Home / ಕಥೆ / ಕಿರು ಕಥೆ / ನಿರ್ಧಾರ

ನಿರ್ಧಾರ

ಒಮ್ಮೆ ಒಂದು ಪಕ್ಷಿ, ಗೂಡಿನಲ್ಲಿಟ್ಟ, ಮೊಟ್ಟೆಯನ್ನು ದಿಟ್ಟಿಸಿ ನೋಡುತಿತ್ತು. ಈ ಮೊಟ್ಟೆಯಿಂದ ಹೊರ ಬರುವ ನನ್ನ ಮರಿ ಹಕ್ಕಿ, ಎಷ್ಟು ಕಠಿಣ ಜಗತ್ತನ್ನು ಎದುರಿಸಬೇಕೆಂದು ಯೋಚಿಸುತಿತ್ತು. ಗಾಳಿ-ಮಳೆ, ಗುಡುಗು-ಮಿಂಚು, ಶತ್ರುಮಿತ್ರರ ಹಾವಳಿಯಿಂದ ಹೇಗೆ ನನ್ನ ಈ ಪುಟ್ಟ ಕಂದಮ್ಮನನ್ನು ಸಂರಕ್ಷಿಸಲಿ ಎಂದು ಚಿಂತೆಗೊಳಗಾಯಿತು. ಮೊಟ್ಟೆ ಒಳಗಿಂದ ಮರಿಯೂ ತಾಯಿಯ ಗಾಭರಿಯ ಆತಂಕಕ್ಕೆ ಓಗೊಟ್ಟು ತನ್ನ ಭಯವನ್ನು ವ್ಯಕ್ತಪಡಿಸಿತು.

“ಅಮ್ಮಾ! ನನಗೆ ಹೊರಗೆ ಬರಲು ಬಹಳ ಭಯವಾಗುತ್ತಿದೆ” ಎಂದಿತು.

“ಮಗು, ನೀ ಭಯ ಪಡಬೇಡ. ನಾನು, ಕಟ್ಟಿರುವ ಮೊಟ್ಟೆಯ ಕೋಟೆಯಲ್ಲಿ ನೀ ಹಾಯಾಗಿರು. ನೀನು ಈ ಕಷ್ಟದ ಪ್ರಪಂಚಕ್ಕೆ ಬಂದು ಕಷ್ಟ ಪಡುವುದು ಬೇಡ” ಎಂದಿತು ತಾಯಿ ಹಕ್ಕಿ.

ದಿನವೂ ತಾಯಿಹಕ್ಕಿ, ಆಗಸದಾದ್ಯಂತ ಹಾರಾಡಿ ಬಂದು ಮೊಟ್ಟೆ ಒಳಗಿನ ಮರಿಮಗುವಿಗೆ ಎಲ್ಲಾ ಸುದ್ದಿ ಹೇಳುತ್ತಿತ್ತು. ವನದಲ್ಲಿ ಬಿಟ್ಟ ಮೊಗ್ಗು, ಹೂಗಳ ಬಗ್ಗೆ, ಎಲೆ, ಕಾಯಿ, ಹಣ್ಣುಗಳ ಬಗ್ಗೆ ವರ್ಣಿಸಿ ಹೇಳುತ್ತಿತ್ತು. ಋತುಗಳ ಬದಲಾವಣೆಯಾದಾಗಲೂ ಎಲ್ಲಾ ವರದಿ ಒಪ್ಪಿಸುತ್ತಿತ್ತು.

ಮಳೆ ಬಂದಾಗ “ಮಗು ನಿನ್ನ ತೋಯದಂತೆ ಮಾಡಿರುವೆ ಅಲ್ಲವೇ?” ಎಂದಿತು.

“ಅಮ್ಮಾ! ಮಳೆ ಎಂದರೇನು? ಮಿಂಚು ಅಂದರೇನು? ನೋಡಬೇಕು ಅನಿಸುತ್ತಿದೆ. ವನದ ಹೂವು, ಹಣ್ಣು ಎಲ್ಲಾ ನೋಡಬೇಕು ಅನ್ನಿಸುತ್ತಿದೆ.” ಎಂದು ಮರಿಹಕ್ಕಿ ಅಮ್ಮನಲ್ಲಿ ಹೇಳಿಕೊಂಡಿತು. “ಮಗು! ಹೋಗಲಿ ನಿನ್ನ ಮೊಟ್ಟೆಯ ಕೋಟೆಗೆ ಬಂದು ಸಣ್ಣ ಕಿಡಕಿಯ ತೂತು ಮಾಡುತ್ತೇನೆ. ನೀನು ಅದರಿಂದ ಜಗವನ್ನು ನೋಡು” ಎಂದಿತು.

ಮೊಟ್ಟೆ ತೂತಿನ ಕಿಡಕಿಯಿಂದ ಮರಿಹಕ್ಕಿ ಜಗವನ್ನು ನೋಡಲಾರಂಭಿಸಿತು. ಜಗದ ಬಿಸಿಲ ಕಿರಣ, ಬೆಳದಿಂಗಳು, ಮಂದಮಾರುತ, ಎಲ್ಲವೂ ಕಿಡಕಿಯಿಂದ ಒಳಹೊಕ್ಕು ಮರಿಹಕ್ಕಿಯನ್ನು ಮೋಹಿಸಿದವು. ಮರಿಗೆ ಜಗದಲ್ಲಿ ಮೋಹ ಹುಟ್ಟಿತು.

ಜಗದ ಮೋಹಕತೆ ಜೊತೆಗೆ ಚಿಕ್ಕ ಹುಳು ಹುಪ್ಪಟೆಗಳು ಮೊಟ್ಟೆ ಒಳಗೆ ಬಂದು ಮರಿ ಹಕ್ಕಿಯನ್ನು ಕಾಡಲಾರಂಭಿಸಿದವು. ಮರಿಗೆ ಮೊಟ್ಟೆಯ ಕೋಟೆಯಲ್ಲಿ ಉಸಿರುಕಟ್ಟಲಾರಂಭಿಸಿತು. ಒಂದು ದಿನ “ಅಮಾ!” ಎಂದು ಚೀರಿಕೊಂಡು ಮೊಟ್ಟೆಯಿಂದ ಹೊರಬಂದಿತು.

ತಾಯಿ ಹಕ್ಕಿ “ಇದೇನು ಕೆಲಸ ಮಾಡಿದೆ ಲಕ್ಷ್ಮಣ ರೇಖೆಯಂತೆ ಇದ್ದ ಮೊಟ್ಟೆ ಹೊಸಿಲು ದಾಟಿ ಬಂದು ಬಿಟ್ಟೆಯಾ? ಮರಿಹಕ್ಕಿ” ಎಂದಿತು. “ಅಮ್ಮಾ! ಮೊಟ್ಟೆಯಲ್ಲಿ ಕಣ್ಣುಮುಚ್ಚಿ ಕೂತರೆ ನನ್ನ ರೆಕ್ಕೆ ಬಲಿಯುವುದೇ? ನಾನು ಆಗಸ ನೋಡುವುದೆಂದು? ಭೂಮಿ ಸುತ್ತುವುದೆಂದು? ನಿನ್ನ ರೆಕ್ಕೆಯ ನೆರಳಿರುವಾಗ ಮೊಟ್ಟೆಯ ಕೋಟೆ ಏಕೆ?” ಎಂದು ಮೆತ್ತ ಮೆತ್ತಗೆ ಹಾರುತ್ತ ಆಗಸ ಸೇರಿತು.

ತಾಯಿಹಕ್ಕಿ ಆನಂದ ಬಾಷ್ಪ ಸುರಿಸುತ್ತ ಕಂದಮ್ಮನ ಸಾಹಸವನ್ನು ಮೆಚ್ಚಿಕೊಂಡಿತು. ಆಗಸದ ಸೂರು, ಭೂಮಿಯ ನೆಲೆ, ವೃಕ್ಷದ ಗೂಡು ಕೊಟ್ಟಿರುವ ದೈವ ಇರುವವರೆಗೆ ನನಗೇಕೆ ನನ್ನ ಮರಿಯ ಚಿಂತೆ ಎಂದು ಅರಿತುಕೊಂಡಿತು ತಾಯಿ ಹಕ್ಕಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...