Home / ಕಥೆ / ಕಿರು ಕಥೆ / ಕಲ್ಲು – ಮುಳ್ಳು

ಕಲ್ಲು – ಮುಳ್ಳು

ಕಲ್ಲು ಮುಳ್ಳಿನ ನಡುವೆ ಒಮ್ಮೆ ಹೀಗೆ ಮಾತುಕತೆ ನಡೆದಿತ್ತು. ಕಲ್ಲು ಬಂಡೆಗೆ ಆತು ಬೆಳದಿದ್ದ ಮುಳ್ಳಿನ ಪೊದೆ ಹೇಳಿತು-

“ಏಕೆ ನನ್ನ ಬಗಲಲ್ಲಿ ಇರುವೆ? ನಾನು ನಿನ್ನ ಸನಿಹಕ್ಕೆ ಕರೆಯಲಿಲ್ಲ.”

“ನಿನ್ನ ಚೂಪು ಮುಳ್ಳಿನ ಮೂಗು ಯಾರಿಗೂ ಬೇಡ. ನನ್ನ ಹತ್ತಿರ ಬರುವ ಮನುಷ್ಯರು ನೀನಿದ್ದರೆ, ಹೆದರುತ್ತಾರೆ. ನನ್ನ ಸಂಗ ಮಾಡದೆ ದೂರ ಹೋಗುತ್ತಾರೆ. ಅದಕ್ಕೆ ನೀನು ಎಲ್ಲಿಗಾದರೂ ಹೋಗಿ ನಿನ್ನ ದಾರಿ ನೋಡಿಕೊ” ಎಂದಿತು ಕಲ್ಲು ಬಂಡೆ. ಮುಳ್ಳು ಮುನಿಸಿ ಓಡಿ ಬಂದು ದಾರಿಯಲ್ಲಿ ತನ್ನ ನೆಲೆ ನಿಲ್ಲಿಸಿತು. ಹೋಗಿ ಬರುವ ಪಥಿಕರೆಲ್ಲರೂ ಬೈಗಳ ಸುರಿಮಳೆ ಸುರಿದು ಕಾಲಿಗೆ ಚುಚ್ಚಿದ ಮುಳ್ಳನ್ನು ಕಿತ್ತೆಸೆಯುತ್ತಿದ್ದರು. ಮುಳ್ಳಿನ ಮನಕೆ ಬಹಳ ನೋವಾಯಿತು.

“ದೇವರೇ! ನಾನು ಯಾರಿಗೂ ಬೇಡದವನನ್ನಾಗಿ ಏಕೆ ಸೃಷ್ಟಿಸಿದೆ? ಎಲ್ಲರಿಂದಲೂ ನನಗೆ ಬೈಗಳು ನನ್ನ ಮೆಚ್ಚಿಕೊಳ್ಳುವವರಾರು ಇಲ್ಲ. ನಾನು ಏನು ಮಾಡಲಿ? ನನ್ನ ಜೀವನ ಸಾರ್ಥಕವಾಗಲಿಲ್ಲ. ನಾನು ಬದುಕಿದ್ದರೇನು ಫಲ?” ಎಂದು ಪರಿತಪಿಸಿತು. ಮುಳ್ಳಿನ ಆರ್ತಾಲಾಪವನ್ನು ಕೇಳಿದ ಮಹಾದೇವ ಹೇಳಿದ-

“ಅಳಬೇಡ ಮುಳ್ಳೆ! ನಿನ್ನ ಬಾಳ ಸಾರ್ಥಕತೆಗೆ ಒಂದು ದಾರಿ ಇದೆ” ಎಂದು.

ಮುಳ್ಳು ಮುಸಿ ಮುಸಿ ನಕ್ಕು ಹಲ್ಲುಕಿರಿಯಿತು. ಧನ್ಯತೆಯನ್ನು ಸೂಚಿಸಿತು. ತನ್ನ ಬಾಳಿಗೆ ದಾರಿ ತೋರಲು ಕೇಳಿತು.

“ನಾನು ಸೃಷ್ಟಿಸಿದ ಎಲ್ಲದರಲ್ಲೂ ಜೀವ ಚೇತನವಿದೆ. ಯಾವುದೂ ಸಾರ್ಥಕ, ನಿರರ್ಥಕ ಎಂದು ಪರಿಗಣಿಸಲಾಗುವುದಿಲ್ಲ. ಜಗದ ಮುಳ್ಳು, ಕಲ್ಲು, ಹುಲ್ಲು, ಗಿಡ, ಮರ, ಹೂವು ಇನ್ನು ಎಲ್ಲಾ ಸರ್ವಸ್ಯವೂ ದೈವ ಸೃಷ್ಟಿಯೇ. ನೀನು ಇನ್ನು ಮೇಲೆ ಮರುಗಬೇಡ.

ನಿನ್ನನ್ನು ನಾನು ಅಂಗರಕ್ಷಕನಾಗಿ ನೇಮಿಸುವೆ”- ಎಂದ ಮಹಾದೇವ.

“ಬೇರೆಯವರನ್ನು ಚುಚ್ಚಿವಿನೆಂಬ ಕಳಂಕ ಹೊತ್ತ ನಾನು, ಅಂಗರಕ್ಷಕನಾಗಲು ಸಾಧ್ಯವೇ? ಅದು ಯಾರಿಗೆ, ಹೇಗೆ ಎಂದು ಕೇಳಿತು? -ಮುಳ್ಳು

“ಸುಂದರ ಗುಲಾಬಿ ಹೂವಿಗೆ ಇನ್ನು ಮೇಲೆ ನೀನು ಅಂಗರಕ್ಷಕ, ಗುಲಾಬಿ ಸೌಂದರ್ಯ ಭಕ್ಷಕರಿಗೆ ನೀನು ಮುಳ್ಳು ಚುಚ್ಚಿ ರಕ್ಷಣೆ ಮಾಡು” ಎಂದ ಮಹದೇವ.

ಮುಳ್ಳಿನ ಮನಸ್ಸು ಹರ್ಷೋಲ್ಲಾಸಿತವಾಯಿತು. ಗುಲಾಬಿ ಸುಮನದ ಬಳಿ ಸ್ಥಾನ ಕೊಟ್ಟ ದೈವಕ್ಕೆ ಚಿರ ಋಣಿಯಾಗಿ ನಮಿಸಿತು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...