ಹದ್ದು ಹದ್ದು ಹದ್ದು

ಹದ್ದು ಹದ್ದು ಹದ್ದು ಅಣ್ಣ ಸುತ್ತಮುತ್ತಲೂ
ರಣಹದ್ದುಗಳ ರಾಜ್ಯವಾಯ್ತು ಎತ್ತೆತ್ತಲೂ ||ಪ||

ರಕ್ತ ಮಾಂಸ ತಿನ್ನುತ್ತಾವೆ ಶಕ್ತಿ ಹೀರಿ ಒಗೆಯುತಾವೆ
ಗೊತ್ತೆ ಆಗದಂಥ ರೀತಿ ಕೊಲ್ಲುತಾವೆ
ಕೆಂಗಣ್ಣು ಕೆಕ್ಕರಿಸುತ ಕೊಕ್ಕು ತಿಕ್ಕಿ ಡೊಕ್ಕರಿಸುತ
ಹೆದರಿಸುತ್ತ ಬೆದರಿಸುತ್ತ ಸುಲಿಯುತಾವೆ ||೧||

ಪಂಚಾಯ್ತಿ ತಾಲೂಕು ಜಿಲ್ಲಾ ಕಛೇರಿಗಳಾಗೆ
ಹೊಂಚಾಕಿ ಕುಂತಾವೆ ಕುರ್ಚಿಗಳೊಳಗೆ
ಫೋಲೀಸು ಠಾಣದಾಗೆ ಕೋರ್ಟಿನ ತಾಣದಾಗೆ
ಆಸುಪತ್ರೆ ಅಲ್ಲಿ ಇಲ್ಲಿ ಎಲ್ಲ ಕಡೆಗೆ ||೨||

ಒಳ್ಳೇ ಬೆಣ್ಣೆ ಮಾತಿನ್ಯಾಗ ಮಣ್ಣು ತಿನಿಸಿ ಬಿಡುತಾವೆ
ಕಳ್ಳ ದಾರಿ ಸಂದುಗಳಾಗೆ ಕೈಯಾಡ್ತಾವೆ
ಮಳ್ಳ ಮಂದಿ ಕುರೀ ಮಂದೇ ಕಟುಕರ ಕೈಯಾಗ್ಗುಬ್ಬಿಯಂಗೆ
ಕಳ್ಳು ಹರದು ಕೂಗಿಕೊಂಡ್ರು ಚೂರಿ ಆಡ್ತಾವೆ ||೩||

ಬಿಳೀ ಬಟ್ಟೆ ಹಾಕಿಕೊಂಡು ಬಿಳೀ ಟೊಪ್ಗಿ ಇಟ್ಟುಕೊಂಡು
ಬೆಳ್ಳ ಬೆಳ್ಳನ್ನಗುವ ಚಿಮ್ಮಿ ಮಳ್ಮಾಡ್ತಾವೆ
ಓಟು ಕೊಡ್ರಿ ದೈವ ನಿಮ್ಮ ದಾಸನಂತ ಹೇಳಿಕೊಂಡು
ನೋಟು ಬಟ್ಟೆ ಬಾಟ್ಲಿ ಕೊಟ್ಟು ನಿಮ್ಮ ಕೊಳ್ತಾವೆ
ವೋಟು ಗೆದ್ದ ಮ್ಯಾಲೆ ಹದ್ದು ಕಾರುಗಳಾಗೆ ಹಾರತಾವೆ
ನೀಟಾಗಿ ಗದ್ದುಗೇರಿ ಲೂಟಿ ಮಾಡ್ತಾವೆ ||೪||

ಗುಡಿಗಳಾಗೆ ಹೊಟ್ಟೆ ಜುಟ್ಟು ಹಣೇ ಮೈಗೆ ನಾಮದ ಬೊಟ್ಟು
ಮಠಗಳಾಗೆ ಬೊಜ್ಜಿನ ಹದ್ದು ಭಕ್ತರನ್ನುಂಗೋ ಹದ್ದು
ಕಳ್ಳ ಸಂತೆ ಪ್ಯಾಟಿಗಳಾಗೆ ದಲ್ಲಾಳಿ ಮಳಿಗೆಗಳಾಗೆ
ಪೆಂಡೆ ಪೆಂಡೆ ಝಣಝಣಾಂತ ರಣ ರಣಾ ಹದ್ದು ||೫||

ದರಸದುದ್ದುಕ್ ರಕ್ತ ಬೆವರು ಸುರಿಸಿ ರೈತ ದುಡ್ಡು ಒಯ್ದು
ಮಾರುಕಟ್ಟೆ ಅಂಗಡ್ಯಾಗೆ ಹದ್ದಿಗ್ಹಾಕ್ತಾನೆ
ರಟ್ಟೆ ಮುರ್ದು ಜೀವಾ ಹಿಂಡಿ ಫ್ಯಾಕ್ಟರಿಯೊಳಗೆ ದುಡಿಯುವಂಥ
ಕೆಲಸಗಾರ ಭಂಡವಾಳಿಗ ಹದ್ದಿಗ್ಹಾಕ್ತಾನೆ ||೬||

ಹದ್ದುಗಳಿಗೆ ಹೆದರಿ ಹೆದರಿ ಬಾಳಿದ್ದಿನ್ನು ಸಾಕೋ ಯಣ್ಣಾ
ಒದ್ದೋದ್ದವ್ನ ಎಳಿಯೋ ಅಣ್ಣ
ಗುದ್ದಿದ್ರೇನೆ ಸರಿಯೋ ಅಣ್ಣ
ಜನಾ ದುಡ್ದುದ್ ತಿಂಬೋವಂಥ ಹದ್ದುಗಳ್ಹಣಿರಿ
ಜನಗಳ ಹೆಸರಿನ್ಯಾಗೆ ಗಳಸೋ ಬಸುರ ತುಳೀರಿ ||೭||

ಖಾದೀ ಬಟ್ಟೆ ಮಂತ್ರಿಯಾಗ್ಲಿ ಪ್ಯಾಂಟು ಬೂಟು ಆಫೀಸರಾಗ್ಲಿ
ಖಾಕಿ ಬಟ್ಟೆ ಖಾದಿಯಾಗ್ಲಿ ಜನಗಳ ಸೇವೆ ಮಾಡ್ಲಿ
ನಮ್ಮ ಕೈಕಾಲೊತ್ತೋದ್ ಬ್ಯಾಡ ನಮ್ಮ ಕೆಲಸ ಮಾಡ್ಲಿ
ದನಗಳಂಗೆ ನಮ್ಮನ್ನೋಡ್ದೆ ಮನಸ್ಯಾರಂಗೆ ನೋಡ್ಲಿ ||೮||

ರೆಕ್ಕೆ ಕಿತ್ರಿ ಪುಕ್ಕ ಹಿರೀರಿ ಕೊಕ್ಕು ಸೀಳಿ ಹಾಕ್ರಿ
ಹದ್ದುಗಳಿಂದ ದೇಶಾ ಸುಡುಗಾಡಾಗೋಯ್ತಲ್ಲ ಇಕ್ರಿ
ಹದ್ದಿನ ರೂಪ ಕಂಡ ಕೂಡ್ಲೆ ತಡಮಾಡಿದ್ರೆ ತಪ್ಪು
ನೋಡೀ ನೋಡೀ ಸುಮ್ನೆ ಇದ್ರೆ ನಾವೇ ಅಲ್ಲೇ ಬೆಪ್ಪು ||೯||

೬-೪-೮೬
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಂದೀಲು
Next post ನಗೆ ಡಂಗುರ – ೭೭

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…