ಭಾರತಿ! ಎಲ್ಲಿಗೆ ಬಂತೇ ನಿನ್ನ ಗತಿ

(“ನೂರು ದೇವರನು ನೂಕಾಚೆ ದೂರ ಭಾರತೀ ದೇವಿಯನು ಪೂಜಿಸುವ ಬಾರ”…. ಕುವೆಂಪು)

ದೇವಿ ಭಾರತಿ ತಾಯಿ ಭಾರತಿ ಎಲ್ಲಿಗೆ ಬಂತೇ ನಿನ್ನ ಗತಿ
ಯಾರಿಗೆ ಅವರೇ ಬಡಿದಾಡ್ತಾರೆ ಯಾರಿಗೆ ಬೇಕೇ ನಿನ ಚಿಂತಿ ||ಪ||

ಪುಣ್ಯಭೂಮಿ ನೀ ಗಣ್ಯಭೂಮಿ ಎಂದೇನೇನೋ ನಿನ ಹೊಗಳಿದರು
ದಿವ್ಯ ಭವ್ಯ ಭಾರತ ಅಂತಂದು ಬಾಯ್ತುಂಬ ಸುಳ್ಳೇ ಹಾಡಿದರು ||೧||

ಕೀರುತಿವಂತೆ ಖ್ಯಾತಿವಂತೆ ದಿಕ್ಕಿಲ್ಲದಂಥ ದುರ್ಗತಿ
ಯಾರಿಗಾಗಿ ನೀ ಬಾಳುವಿಯೇನೋ ಬದುಕಿದ್ದೂ ನೀ ಸತ್ತಿ ||೨||

ಲಂಡ ಭಂಡ ಪುಂಡಾಟದ ಕಂತ್ರಾಟ ರಾಜಕಾರಣಂದೋ ಯಾಪಾರ
ಹಾಡ ಹಗಲೆ ನಿನ್ನ ಲೂಟಿ ಮಾಡ್ಯಾರ ಮಂತ್ರಿ ಶಾಸಕರು ಕೈಯಾರ ||೩||

ವೋಟಿಗೆ ನೋಟನು ತೂರಿದ ಮಂತ್ರಿಗೆ ನಿನ್ನೆನಪ್ಹ್ಯಾಂಗ ಬರತೈತಿ
ಒಂದಕ್ಕ ನೂರ್ರಷ್ಟು ಬಳಕೊಳ್ಳಾಕ ಹಗಲಿಳ್ಳು ಸಾಲದು ಬಂದೈತೆ ||೪||

ಸಾವುಕಾರನಿಗೊ ಸಾವಿರ ಕೆಲಸ ಆಸ್ತಿ ಪಾಸ್ತಿ ಅಂತ ಬೆಳೆಸೋದೆ
ಬಡವರ ಬೆನ್ ಮ್ಯಾಲೆ ಸವ್ವಾರಿ ಮಾಡತಾ ದೇಶಾನ್ನ ನರಕಕೆ ಕಳಸೋದೆ ||೫||

ವ್ಯಾಪಾರಿ ತೂಗತಾನೆ ಅನ್ಯಾಯ ತಕ್ಕಡಿ ರೊಕ್ಕಾನೇ ಅವ್ಗೆ ಮನೆದೇವ್ರು
ಗಂಟು ಬಡ್ಡಿಗಳ ಹಣದ ಮೂಟೆಗಳು ದೇಶನ್ಯಾಕೆ ನೆನಸ್ತಾರೆ ಅಂಥಾವ್ರು ||೬||

ತಲೆಗಳ ಬೋಳಿಸಿ ಕೂಡಿಟ್ಟ ಭಂಡವಾಳ ಭಂಡತನವನ್ನೇ ಕಲಿಸ್ಯೈತಿ
ದೊಡ್ಡ ದೊಡ್ಡ ಬಿಜಿನೆಸು ದೊಡ್ಡದಾಗಿ ಬೆಳದಾವೆ ತಾಯಿಯ ಒಡಲೋ ಬರಿದೈತೆ ||೭||

ಲಂಚ ಲಂಚ ಅಂತ ನಾಲಿಗೆ ಚಾಚುತ ರೈತನ್ನ ರಗುತ ಹೀರುತ್ತ
ಉಬ್ಬುವ ಕೊಬ್ಬುವ ಅಧಿಕಾರಿಗಳಿಗೆ ದೇಶದ ಮಾತೇ ಅತ್ತತ್ತ ||೮||

ಸಂಬಳ ಸಾಲದು ಭಡತೀ ಸಾಲದು ಗಿಂಬಳಕಾಗೀ ಪೈಪೋಟಿ
ಸಾವಿರ ಲಕ್ಷದ ನೌಕರಿದಾರರು ತಾಯಿಗೆ ಸುಖವು ಯಾಪಾಟಿ ||೯||

ಊರೂರಿಗೊಬ್ಬೊಬ್ಬ ಜಗದ್ದ್ ಗುರುವು ಶ್ರೀಮಂತ ಶಿಷ್ಯರ ಒಡನಾಟ
ಭೇದವ ಬೆಳೆಸೀ ಬಡದಾಡಕ್ಹಚ್ಚಿ ಮೆರೆಯೋರ್ ದೇಶಕೆ ಭಂಡಾಟ ||೧೦||

ತಿಮ್ಮಪ್ಪ ಬೊಮ್ಮಪ್ಪ ಎಲ್ಲವ್ವ ಹುಲಿಗೆವ್ವ ನೂರಾರು ದೇವರು ಮನೆಮನೆಗೆ
ಎಲ್ಲಾವು ಜನರನು ಹರಕೊಂಡು ತಿನುವಾಗ ಭಾರತಿ ದೇವಿಗೆ ಏನ್ ಕೊನೆಗೆ ||೧೧||

ಪೂಜಾರಿ ಚಿಂತೆ ಕಾಣಿಕೆ ಕಡೆಗೆ ಭಕ್ತರ ಚಿಂತೆ ಹೊರಗಡೆಗೆ
ಪುರಾಣ ನೀತಿ ಹೇಳುವ ಶಾಸ್ತ್ರಿಗೆ ಸುಂಭಾವನೆಯೇ ಕಡೆ ಗಳಿಗೆ ||೧೨||

ಬರೆಯುವ ಕವಿಗೆ ಸನ್ಮಾನ ಭಾಷಣ ಕೊರೆವಗೆ ಧನಮಾನ
ಭಾರತ ಮಾತೆಯ ಎಲ್ಲರು ಬಳಸಿ ಲಂಪಟತನದಲೆ ದಿನಮಾನ ||೧೩||

ಹರೇದ ಹುಡುಗ್ರಿಗೆ ಬಣ್ಬಣ್ಣ ಹುಡುಕೋದು ಮೀಸೆ ಬಂದಾಗ ದೇಶ ಕಾಣದು
ಹರೇದ ಹುಡುಗ್ಗೆ‍ಗೆ ಬಣ್ಬಣ್ಣ ಮೆರೆಯೋದು ದೇಶ ಅಂತಂದ್ರೆ ಗೊತ್ತಾಗದು ||೧೪||

ಖಾಕೀಯ ಉಡುಪಿಗೆ ಕೇಸೀನ ಬ್ಯಾಟಿ ಖಾದಿ ಉಡುಪಿಗಂತು ದೇಶನೆ ಬ್ಯಾಟಿ
ಕರ್ರನ್ನ ಉಡುಪಿಗೆ ಕೊಲೆಗಡ್ಕುರನುಳುಸೋದು ನ್ಯಾಯಾಲಯ್ದಾಗೆ ನ್ಯಾಯ ಲೂಟಿ ||೧೫||

ದುಡಿಯುವ ರೈತಗೆ ಶ್ರಮ ಜೀವಿಗಳಿಗೆ ಹೊಟ್ಟೇನ ತುಂಬೋದೆ ಕಡುಚಿಂತೆ
ಸುಲಿದು ತಿನ್ನುವಂಥ ಹದ್ದು ಕಾಗೆಗಳ ಕೈಯಾಗೆ ನರಳುವ ಜೀವ ಚಿತೆ ||೧೬||

ನೆಲದ ಮಕ್ಕಳೇ ನಿನ್ನ ಮಕ್ಕಳು ಅವರ ದುಸ್ಥಿತಿಯೆ ನಿನ್ನ ಸ್ಥಿತಿ
ಮಣ್ಣಿನ ಮಕ್ಕಳು ಕಣ್ಣು ಬಿಟ್ಟು ನಿಲ್ಲೋವರೆಗೆ ತಾಯಿ ನಿನಗಂತೂ ಇದೇ ಗತಿ ||೧೭||

೧೩.೬.೮೬
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಳುಮಗ ಇಕ್ಯಾ
Next post ಬೆಪ್ಪು ಕಡಲು

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys