Home / ಕವನ / ಕವಿತೆ / ಹದ್ದು ಹದ್ದು ಹದ್ದು

ಹದ್ದು ಹದ್ದು ಹದ್ದು

ಹದ್ದು ಹದ್ದು ಹದ್ದು ಅಣ್ಣ ಸುತ್ತಮುತ್ತಲೂ
ರಣಹದ್ದುಗಳ ರಾಜ್ಯವಾಯ್ತು ಎತ್ತೆತ್ತಲೂ ||ಪ||

ರಕ್ತ ಮಾಂಸ ತಿನ್ನುತ್ತಾವೆ ಶಕ್ತಿ ಹೀರಿ ಒಗೆಯುತಾವೆ
ಗೊತ್ತೆ ಆಗದಂಥ ರೀತಿ ಕೊಲ್ಲುತಾವೆ
ಕೆಂಗಣ್ಣು ಕೆಕ್ಕರಿಸುತ ಕೊಕ್ಕು ತಿಕ್ಕಿ ಡೊಕ್ಕರಿಸುತ
ಹೆದರಿಸುತ್ತ ಬೆದರಿಸುತ್ತ ಸುಲಿಯುತಾವೆ ||೧||

ಪಂಚಾಯ್ತಿ ತಾಲೂಕು ಜಿಲ್ಲಾ ಕಛೇರಿಗಳಾಗೆ
ಹೊಂಚಾಕಿ ಕುಂತಾವೆ ಕುರ್ಚಿಗಳೊಳಗೆ
ಫೋಲೀಸು ಠಾಣದಾಗೆ ಕೋರ್ಟಿನ ತಾಣದಾಗೆ
ಆಸುಪತ್ರೆ ಅಲ್ಲಿ ಇಲ್ಲಿ ಎಲ್ಲ ಕಡೆಗೆ ||೨||

ಒಳ್ಳೇ ಬೆಣ್ಣೆ ಮಾತಿನ್ಯಾಗ ಮಣ್ಣು ತಿನಿಸಿ ಬಿಡುತಾವೆ
ಕಳ್ಳ ದಾರಿ ಸಂದುಗಳಾಗೆ ಕೈಯಾಡ್ತಾವೆ
ಮಳ್ಳ ಮಂದಿ ಕುರೀ ಮಂದೇ ಕಟುಕರ ಕೈಯಾಗ್ಗುಬ್ಬಿಯಂಗೆ
ಕಳ್ಳು ಹರದು ಕೂಗಿಕೊಂಡ್ರು ಚೂರಿ ಆಡ್ತಾವೆ ||೩||

ಬಿಳೀ ಬಟ್ಟೆ ಹಾಕಿಕೊಂಡು ಬಿಳೀ ಟೊಪ್ಗಿ ಇಟ್ಟುಕೊಂಡು
ಬೆಳ್ಳ ಬೆಳ್ಳನ್ನಗುವ ಚಿಮ್ಮಿ ಮಳ್ಮಾಡ್ತಾವೆ
ಓಟು ಕೊಡ್ರಿ ದೈವ ನಿಮ್ಮ ದಾಸನಂತ ಹೇಳಿಕೊಂಡು
ನೋಟು ಬಟ್ಟೆ ಬಾಟ್ಲಿ ಕೊಟ್ಟು ನಿಮ್ಮ ಕೊಳ್ತಾವೆ
ವೋಟು ಗೆದ್ದ ಮ್ಯಾಲೆ ಹದ್ದು ಕಾರುಗಳಾಗೆ ಹಾರತಾವೆ
ನೀಟಾಗಿ ಗದ್ದುಗೇರಿ ಲೂಟಿ ಮಾಡ್ತಾವೆ ||೪||

ಗುಡಿಗಳಾಗೆ ಹೊಟ್ಟೆ ಜುಟ್ಟು ಹಣೇ ಮೈಗೆ ನಾಮದ ಬೊಟ್ಟು
ಮಠಗಳಾಗೆ ಬೊಜ್ಜಿನ ಹದ್ದು ಭಕ್ತರನ್ನುಂಗೋ ಹದ್ದು
ಕಳ್ಳ ಸಂತೆ ಪ್ಯಾಟಿಗಳಾಗೆ ದಲ್ಲಾಳಿ ಮಳಿಗೆಗಳಾಗೆ
ಪೆಂಡೆ ಪೆಂಡೆ ಝಣಝಣಾಂತ ರಣ ರಣಾ ಹದ್ದು ||೫||

ದರಸದುದ್ದುಕ್ ರಕ್ತ ಬೆವರು ಸುರಿಸಿ ರೈತ ದುಡ್ಡು ಒಯ್ದು
ಮಾರುಕಟ್ಟೆ ಅಂಗಡ್ಯಾಗೆ ಹದ್ದಿಗ್ಹಾಕ್ತಾನೆ
ರಟ್ಟೆ ಮುರ್ದು ಜೀವಾ ಹಿಂಡಿ ಫ್ಯಾಕ್ಟರಿಯೊಳಗೆ ದುಡಿಯುವಂಥ
ಕೆಲಸಗಾರ ಭಂಡವಾಳಿಗ ಹದ್ದಿಗ್ಹಾಕ್ತಾನೆ ||೬||

ಹದ್ದುಗಳಿಗೆ ಹೆದರಿ ಹೆದರಿ ಬಾಳಿದ್ದಿನ್ನು ಸಾಕೋ ಯಣ್ಣಾ
ಒದ್ದೋದ್ದವ್ನ ಎಳಿಯೋ ಅಣ್ಣ
ಗುದ್ದಿದ್ರೇನೆ ಸರಿಯೋ ಅಣ್ಣ
ಜನಾ ದುಡ್ದುದ್ ತಿಂಬೋವಂಥ ಹದ್ದುಗಳ್ಹಣಿರಿ
ಜನಗಳ ಹೆಸರಿನ್ಯಾಗೆ ಗಳಸೋ ಬಸುರ ತುಳೀರಿ ||೭||

ಖಾದೀ ಬಟ್ಟೆ ಮಂತ್ರಿಯಾಗ್ಲಿ ಪ್ಯಾಂಟು ಬೂಟು ಆಫೀಸರಾಗ್ಲಿ
ಖಾಕಿ ಬಟ್ಟೆ ಖಾದಿಯಾಗ್ಲಿ ಜನಗಳ ಸೇವೆ ಮಾಡ್ಲಿ
ನಮ್ಮ ಕೈಕಾಲೊತ್ತೋದ್ ಬ್ಯಾಡ ನಮ್ಮ ಕೆಲಸ ಮಾಡ್ಲಿ
ದನಗಳಂಗೆ ನಮ್ಮನ್ನೋಡ್ದೆ ಮನಸ್ಯಾರಂಗೆ ನೋಡ್ಲಿ ||೮||

ರೆಕ್ಕೆ ಕಿತ್ರಿ ಪುಕ್ಕ ಹಿರೀರಿ ಕೊಕ್ಕು ಸೀಳಿ ಹಾಕ್ರಿ
ಹದ್ದುಗಳಿಂದ ದೇಶಾ ಸುಡುಗಾಡಾಗೋಯ್ತಲ್ಲ ಇಕ್ರಿ
ಹದ್ದಿನ ರೂಪ ಕಂಡ ಕೂಡ್ಲೆ ತಡಮಾಡಿದ್ರೆ ತಪ್ಪು
ನೋಡೀ ನೋಡೀ ಸುಮ್ನೆ ಇದ್ರೆ ನಾವೇ ಅಲ್ಲೇ ಬೆಪ್ಪು ||೯||

೬-೪-೮೬
*****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...