Home / ಕವನ / ಅನುವಾದ / ಭೂತದರ್‍ಶನ

ಭೂತದರ್‍ಶನ

ಮೂಲ: ವಿಲಿಯಂ ಬಟ್ಲರ್ ಏಟ್ಸ್

ರಕ್ಷಣೆ ಇದೆಯೆಂತಲೇ ಅಣಕದ ಮಾತಿನಲ್ಲಿ
ಭೂತ ದರ್‍ಶನ ಕುರಿತು ಮಾತನಾಡಿದೆ ನಾನು.
ದಿಟ್ಟವೋ ಸೊಟ್ಟವೋ ಒಟ್ಟು ಜನರುಚಿಯಲ್ಲೇ
ಎಳ್ಳಷ್ಟೂ ವಿಶ್ವಾಸ ಇಲ್ಲವೆಂದೇ ಅದನ್ನು
ಸಾಧಿಸುವ, ಸಂಭಾವ್ಯವೆಂದು ವಾದಿಸುವ
ಗೋಜಿಗೇ ನಾ ಹೋಗಲಿಲ್ಲ. ನಿಜವೆಂದರೆ
ಭೂತ ಕಂಡಿದೆ ನನಗೆ ಹದಿನೈದು ಥರದಲ್ಲಿ,
ಗೂಟಕ್ಕೆ ನೇತ ಕೋಟು ಬಹು ಘೋರ ಅದರಲ್ಲಿ.

ಯೋಜಿಸಿ ಸಾಧಿಸಿದ್ದು ನನ್ನ ಅರೆ‌ಏಕಾಂತ,
ಅದರ ಅರ್‍ಧ ಪ್ರಿಯವಾದ್ದೂ ಇಲ್ಲ ಈತನಕ,
ನಟ್ಟಿರುಳವರೆಗೆ ಮಲಗದೆ ಕೂರಬಹುದು.
ತಿಳಿಯದಿದ್ದಾಗಲೂ ನನ್ನ ಮಾತಿನ ಅರ್‍ಥ
ತೋರಗೊಡದಂಥ ಸೂಕ್ಷ್ಮಮತಿ ಜೊತೆಗೆ
ಕೂತು ಏನೇನೆಲ್ಲ ಹರಟಬಹುದಲ್ಲ.
ಭೂತ ಕಂಡಿದೆ ನನಗೆ ಹದಿನೈದು ಥರದಲ್ಲಿ,
ಗೂಟಕ್ಕೆ ನೇತ ಕೋಟು ಬಹು ಘೋರ ಅದರಲ್ಲಿ.

ಮುದುಕನಾಗುತ್ತ ಹೋದಂತೆ ಒಬ್ಬ ಮನುಷ್ಯ
ಆಳವಾಗುತ್ತದೆ ಅವನ ಸಂತೋಷ,
ತುಂಬಿಬಿಡುತ್ತದೆ ಅವನ ಖಾಲಿ ಎದೆ ಕೊನೆಗೆ,
ಇಂಥ ಬಲವೆಲ್ಲದರ ಅಗತ್ಯವಿದೆ ಅವನಿಗೆ,
ಏಕೆಂದರೆ ಇರುಳು ಬೆಳೆಯುತ್ತ ಇರುತ್ತದೆ
ಭಯ ರಹಸ್ಯಗಳನ್ನು ತೆರೆಯುತ್ತ ಇರುತ್ತದೆ.
ಭೂತ ಕಂಡಿದೆ ನನಗೆ ಹದಿನೈದು ಥರದಲ್ಲಿ,
ಗೂಟಕ್ಕೆ ನೇತ ಕೋಟು ಬಹು ಘೋರ ಅದರಲ್ಲಿ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ