ಬೆಳಕಾದ ಬೀಡು

ಯಾವ ಜನ್ಮದ ಪುಣ್ಯವೊ ಏನೊ
ನಾನಾಗಿಹೆನು ಕನ್ನಡಿಗ
ಕವಿ ಕಲ್ಪನೆಯ ಚೆಲುವಿಗು-ಮೀರಿದ
ಕಾಣುತಲಿಹೆನೀ ಸಿರಿಸಗ್ಗ
ಹನಿಯುತಲಿದೆಯೊ ನವ ಸ್ಫೂರ್ತಿಯ ಮಳೆ
ಅಮೃತ ಸಲೆಯಾಗಿ
ಹರಿಯುತಲಿದೆಯೊ ಸಾಹಿತ್ಯದ ಹೊಳೆ
ಕಲಕಲ ದನಿಯಾಗಿ
ಹಾಡುತಲಿದೆಯೊ ಕೋಗಿಲೆಯಾ ಮನ
ಸಪ್ತ ಸ್ವರವಾಗಿ
ಆಲಿಸಿ ಅರಳಿದೆ ರಸಿಕರ ಹೃನ್ಮನ
ಚೈತ್ರದ ಸುಮವಾಗಿ
ಸಹ್ಯಾದ್ರಿಯ ಸಲೆ ಮಲೆನಾಡಿನ ಮಲೆ
ನಂದನ ವನವಾಗಿ
ಬೇಲೂರಿನ ಕಲೆ ಗೊಮ್ಮಟನಾ ನೆಲೆ
ಶಿಲ್ಪದ ಬೀಡಾಗಿ
ವಿಶ್ವದ ಕಣ್ಮನ ಸೂರೆಗೊಂಡಿದೆ
ಚೆಲುವಿನ ಬಲೆಯಾಗಿ
ಕಲೆಯಿಂದಲಿ ಈ ಕನ್ನಡನಾಡು
ಬೆಳಗಿದೆ ಬೆಳಕಾಗಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈರ ಯಾಕೆ ಹೋದ?
Next post ವಿವಿಧತೆಯಲ್ಲಿ ಏಕತೆಯ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…