Home / ಕಥೆ / ಕಿರು ಕಥೆ / ಕಲ್ಲು – ಮುಳ್ಳು

ಕಲ್ಲು – ಮುಳ್ಳು

ಕಲ್ಲು ಮುಳ್ಳಿನ ನಡುವೆ ಒಮ್ಮೆ ಹೀಗೆ ಮಾತುಕತೆ ನಡೆದಿತ್ತು. ಕಲ್ಲು ಬಂಡೆಗೆ ಆತು ಬೆಳದಿದ್ದ ಮುಳ್ಳಿನ ಪೊದೆ ಹೇಳಿತು-

“ಏಕೆ ನನ್ನ ಬಗಲಲ್ಲಿ ಇರುವೆ? ನಾನು ನಿನ್ನ ಸನಿಹಕ್ಕೆ ಕರೆಯಲಿಲ್ಲ.”

“ನಿನ್ನ ಚೂಪು ಮುಳ್ಳಿನ ಮೂಗು ಯಾರಿಗೂ ಬೇಡ. ನನ್ನ ಹತ್ತಿರ ಬರುವ ಮನುಷ್ಯರು ನೀನಿದ್ದರೆ, ಹೆದರುತ್ತಾರೆ. ನನ್ನ ಸಂಗ ಮಾಡದೆ ದೂರ ಹೋಗುತ್ತಾರೆ. ಅದಕ್ಕೆ ನೀನು ಎಲ್ಲಿಗಾದರೂ ಹೋಗಿ ನಿನ್ನ ದಾರಿ ನೋಡಿಕೊ” ಎಂದಿತು ಕಲ್ಲು ಬಂಡೆ. ಮುಳ್ಳು ಮುನಿಸಿ ಓಡಿ ಬಂದು ದಾರಿಯಲ್ಲಿ ತನ್ನ ನೆಲೆ ನಿಲ್ಲಿಸಿತು. ಹೋಗಿ ಬರುವ ಪಥಿಕರೆಲ್ಲರೂ ಬೈಗಳ ಸುರಿಮಳೆ ಸುರಿದು ಕಾಲಿಗೆ ಚುಚ್ಚಿದ ಮುಳ್ಳನ್ನು ಕಿತ್ತೆಸೆಯುತ್ತಿದ್ದರು. ಮುಳ್ಳಿನ ಮನಕೆ ಬಹಳ ನೋವಾಯಿತು.

“ದೇವರೇ! ನಾನು ಯಾರಿಗೂ ಬೇಡದವನನ್ನಾಗಿ ಏಕೆ ಸೃಷ್ಟಿಸಿದೆ? ಎಲ್ಲರಿಂದಲೂ ನನಗೆ ಬೈಗಳು ನನ್ನ ಮೆಚ್ಚಿಕೊಳ್ಳುವವರಾರು ಇಲ್ಲ. ನಾನು ಏನು ಮಾಡಲಿ? ನನ್ನ ಜೀವನ ಸಾರ್ಥಕವಾಗಲಿಲ್ಲ. ನಾನು ಬದುಕಿದ್ದರೇನು ಫಲ?” ಎಂದು ಪರಿತಪಿಸಿತು. ಮುಳ್ಳಿನ ಆರ್ತಾಲಾಪವನ್ನು ಕೇಳಿದ ಮಹಾದೇವ ಹೇಳಿದ-

“ಅಳಬೇಡ ಮುಳ್ಳೆ! ನಿನ್ನ ಬಾಳ ಸಾರ್ಥಕತೆಗೆ ಒಂದು ದಾರಿ ಇದೆ” ಎಂದು.

ಮುಳ್ಳು ಮುಸಿ ಮುಸಿ ನಕ್ಕು ಹಲ್ಲುಕಿರಿಯಿತು. ಧನ್ಯತೆಯನ್ನು ಸೂಚಿಸಿತು. ತನ್ನ ಬಾಳಿಗೆ ದಾರಿ ತೋರಲು ಕೇಳಿತು.

“ನಾನು ಸೃಷ್ಟಿಸಿದ ಎಲ್ಲದರಲ್ಲೂ ಜೀವ ಚೇತನವಿದೆ. ಯಾವುದೂ ಸಾರ್ಥಕ, ನಿರರ್ಥಕ ಎಂದು ಪರಿಗಣಿಸಲಾಗುವುದಿಲ್ಲ. ಜಗದ ಮುಳ್ಳು, ಕಲ್ಲು, ಹುಲ್ಲು, ಗಿಡ, ಮರ, ಹೂವು ಇನ್ನು ಎಲ್ಲಾ ಸರ್ವಸ್ಯವೂ ದೈವ ಸೃಷ್ಟಿಯೇ. ನೀನು ಇನ್ನು ಮೇಲೆ ಮರುಗಬೇಡ.

ನಿನ್ನನ್ನು ನಾನು ಅಂಗರಕ್ಷಕನಾಗಿ ನೇಮಿಸುವೆ”- ಎಂದ ಮಹಾದೇವ.

“ಬೇರೆಯವರನ್ನು ಚುಚ್ಚಿವಿನೆಂಬ ಕಳಂಕ ಹೊತ್ತ ನಾನು, ಅಂಗರಕ್ಷಕನಾಗಲು ಸಾಧ್ಯವೇ? ಅದು ಯಾರಿಗೆ, ಹೇಗೆ ಎಂದು ಕೇಳಿತು? -ಮುಳ್ಳು

“ಸುಂದರ ಗುಲಾಬಿ ಹೂವಿಗೆ ಇನ್ನು ಮೇಲೆ ನೀನು ಅಂಗರಕ್ಷಕ, ಗುಲಾಬಿ ಸೌಂದರ್ಯ ಭಕ್ಷಕರಿಗೆ ನೀನು ಮುಳ್ಳು ಚುಚ್ಚಿ ರಕ್ಷಣೆ ಮಾಡು” ಎಂದ ಮಹದೇವ.

ಮುಳ್ಳಿನ ಮನಸ್ಸು ಹರ್ಷೋಲ್ಲಾಸಿತವಾಯಿತು. ಗುಲಾಬಿ ಸುಮನದ ಬಳಿ ಸ್ಥಾನ ಕೊಟ್ಟ ದೈವಕ್ಕೆ ಚಿರ ಋಣಿಯಾಗಿ ನಮಿಸಿತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...