Home / ಕವನ / ಅನುವಾದ / ಸರ್‍ಕಸ್ ಕಂಪೆನಿ ಮುಚ್ಚಿದ್ದು

ಸರ್‍ಕಸ್ ಕಂಪೆನಿ ಮುಚ್ಚಿದ್ದು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಕವನಕ್ಕೆ ವಸ್ತು ಸಿಗಲಿಲ್ಲ, ವ್ಯರ್‍ಥ ಪ್ರಯತ್ನಿಸಿದ್ದೆಲ್ಲ
ಪ್ರತಿದಿನ ಪರದಾಟ, ಆರುವಾರ ಕಳೆದರೂ ಇಲ್ಲ,
ಶಾಂತನಾಗುವುದೆ ಉತ್ತಮ ಮುದುಕ ಅಲ್ಲಿಗೆ;
ವಯಸ್ಸಾಗುವ ಮುಂಚೆ ಪ್ರತಿ ಚಳಿಗಾಲ ಬೇಸಿಗೆ
ಆಟಕ್ಕಿದ್ದವು ನನ್ನ ಸರ್‍ಕಸ್ ಪ್ರಾಣಿಗಳೆಲ್ಲ
ಮೆಟ್ಟುಗಾಲನ್ನು ಕಟ್ಟಿಕೊಂಡ ಆ ಹುಡುಗರು,
ಕಣ್ಣು ಕುಕ್ಕುವ ಹಾಗೆ ಥಳಥಳಿಸುತ್ತಿದ್ದ ರಥ,
ಸಿಂಹಗಳು ಹೆಣ್ಣುಗಳು ಏನೆಲ್ಲ, ಎಲ್ಲ ಆ ದೇವರೇ ಬಲ್ಲ.

ಇನ್ನೇನಿದೆ ಹೊರಡುವುದೆ ಹಳೆವಸ್ತುಗಳ ಸ್ಮರಣೆಗೆ:
ಮೂಗುದಾರಕ್ಕೆ ಸಿಕ್ಕು ಮೂರುಮೋಹಕ ದ್ವೀಪಗಳಲ್ಲಿ
ವ್ಯರ್‍ಥ ಹರ್‍ಷ, ವ್ಯರ್‍ಥಯುದ್ಧ ವ್ಯರ್‍ಥ ಶಾಂತಿಗಳ
ರೂಪಕ ಸ್ವಪ್ನಗಳಲ್ಲಿ ನಡೆದ ಕಡಲ ಸವಾರ
ಉಷೀನ್ ಬರುತ್ತಾನೆ ಎಲ್ಲಕ್ಕೂ ಮೊದಲಲ್ಲಿ
ಕಹಿಯುಂಡ ಹೃದಯ ಆಯ್ದಂಥ ವಸ್ತುಗಳು,
ಗತಯುಗದ ಗೀತಕ್ಕೆ, ಆಸ್ಥಾನದಬ್ಬರಕ್ಕೆ ಹೇಳಿಸಿದ ವಿಷಯಗಳು.
ಅವನನ್ನಲೆಸಿದ ನಾನೇ ಎಷ್ಟು ಬೆಲೆ ಕೊಟ್ಟಿದ್ದೆ ಅವನ ಕಷ್ಟಕ್ಕೆ?
ಅವನ ಕನಸಿನ ಕನ್ನೆಯನ್ನು ನಾನೇ ಬಯಸಿ ಕಂಗಾಲಾಗಿದ್ದೆ.

ಮುಂದೆ ಆಟಕ್ಕಿಳಿದದ್ದು ಅದರ ವಿರೋಧೀ ಸತ್ಯ:
ನಾ ಕೊಟ್ಟ ಹೆಸರು ಕ್ಯಾಥಲೀನಿನ ರಾಣಿ, ಆ ಹೆಣ್ಣ ಚಿತ್ತ
ಮರುಕಕ್ಕೆ ತುತ್ತಾಗಿ, ತೆತ್ತುಕೊಂಡರೆ ತನ್ನಾತ್ಮವನ್ನೇ ಹುಚ್ಚಿಗೆ,
ಇಳಿದು ಬಂದಿತು ಸ್ವರ್‍ಗ ಅವಳನ್ನು ರಕ್ಷಿಸಲು ಪ್ರದರ್‍ಶಿಸುತ ಮೆಚ್ಚಿಗೆ.
ಆತ್ಮನಾಶದ ಕಡೆಗೆ ಸಾಗಿದ್ದಾಳೆ ಪ್ರಿಯ ಎಂದೇ ಅನಿಸಿತ್ತು.
ಮತ ಭ್ರಾಂತಿ ದ್ವೇಷಕ್ಕೆ ಸಿಕ್ಕು ಅವಳಾತ್ಮ ತುತ್ತಾಗಿ ಹೋಗಿತ್ತು.
ಮುಂದೆ ಹೊಸ ಕನಸೊಂದಕ್ಕೆ ಇದೇ ಎಡೆಮಾಡಿತು.
ನನ್ನ ಚಿಂತನೆ ಒಲವು ಅದಕ್ಕೇ ಮುಡಿಪಾಯಿತು.

ಆ ಮೂರ್‍ಖ ಕುರುಡರು ರೊಟ್ಟಿ ಕದ್ದಾಗ
ಅದಮ್ಯ ಸಾಗರದ ಜೊತೆ ಕುಹುಲೇನ್ ಹೋರಾಡಿದ.
ಹೃದಯ ರಹಸ್ಯಗಳೇ ಅಲ್ಲಿ ಎಲ್ಲೆಡೆಗೂ, ಆದರೂ
ಮರುಳುಮಾಡಿದ್ದು ಕನಸೇ ನನ್ನನ್ನು ಕಡೆಗೂ:
ಕೃತಿಯಿಂದ ಮುಕ್ತವಾದಂಥ ಪಾತ್ರಗಳೇ
ಪ್ರಸ್ತುತವನ್ನು ತುಂಬ ಸ್ಮೃತಿಯನ್ನು ಆಳಿದ್ದು.
ಬಣ್ಣದ ವೇದಿಕೆ, ನಟರೇ ನನ್ನೊಲವ ಗಳಿಸಿದ್ದು,
ಆಟ ಸಂಕೇತಿಸಿದ ವಿಷಯವಲ್ಲ.

ಸರ್‍ವ ಸ್ವತಂತ್ರ ಆ ಪರಿಪೂರ್‍ಣ ಪ್ರತಿಮೆಗಳು
ಪರಿಶುದ್ಧ ಮನದಲ್ಲಿ ಬೆಳೆದರೂ ಮೊದಲಲ್ಲಿ ಎಲ್ಲಿಂದ ಮೊಳೆತವು?
ಎಸೆದ ‘ಬಿಸಾಕು’ಗಳ ತಿಪ್ಪೆ, ರಸ್ತೆಯ ಕಸದ ಗುಪ್ಪೆ,
ಹಳೆಸೀಸ, ಹಳೆಕೆಟಲು, ಸುಲಿದ ಬಾಳೆಯ ಸಿಪ್ಪೆ,
ಹಳೆಜಂಕು, ಮೂಳೆ ಕೊಳೆಚಿಂದಿ, ಮುರುಕಲು ಗೊಂಬೆ,
ಅಂಗಡಿಗಲ್ಲಕ್ಕೆ ಕೂತು ಕೂಗುವ ಗಲ್ಲಿಯ ರಂಭೆ,
ಈಗ ಏಣಿಯೆ ಇಲ್ಲ, ಕೆಳಗೆ ಮಲಗುವುದಷ್ಟೆ ಎಲ್ಲ ಏಣಿಗಳು ಶುರುವಾಗುವಲ್ಲಿ
ಚಿಂದಿ, ಮೂಳೆಗಳು ತುಂಬಿರುವ ಹೃದಯದ ಕೊಳೆ ಕಿರಾಣಿಯಂಗಡಿಯಲ್ಲಿ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ