿರ್ಲಿಪ್ತತೆಯ ಹೊದಿಕೆಯನ್ನು ಹೊದ್ದು ಬದುಕಿದ್ದೇನೆ. ಕಳೆದುಕೊಳ್ಳಲೂ ಏನೂ ಇಲ್ಲ. ಪಡೆದುಕೊಳ್ಳುವಂತಹುದೂ ಯಾವುದೂ ಇಲ್ಲ. ಅಂತಹ ನಿರೀಕ್ಷೆಗಳೂ ಉಳಿದಿಲ್ಲ ಮಗಳೇ.

ಇನ್ನು… ಸಾಕು… ನಿಲ್ಲಿಸುತ್ತೇನೆ. ಬದುಕಿನಲ್ಲಿ ಹೆಕ್ಕಿ ತೆಗೆದ ಕಾಡುತ್ತಿರುವ ನೆನಪುಗಳು. ಅವುಗಳು ನನ್ನವು… ನಿನ್ನವಾಗಬಾರದೆಂದು,

ಹಾರೈಸುವ…

ನಿನ್ನ ಅವ್ವಾ
ಮುಗಿಯಿತು

ಚಿತ್ರಗಳು

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...