Home / ಕವನ / ಕವಿತೆ / ಭಾರತಿ! ಎಲ್ಲಿಗೆ ಬಂತೇ ನಿನ್ನ ಗತಿ

ಭಾರತಿ! ಎಲ್ಲಿಗೆ ಬಂತೇ ನಿನ್ನ ಗತಿ

(“ನೂರು ದೇವರನು ನೂಕಾಚೆ ದೂರ ಭಾರತೀ ದೇವಿಯನು ಪೂಜಿಸುವ ಬಾರ”…. ಕುವೆಂಪು)

ದೇವಿ ಭಾರತಿ ತಾಯಿ ಭಾರತಿ ಎಲ್ಲಿಗೆ ಬಂತೇ ನಿನ್ನ ಗತಿ
ಯಾರಿಗೆ ಅವರೇ ಬಡಿದಾಡ್ತಾರೆ ಯಾರಿಗೆ ಬೇಕೇ ನಿನ ಚಿಂತಿ ||ಪ||

ಪುಣ್ಯಭೂಮಿ ನೀ ಗಣ್ಯಭೂಮಿ ಎಂದೇನೇನೋ ನಿನ ಹೊಗಳಿದರು
ದಿವ್ಯ ಭವ್ಯ ಭಾರತ ಅಂತಂದು ಬಾಯ್ತುಂಬ ಸುಳ್ಳೇ ಹಾಡಿದರು ||೧||

ಕೀರುತಿವಂತೆ ಖ್ಯಾತಿವಂತೆ ದಿಕ್ಕಿಲ್ಲದಂಥ ದುರ್ಗತಿ
ಯಾರಿಗಾಗಿ ನೀ ಬಾಳುವಿಯೇನೋ ಬದುಕಿದ್ದೂ ನೀ ಸತ್ತಿ ||೨||

ಲಂಡ ಭಂಡ ಪುಂಡಾಟದ ಕಂತ್ರಾಟ ರಾಜಕಾರಣಂದೋ ಯಾಪಾರ
ಹಾಡ ಹಗಲೆ ನಿನ್ನ ಲೂಟಿ ಮಾಡ್ಯಾರ ಮಂತ್ರಿ ಶಾಸಕರು ಕೈಯಾರ ||೩||

ವೋಟಿಗೆ ನೋಟನು ತೂರಿದ ಮಂತ್ರಿಗೆ ನಿನ್ನೆನಪ್ಹ್ಯಾಂಗ ಬರತೈತಿ
ಒಂದಕ್ಕ ನೂರ್ರಷ್ಟು ಬಳಕೊಳ್ಳಾಕ ಹಗಲಿಳ್ಳು ಸಾಲದು ಬಂದೈತೆ ||೪||

ಸಾವುಕಾರನಿಗೊ ಸಾವಿರ ಕೆಲಸ ಆಸ್ತಿ ಪಾಸ್ತಿ ಅಂತ ಬೆಳೆಸೋದೆ
ಬಡವರ ಬೆನ್ ಮ್ಯಾಲೆ ಸವ್ವಾರಿ ಮಾಡತಾ ದೇಶಾನ್ನ ನರಕಕೆ ಕಳಸೋದೆ ||೫||

ವ್ಯಾಪಾರಿ ತೂಗತಾನೆ ಅನ್ಯಾಯ ತಕ್ಕಡಿ ರೊಕ್ಕಾನೇ ಅವ್ಗೆ ಮನೆದೇವ್ರು
ಗಂಟು ಬಡ್ಡಿಗಳ ಹಣದ ಮೂಟೆಗಳು ದೇಶನ್ಯಾಕೆ ನೆನಸ್ತಾರೆ ಅಂಥಾವ್ರು ||೬||

ತಲೆಗಳ ಬೋಳಿಸಿ ಕೂಡಿಟ್ಟ ಭಂಡವಾಳ ಭಂಡತನವನ್ನೇ ಕಲಿಸ್ಯೈತಿ
ದೊಡ್ಡ ದೊಡ್ಡ ಬಿಜಿನೆಸು ದೊಡ್ಡದಾಗಿ ಬೆಳದಾವೆ ತಾಯಿಯ ಒಡಲೋ ಬರಿದೈತೆ ||೭||

ಲಂಚ ಲಂಚ ಅಂತ ನಾಲಿಗೆ ಚಾಚುತ ರೈತನ್ನ ರಗುತ ಹೀರುತ್ತ
ಉಬ್ಬುವ ಕೊಬ್ಬುವ ಅಧಿಕಾರಿಗಳಿಗೆ ದೇಶದ ಮಾತೇ ಅತ್ತತ್ತ ||೮||

ಸಂಬಳ ಸಾಲದು ಭಡತೀ ಸಾಲದು ಗಿಂಬಳಕಾಗೀ ಪೈಪೋಟಿ
ಸಾವಿರ ಲಕ್ಷದ ನೌಕರಿದಾರರು ತಾಯಿಗೆ ಸುಖವು ಯಾಪಾಟಿ ||೯||

ಊರೂರಿಗೊಬ್ಬೊಬ್ಬ ಜಗದ್ದ್ ಗುರುವು ಶ್ರೀಮಂತ ಶಿಷ್ಯರ ಒಡನಾಟ
ಭೇದವ ಬೆಳೆಸೀ ಬಡದಾಡಕ್ಹಚ್ಚಿ ಮೆರೆಯೋರ್ ದೇಶಕೆ ಭಂಡಾಟ ||೧೦||

ತಿಮ್ಮಪ್ಪ ಬೊಮ್ಮಪ್ಪ ಎಲ್ಲವ್ವ ಹುಲಿಗೆವ್ವ ನೂರಾರು ದೇವರು ಮನೆಮನೆಗೆ
ಎಲ್ಲಾವು ಜನರನು ಹರಕೊಂಡು ತಿನುವಾಗ ಭಾರತಿ ದೇವಿಗೆ ಏನ್ ಕೊನೆಗೆ ||೧೧||

ಪೂಜಾರಿ ಚಿಂತೆ ಕಾಣಿಕೆ ಕಡೆಗೆ ಭಕ್ತರ ಚಿಂತೆ ಹೊರಗಡೆಗೆ
ಪುರಾಣ ನೀತಿ ಹೇಳುವ ಶಾಸ್ತ್ರಿಗೆ ಸುಂಭಾವನೆಯೇ ಕಡೆ ಗಳಿಗೆ ||೧೨||

ಬರೆಯುವ ಕವಿಗೆ ಸನ್ಮಾನ ಭಾಷಣ ಕೊರೆವಗೆ ಧನಮಾನ
ಭಾರತ ಮಾತೆಯ ಎಲ್ಲರು ಬಳಸಿ ಲಂಪಟತನದಲೆ ದಿನಮಾನ ||೧೩||

ಹರೇದ ಹುಡುಗ್ರಿಗೆ ಬಣ್ಬಣ್ಣ ಹುಡುಕೋದು ಮೀಸೆ ಬಂದಾಗ ದೇಶ ಕಾಣದು
ಹರೇದ ಹುಡುಗ್ಗೆ‍ಗೆ ಬಣ್ಬಣ್ಣ ಮೆರೆಯೋದು ದೇಶ ಅಂತಂದ್ರೆ ಗೊತ್ತಾಗದು ||೧೪||

ಖಾಕೀಯ ಉಡುಪಿಗೆ ಕೇಸೀನ ಬ್ಯಾಟಿ ಖಾದಿ ಉಡುಪಿಗಂತು ದೇಶನೆ ಬ್ಯಾಟಿ
ಕರ್ರನ್ನ ಉಡುಪಿಗೆ ಕೊಲೆಗಡ್ಕುರನುಳುಸೋದು ನ್ಯಾಯಾಲಯ್ದಾಗೆ ನ್ಯಾಯ ಲೂಟಿ ||೧೫||

ದುಡಿಯುವ ರೈತಗೆ ಶ್ರಮ ಜೀವಿಗಳಿಗೆ ಹೊಟ್ಟೇನ ತುಂಬೋದೆ ಕಡುಚಿಂತೆ
ಸುಲಿದು ತಿನ್ನುವಂಥ ಹದ್ದು ಕಾಗೆಗಳ ಕೈಯಾಗೆ ನರಳುವ ಜೀವ ಚಿತೆ ||೧೬||

ನೆಲದ ಮಕ್ಕಳೇ ನಿನ್ನ ಮಕ್ಕಳು ಅವರ ದುಸ್ಥಿತಿಯೆ ನಿನ್ನ ಸ್ಥಿತಿ
ಮಣ್ಣಿನ ಮಕ್ಕಳು ಕಣ್ಣು ಬಿಟ್ಟು ನಿಲ್ಲೋವರೆಗೆ ತಾಯಿ ನಿನಗಂತೂ ಇದೇ ಗತಿ ||೧೭||

೧೩.೬.೮೬
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...