Home / ಕಥೆ / ಆತ್ಮ ಕಥೆ / ಕಾಡುತಾವ ನೆನಪುಗಳು – ೩೨

ಕಾಡುತಾವ ನೆನಪುಗಳು – ೩೨

ನನಗೂ ವಯಸ್ಸಾಯ್ತಲ್ಲ ಚಿನ್ನು… ಜೊತೆಗೆ ಈ ಮಾನಸಿಕ ‘ಖಿನ್ನತೆ’ ಬೇರೆ… ಹೀಗಾಗಿ ನಾನೆಲ್ಲೂ ಹೋಗುವುದೇ ಇಲ್ಲ. ಹೊರಗೊಂದು ಪ್ರಪಂಚವೊಂದಿದೆ ಎಂಬುದನ್ನು ಮರೆಯಲು ಯತ್ನಿಸುತ್ತಿದ್ದೇನೆ… ಯಾರಾದರೂ ನೋಡಲು ಮಾತನಾಡಲು ಬರುತ್ತಾರೆಂದರೆ, ನಾನು ಮುಖ ತಪ್ಪಿಸಿಕೊಳ್ಳುತ್ತೇನೆ. ಈಗ ನನಗೆ ಒಂಟಿತನದ ಭೂತದ ಭಯವಿಲ್ಲ… ನಾನೇ ಅದರೊಳಗೆ ಸೇರಿಕೊಂಡುಬಿಟ್ಟಿದ್ದೇನೆ. ಕೆಳಗಿನ ದೊಡ್ಡಮನೆ ಅವ್ವನ ನೆನಪುಗಳಿಂದ ತುಂಬಿರುವುದರಿಂದ, ತಾರಸಿಯ ಮೇಲೊಂದು ರೂಮು ಕಟ್ಟಿಸಿಕೊಂಡು, ನನ್ನ ಲೈಬ್ರರಿ, ಅವಶ್ಯಕತೆಗಳಿರುವ ಪಾತ್ರೆಗಳೊಂದಿಗೆ Shift ಆಗಿದ್ದೇನೆ. ನನಗೀಗ ಅರಮನೆಯೂ ಈ ಪುಟ್ಟ ಗೂಡು ಒಂದೇ ಆಗಿದೆ. ಆಮೆ ಚಿಪ್ಪಿನೊಳಗೆ ಅಡಗಿಕೊಳ್ಳುವಂತೆ ನನ್ನ ‘ಖಿನ್ನತೆ’ಯ ಚಿಪ್ಪಿನೊಳಗೆ ಅಡಗಿಕೊಂಡಿದ್ದೇನೆ.

ಇನ್ನೇನು ನಿನ್ನ ಮೆಡಿಕಲ್ ಕೋರ್ಸ್ ಮುಗಿಯುತ್ತಾ ಬಂದಿತಲ್ವಾ? ಡಾಕ್ಟರಾಗುವ ನಿನ್ನ ತಾಯಿ-ತಂದೆಯ ನಿನ್ನ ಕನಸು ನನಸಾಗಿದ್ದು, ನನಗೆ ನೆಮ್ಮದಿ, ಸಂತೋಷ ತಂದಿತೆ ಇಷ್ಟೆಲ್ಲಾ ಬರೆದು ತಲೆಕೆಡಿಸಿದೇಂತ ಭಾವಿಸಬೇಡಾ. ನೀನು ಪ್ರಬುದ್ಧ ಹುಡುಗಿ, ತರ್ಕಬದ್ಧವಾಗಿ ಯೋಚಿಸುತ್ತೀಯಾ… ಜಾಣೆ ಕೂಡಾ. ಸಾವು-ಹುಟ್ಟು ನಮ್ಮ ಕೈಲಿಲ್ಲ. ಆದರೆ ಬದುಕು ನಮ್ಮದು… ನಾವೇ ಕಟ್ಟಿಕೊಳ್ಳಬೇಕೆಂದು ಎಲ್ಲರೂ ಬುದ್ದಿ ಹೇಳುತ್ತಾರೆ. ಆದರದು ತುಂಬಾ ಕಷ್ಟ, ಕಠಿಣ ಕಣೆ…! ಬೇವಿನ ಮರದ ಬುಡಕ್ಕೆ ನೀನೂ ದಿನವೂ ಬೆಲ್ಲದ ನೀರು ಸುರಿದು ಬೆಳೆಸಿದರೂ, ದೊಡ್ಡದಾದ ಮೇಲೆ ಅದು ಕೊಡುವುದು, ಬೇವಿನ ಹಣ್ಣನ್ನೇ ಮಾವಿನ ಹಣ್ಣನಲ್ಲ. ನನ್ನನ್ನು ಕಾಡಿದ್ದು ನನ್ನ ವ್ಯಕ್ತಿತ್ವ, ಇದರಲ್ಲಿ ಆನುವಂಶೀಯತೆಯೂ ಕಾರಣವಾಗಿರುತ್ತದೆ. ಆದರೆ ನಾವುಗಳು ಶಿಲೆಯನ್ನು ಉಳಿಯಿಂದ ಕೆತ್ತಿ-ಕೆತ್ತಿ ಸುಂದರ ಮೂರ್ತಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅದೇ ಬದುಕು ಕಟ್ಟಿಕೊಳ್ಳುವ ರೀತಿ ಮಗಳೇ. ಕೆಟ್ಟವುಗಳನ್ನೆಲ್ಲಾ ವರ್ಜಿಸಿ, ಅಧ್ಯಯನ, ಒಳ್ಳೆಯ ಗೆಳತಿಯರು, ಸಜ್ಜನರ ಸಂಗದಿಂದ ನಮ್ಮ ವ್ಯಕ್ತಿತ್ವವನ್ನು ತಿದ್ದಿಕೊಳ್ಳಬಹುದು. ಆದರೆ ನಾನು ಹಾಗೆ ಮಾಡಲಿಲ್ಲ. ಆನೇ ನಡೆದಿದ್ದೇ ದಾರಿಯೆಂಬಂತೆ ನಡೆದಿದ್ದೇನೋ… ಏನೋ… ನಂಗೆ ಗೊತ್ತಿಲ್ಲ…!

ಒಳ್ಳೆಯ ಬದುಕು ಕಟ್ಟಿಕೊಳ್ಳಲು ‘ಡಿಗ್ರಿ’ಗಳು ಬೇಕಾಗಿಲ್ಲ ಚಿನ್ನು. ಜಾಣತನ, ಸಮಯಸ್ಫೂರ್ತಿ, ಸಂಯಮ, ಸಮತೋಲನ, ದೂರದೃಷ್ಟಿ ಮುಖ್ಯವಾಗುತ್ತದೆ. ಅರೇ ನನಗಿರಲಿಲ್ಲಾಂತ ಅನ್ನಿಸುತ್ತದೆ. ಭಾವನೆಗಳೊಂದಿಗೇ ಬದುಕಲು ಆಗದು ಎಂಬುದಕ್ಕೆ ನಾನೇ ಉದಾಹರಣೆ. ತಿರಸ್ಕೃತಳಾಗಿ, ಶಾಪಗ್ರಸ್ತಳಂತೆ, ಬದುಕಿದ ನನ್ನ ಬದುಕೂ ಒಂದು ಬದುಕೇ?

ಏನೂ ಬೇಕೆನ್ನಿಸುವುದಿಲ್ಲ. ಕಾಲನೇಮಿಯ ಕರೆಗಾಗಿ ಕಾಯುತ್ತಾ ಇದ್ದೇನೆ. ಹೋಗಲಿ ಬಿಡು… ನನ್ನ ಬಗ್ಗೆ ತಲೆ ಕೆಡಿಸಿಕೊಳ್ಳಬೇಡ. ನಾನು ನನ್ನಂತೆಯೇ ಆರಾಮವಾಗಿದ್ದೇನೆ. ನಿರ್ಭಾವುಕೆ, ನಿರ್ಲಿಪ್ತತೆಯ ಹೊದಿಕೆಯನ್ನು ಹೊದ್ದು ಬದುಕಿದ್ದೇನೆ. ಕಳೆದುಕೊಳ್ಳಲೂ ಏನೂ ಇಲ್ಲ. ಪಡೆದುಕೊಳ್ಳುವಂತಹುದೂ ಯಾವುದೂ ಇಲ್ಲ. ಅಂತಹ ನಿರೀಕ್ಷೆಗಳೂ ಉಳಿದಿಲ್ಲ ಮಗಳೇ.

ಇನ್ನು… ಸಾಕು… ನಿಲ್ಲಿಸುತ್ತೇನೆ. ಬದುಕಿನಲ್ಲಿ ಹೆಕ್ಕಿ ತೆಗೆದ ಕಾಡುತ್ತಿರುವ ನೆನಪುಗಳು. ಅವುಗಳು ನನ್ನವು… ನಿನ್ನವಾಗಬಾರದೆಂದು,

ಹಾರೈಸುವ…

ನಿನ್ನ ಅವ್ವಾ
ಮುಗಿಯಿತು

ಚಿತ್ರಗಳು

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...