Home / ಕವನ / ಅನುವಾದ / ಭೂತದರ್‍ಶನ

ಭೂತದರ್‍ಶನ

ಮೂಲ: ವಿಲಿಯಂ ಬಟ್ಲರ್ ಏಟ್ಸ್

ರಕ್ಷಣೆ ಇದೆಯೆಂತಲೇ ಅಣಕದ ಮಾತಿನಲ್ಲಿ
ಭೂತ ದರ್‍ಶನ ಕುರಿತು ಮಾತನಾಡಿದೆ ನಾನು.
ದಿಟ್ಟವೋ ಸೊಟ್ಟವೋ ಒಟ್ಟು ಜನರುಚಿಯಲ್ಲೇ
ಎಳ್ಳಷ್ಟೂ ವಿಶ್ವಾಸ ಇಲ್ಲವೆಂದೇ ಅದನ್ನು
ಸಾಧಿಸುವ, ಸಂಭಾವ್ಯವೆಂದು ವಾದಿಸುವ
ಗೋಜಿಗೇ ನಾ ಹೋಗಲಿಲ್ಲ. ನಿಜವೆಂದರೆ
ಭೂತ ಕಂಡಿದೆ ನನಗೆ ಹದಿನೈದು ಥರದಲ್ಲಿ,
ಗೂಟಕ್ಕೆ ನೇತ ಕೋಟು ಬಹು ಘೋರ ಅದರಲ್ಲಿ.

ಯೋಜಿಸಿ ಸಾಧಿಸಿದ್ದು ನನ್ನ ಅರೆ‌ಏಕಾಂತ,
ಅದರ ಅರ್‍ಧ ಪ್ರಿಯವಾದ್ದೂ ಇಲ್ಲ ಈತನಕ,
ನಟ್ಟಿರುಳವರೆಗೆ ಮಲಗದೆ ಕೂರಬಹುದು.
ತಿಳಿಯದಿದ್ದಾಗಲೂ ನನ್ನ ಮಾತಿನ ಅರ್‍ಥ
ತೋರಗೊಡದಂಥ ಸೂಕ್ಷ್ಮಮತಿ ಜೊತೆಗೆ
ಕೂತು ಏನೇನೆಲ್ಲ ಹರಟಬಹುದಲ್ಲ.
ಭೂತ ಕಂಡಿದೆ ನನಗೆ ಹದಿನೈದು ಥರದಲ್ಲಿ,
ಗೂಟಕ್ಕೆ ನೇತ ಕೋಟು ಬಹು ಘೋರ ಅದರಲ್ಲಿ.

ಮುದುಕನಾಗುತ್ತ ಹೋದಂತೆ ಒಬ್ಬ ಮನುಷ್ಯ
ಆಳವಾಗುತ್ತದೆ ಅವನ ಸಂತೋಷ,
ತುಂಬಿಬಿಡುತ್ತದೆ ಅವನ ಖಾಲಿ ಎದೆ ಕೊನೆಗೆ,
ಇಂಥ ಬಲವೆಲ್ಲದರ ಅಗತ್ಯವಿದೆ ಅವನಿಗೆ,
ಏಕೆಂದರೆ ಇರುಳು ಬೆಳೆಯುತ್ತ ಇರುತ್ತದೆ
ಭಯ ರಹಸ್ಯಗಳನ್ನು ತೆರೆಯುತ್ತ ಇರುತ್ತದೆ.
ಭೂತ ಕಂಡಿದೆ ನನಗೆ ಹದಿನೈದು ಥರದಲ್ಲಿ,
ಗೂಟಕ್ಕೆ ನೇತ ಕೋಟು ಬಹು ಘೋರ ಅದರಲ್ಲಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...