Home / ಕವನ / ಕವಿತೆ / ಕಾಬೂಲಿವಾಲಾ

ಕಾಬೂಲಿವಾಲಾ

ಅಂದು ಬದುಕಿದ್ದೆ ನಾನು
ಕಾಬೂಲ್ ಖಂದಹಾರ್‌ನ
ಖರ್‍ಜೂರದ ಗಿಡದಂತೆ
ಸಿಹಿ ಹುಳಿಯ ಸಂಗಮ
ಅಂಗೂರದ ಬಳ್ಳಿಯಂತೆ
ಶಾಂತಿ ಕಾಲವೇ ಇರಲಿ
ಯುದ್ಧ ಕಾಲವೇ ಬರಲಿ
ಬಂದೂಕಿಲ್ಲದ ಬರಿಗೈಯಲಿ
ಕಂಡಿಲ್ಲ ಅವನ
ಸದಾ ಭಯದ ನೆರಳಿನಲೇ
ನನ್ನ ಬದುಕಿನ ಪಯಣ

ವಿಶ್ವವನ್ನೇ ನಿಯಂತ್ರಿಸಲು
ಹಿರಿಯಣ್ಣನ ಹಿಂಸೆಯಾದರೆ
ಒಳಗೆ ಮೀಸೆ ತಿರುಗಿಸುವ
ಪೌರುಷದ ಅಟ್ಟಹಾಸ
ಮಿದುಳಿನಲಿ ಗನ್ನುಗಳ ಸ್ಫೋಟ
ವ್ಯಾಪಕ ಭಯದ ನೋಟ
ಬಿಸಿ ತಟ್ಟಿದೆ ನನಗೆ
ಯುದ್ಧ ಕಾಲದಲೂ –
ಶಾಂತಿ ಸಮಯದಲೂ
ನನ್ನ ಹಕ್ಕುಗಳ ದಮನ
ಕ್ರೂರ ವ್ಯಾಘ್ರರ ನರ್‍ತನ.

ಭೀತಿಯಿಂದ ಧರ್‍ಮ ಪ್ರಶ್ನಿಸಲಿಲ್ಲ
ಹಕ್ಕಿನ ಅಧಿಕಾರ ಕೇಳಲಿಲ್ಲ
ದುಷ್ಟ ಶಿಕ್ಷೆಯ ಸಂದರ್‍ಭವಿರಲಿ
ರಾಷ್ಟ್ರ ರಕ್ಷಣೆಯ ಕಾವಲಿರಲಿ
ಧರ್‍ಮ ಯುದ್ಧದ ಜೇಹಾದೇ ಆಗಿರಲಿ
ಕಪಟ ನಾಟಕದ ಆಟದಲಿ
ಬಲಿಯಾದರು ನನ್ನವರು
ಹಿಂಸೆ-ಅಹಿಂಸೆ ಎರಡೂ ಶಬ್ದಗಳಿಗೂ
ಇಲ್ಲಿ ಒಂದೇ ಅರ್‍ಥ ಅನ್ವಯ
ಮನೆಯಿಂದ ರಣರಂಗದವರೆಗೂ

ಬಲಿಯಾದ ನನ್ನ ಕುಡಿಗಳು.
ನೋವಿನ ತೆಂಗಿನ ಮರದಲಿ
ಯಾತನೆಯ ಕೆಂಪು ರಕ್ತದ ಎಳನೀರು
ಮುಗ್ಧ ಮಕ್ಕಳ ಮಾರಣಹೋಮ
ಧರ್‍ಮ-ರಾಜಕೀಯದ ಸಾವು ನೋವುಗಳ
ಅನುಭವಿಸಿರುವೆ ನಾನು ಬಹಳ
ಸಹಿಸಲಾರೆ ಸಾವಿನಾಟವನು
ಸಾಕು ಮಾಡಿ ಮುಂಡಾಟಿಕೆ
ಬೇಕು ನನಗೆ ನೆಮ್ಮದಿಯ ನೆಲೆ
ಪುಟ್ಟ ಮನೆಯಂಗಳದಲಿ ತೆಂಗಿನಮರ
ನೆಮ್ಮದಿಯ ಶುದ್ಧ ಗಾಳಿ, ನೀರು
ಸಮವಸ್ತ್ರವಿಲ್ಲದ ಪುರುಷರು
ಬಂದೂಕಿಲ್ಲದ ಕೈಗಳು
ಜೀವಪೋಷಕ ಸಂಗಾತಿಗಳು
ಮನುಕುಲವನು ಪ್ರೀತಿಸುವ
ಕಾಬೂಲಿವಾಲಾಗಳು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...