Home / ಕಥೆ / ಕಿರು ಕಥೆ / ಗುರುವಿಗೆ ಕಾಣಿಕೆ

ಗುರುವಿಗೆ ಕಾಣಿಕೆ

ಶಿಷ್ಯರನೇಕರು, ತಮಗೆ ತೋರಿದ ಕಾಣಿಕೆಯಾಗಿ ಬುಟ್ಟಿ, ಹಣ್ಣು, ಹೂವು, ಚಿನ್ನ, ಬೆಳ್ಳಿ, ಹಣ ಮೊದಲಾದವುಗಳನ್ನು ಗುರುಗಳಿಗೆ ತಂದು ಕೊಡುತ್ತಿದ್ದರು. ಶಿಷ್ಯ ರಾಮನಿಗೆ ಎನೂ ತೋಚಲಿಲ್ಲ. ಸೀದಾ ಗುರುಗಳಲ್ಲಿಗೆ ಬಂದು “ನನಗೆ ಏನು ಕಾಣಿಕೆ ಕೊಡಲು ತಿಳಿಯುತ್ತಿಲ್ಲ” ಎಂದ “ಶಿಷ್ಯಾ! ಏಕೆ ಒದ್ದಾಡುತ್ತಿರುವೆ? ಒಣಗಿದ ಕಟ್ಟಗಿಯನ್ನು ಒಂದಿಷ್ಟು ಕೊಡು, ಸಾಕು: ಎಂದರು.

“ಇದೇನು ಗುರುವರ್ಯಾ! ವಿಚಿತ್ರವಾಗಿ ಹೇಳುತ್ತಿದ್ದಿರಿ?” ಎಂದ ಶಿಷ್ಯ. “ಶಿಷ್ಯಾ! ಇದು ನನಗೆ ಅತ್ಯಂತ ಪ್ರಿಯವಾದದ್ದು, ಎಲ್ಲರು ಕೊಡುವ ಚಿನ್ನ, ಬೆಳ್ಳಿ, ಮನೆ, ಹಣ, ಇವುಗಳಲ್ಲಿ ನನಗೆ ಕಿಂಚಿತ್ತು ಬೆಲೆ ಇಲ್ಲ. ನೀನು ಒಣಗಿದ ಕಟ್ಟಿಗೆಯ ಗಂಟು ಕೊಟ್ಟಾಗ ನೀ ಅರಿವಿನ ಮಾರ್ಗದಲ್ಲಿ ನಡೆಯಲು ಅತ್ಯಂತ ಉಪಯೋಗಕಾರಿ.” ಎಂದರು. ಅದು ಹೇಗೆ ಗುರುಗಳೇ?” ಎಂದ. ನಿನ್ನ ಗತ ಬಾಳಿನಿಂದ ದೂರವಿರಿಸಿ, ನಿನ್ನ ಮನದ ನಕಾರಾತ್ಮಕ ಭಾವನೆಗಳನ್ನು ಸುಟ್ಟು, ಜ್ಞಾನದ ಬೆಂಕಿಯಲ್ಲಿ ದಹಿಸಿ ಅರಿವಿನ ಈ ಕ್ಷಣದ ಬೆಳಕಿನ ಮಾರ್ಗ ತೋರುವುದು, ಎಂದಾಗ ಶಿಷ್ಯನ ಎದೆ ತುಂಬಿತು. ಸ್ವಾಮಿರಾಮ ಗುರುಗಳ ಪಾದಕ್ಕೆ ಎರಗಿದ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...