Home / ಕವನ / ಕವಿತೆ / ಕಾಬೂಲಿವಾಲಾ

ಕಾಬೂಲಿವಾಲಾ

ಅಂದು ಬದುಕಿದ್ದೆ ನಾನು
ಕಾಬೂಲ್ ಖಂದಹಾರ್‌ನ
ಖರ್‍ಜೂರದ ಗಿಡದಂತೆ
ಸಿಹಿ ಹುಳಿಯ ಸಂಗಮ
ಅಂಗೂರದ ಬಳ್ಳಿಯಂತೆ
ಶಾಂತಿ ಕಾಲವೇ ಇರಲಿ
ಯುದ್ಧ ಕಾಲವೇ ಬರಲಿ
ಬಂದೂಕಿಲ್ಲದ ಬರಿಗೈಯಲಿ
ಕಂಡಿಲ್ಲ ಅವನ
ಸದಾ ಭಯದ ನೆರಳಿನಲೇ
ನನ್ನ ಬದುಕಿನ ಪಯಣ

ವಿಶ್ವವನ್ನೇ ನಿಯಂತ್ರಿಸಲು
ಹಿರಿಯಣ್ಣನ ಹಿಂಸೆಯಾದರೆ
ಒಳಗೆ ಮೀಸೆ ತಿರುಗಿಸುವ
ಪೌರುಷದ ಅಟ್ಟಹಾಸ
ಮಿದುಳಿನಲಿ ಗನ್ನುಗಳ ಸ್ಫೋಟ
ವ್ಯಾಪಕ ಭಯದ ನೋಟ
ಬಿಸಿ ತಟ್ಟಿದೆ ನನಗೆ
ಯುದ್ಧ ಕಾಲದಲೂ –
ಶಾಂತಿ ಸಮಯದಲೂ
ನನ್ನ ಹಕ್ಕುಗಳ ದಮನ
ಕ್ರೂರ ವ್ಯಾಘ್ರರ ನರ್‍ತನ.

ಭೀತಿಯಿಂದ ಧರ್‍ಮ ಪ್ರಶ್ನಿಸಲಿಲ್ಲ
ಹಕ್ಕಿನ ಅಧಿಕಾರ ಕೇಳಲಿಲ್ಲ
ದುಷ್ಟ ಶಿಕ್ಷೆಯ ಸಂದರ್‍ಭವಿರಲಿ
ರಾಷ್ಟ್ರ ರಕ್ಷಣೆಯ ಕಾವಲಿರಲಿ
ಧರ್‍ಮ ಯುದ್ಧದ ಜೇಹಾದೇ ಆಗಿರಲಿ
ಕಪಟ ನಾಟಕದ ಆಟದಲಿ
ಬಲಿಯಾದರು ನನ್ನವರು
ಹಿಂಸೆ-ಅಹಿಂಸೆ ಎರಡೂ ಶಬ್ದಗಳಿಗೂ
ಇಲ್ಲಿ ಒಂದೇ ಅರ್‍ಥ ಅನ್ವಯ
ಮನೆಯಿಂದ ರಣರಂಗದವರೆಗೂ

ಬಲಿಯಾದ ನನ್ನ ಕುಡಿಗಳು.
ನೋವಿನ ತೆಂಗಿನ ಮರದಲಿ
ಯಾತನೆಯ ಕೆಂಪು ರಕ್ತದ ಎಳನೀರು
ಮುಗ್ಧ ಮಕ್ಕಳ ಮಾರಣಹೋಮ
ಧರ್‍ಮ-ರಾಜಕೀಯದ ಸಾವು ನೋವುಗಳ
ಅನುಭವಿಸಿರುವೆ ನಾನು ಬಹಳ
ಸಹಿಸಲಾರೆ ಸಾವಿನಾಟವನು
ಸಾಕು ಮಾಡಿ ಮುಂಡಾಟಿಕೆ
ಬೇಕು ನನಗೆ ನೆಮ್ಮದಿಯ ನೆಲೆ
ಪುಟ್ಟ ಮನೆಯಂಗಳದಲಿ ತೆಂಗಿನಮರ
ನೆಮ್ಮದಿಯ ಶುದ್ಧ ಗಾಳಿ, ನೀರು
ಸಮವಸ್ತ್ರವಿಲ್ಲದ ಪುರುಷರು
ಬಂದೂಕಿಲ್ಲದ ಕೈಗಳು
ಜೀವಪೋಷಕ ಸಂಗಾತಿಗಳು
ಮನುಕುಲವನು ಪ್ರೀತಿಸುವ
ಕಾಬೂಲಿವಾಲಾಗಳು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...