Home / ಕವನ / ಕವಿತೆ / ಕಾಬೂಲಿವಾಲಾ

ಕಾಬೂಲಿವಾಲಾ

ಅಂದು ಬದುಕಿದ್ದೆ ನಾನು
ಕಾಬೂಲ್ ಖಂದಹಾರ್‌ನ
ಖರ್‍ಜೂರದ ಗಿಡದಂತೆ
ಸಿಹಿ ಹುಳಿಯ ಸಂಗಮ
ಅಂಗೂರದ ಬಳ್ಳಿಯಂತೆ
ಶಾಂತಿ ಕಾಲವೇ ಇರಲಿ
ಯುದ್ಧ ಕಾಲವೇ ಬರಲಿ
ಬಂದೂಕಿಲ್ಲದ ಬರಿಗೈಯಲಿ
ಕಂಡಿಲ್ಲ ಅವನ
ಸದಾ ಭಯದ ನೆರಳಿನಲೇ
ನನ್ನ ಬದುಕಿನ ಪಯಣ

ವಿಶ್ವವನ್ನೇ ನಿಯಂತ್ರಿಸಲು
ಹಿರಿಯಣ್ಣನ ಹಿಂಸೆಯಾದರೆ
ಒಳಗೆ ಮೀಸೆ ತಿರುಗಿಸುವ
ಪೌರುಷದ ಅಟ್ಟಹಾಸ
ಮಿದುಳಿನಲಿ ಗನ್ನುಗಳ ಸ್ಫೋಟ
ವ್ಯಾಪಕ ಭಯದ ನೋಟ
ಬಿಸಿ ತಟ್ಟಿದೆ ನನಗೆ
ಯುದ್ಧ ಕಾಲದಲೂ –
ಶಾಂತಿ ಸಮಯದಲೂ
ನನ್ನ ಹಕ್ಕುಗಳ ದಮನ
ಕ್ರೂರ ವ್ಯಾಘ್ರರ ನರ್‍ತನ.

ಭೀತಿಯಿಂದ ಧರ್‍ಮ ಪ್ರಶ್ನಿಸಲಿಲ್ಲ
ಹಕ್ಕಿನ ಅಧಿಕಾರ ಕೇಳಲಿಲ್ಲ
ದುಷ್ಟ ಶಿಕ್ಷೆಯ ಸಂದರ್‍ಭವಿರಲಿ
ರಾಷ್ಟ್ರ ರಕ್ಷಣೆಯ ಕಾವಲಿರಲಿ
ಧರ್‍ಮ ಯುದ್ಧದ ಜೇಹಾದೇ ಆಗಿರಲಿ
ಕಪಟ ನಾಟಕದ ಆಟದಲಿ
ಬಲಿಯಾದರು ನನ್ನವರು
ಹಿಂಸೆ-ಅಹಿಂಸೆ ಎರಡೂ ಶಬ್ದಗಳಿಗೂ
ಇಲ್ಲಿ ಒಂದೇ ಅರ್‍ಥ ಅನ್ವಯ
ಮನೆಯಿಂದ ರಣರಂಗದವರೆಗೂ

ಬಲಿಯಾದ ನನ್ನ ಕುಡಿಗಳು.
ನೋವಿನ ತೆಂಗಿನ ಮರದಲಿ
ಯಾತನೆಯ ಕೆಂಪು ರಕ್ತದ ಎಳನೀರು
ಮುಗ್ಧ ಮಕ್ಕಳ ಮಾರಣಹೋಮ
ಧರ್‍ಮ-ರಾಜಕೀಯದ ಸಾವು ನೋವುಗಳ
ಅನುಭವಿಸಿರುವೆ ನಾನು ಬಹಳ
ಸಹಿಸಲಾರೆ ಸಾವಿನಾಟವನು
ಸಾಕು ಮಾಡಿ ಮುಂಡಾಟಿಕೆ
ಬೇಕು ನನಗೆ ನೆಮ್ಮದಿಯ ನೆಲೆ
ಪುಟ್ಟ ಮನೆಯಂಗಳದಲಿ ತೆಂಗಿನಮರ
ನೆಮ್ಮದಿಯ ಶುದ್ಧ ಗಾಳಿ, ನೀರು
ಸಮವಸ್ತ್ರವಿಲ್ಲದ ಪುರುಷರು
ಬಂದೂಕಿಲ್ಲದ ಕೈಗಳು
ಜೀವಪೋಷಕ ಸಂಗಾತಿಗಳು
ಮನುಕುಲವನು ಪ್ರೀತಿಸುವ
ಕಾಬೂಲಿವಾಲಾಗಳು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...