Home / ಬಾಲ ಚಿಲುಮೆ / ಕವಿತೆ / ವಿದ್ಯೆ ಕಲಿತ ರಕ್ಕಸ

ವಿದ್ಯೆ ಕಲಿತ ರಕ್ಕಸ

ಹಿತ್ತಲಿಂದ ಬರುತಲೊಮ್ಮೆ
ಬೆಚ್ಚಿ ಬಿದ್ದೆನು
ದೂರದಲ್ಲಿ ಕಪ್ಪು ಕಪ್ಪು
ಏನೋ ಕಂಡೆನು

ತಲೆಯ ಮೇಲೆ ಕೋಡು
ಕೋರೆಗಳಿವೆ ಜೋಡು
ವಿಕಾರವಾದ ಮುಖ
ಉದ್ದುದ್ದನೆಯ ನಖ

ಮಾರಿಗೊಂದು ಹೆಜ್ಜೆ
ತಿನುವ ಮಾಂಸ ಮಜ್ಜೆ
ಝಲ್ಲೆಂದಿತು ಎದೆಯು
ಬಿರಿಯ ಬಾರ್ದೆ ಭುವಿಯು

ಆನೆಗಿಂತ ಎತ್ರ
ಅವನ ಆ ಗಾತ್ರ
ನಡುಗುತ್ತಲೆ ನಿಲುವುದ್ಹೇಗೆ
ಅಯ್ಯೋ ಬಂದ ಹತ್ರ

ಇವನೆ ಇವನೆ ರಕ್ಕಸ
ಏರಿಳಿಯಿತು ಪುಪ್ಪಸ
ರಾಮ, ಭೀಮ, ಹನುಮರೆಲ್ಲ
ಕೊಂದ ರಕ್ಕಸ

ಓಡಲೆಂದು ನೋಡಿದೆ
ಕಾಲು ಮರವೆ ಆಗಿದೆ
ಕೂಗಲೆಂದು ಬಾಯಿತೆರೆದೆ
ಅದೂ ಹೊಲೆದು ಕೊಂಡಿದೆ

ಗಣಪನನ್ನು ನೆನೆದೆ
ಮೇಷ್ಟ್ರರನ್ನು ಕರೆದೆ
ಬರಲಿಲ್ಲ ಯಾರು ಪಾಲಿಗೆ
ಮಗನಿಲ್ಲ ನನ್ನತಾಯಿಗೆ

ದಡಬಡನೆ ಬಂದೆಬಿಟ್ಟ
ಮುಷ್ಟಿಯಲ್ಲಿ ಎತ್ತಿಬಿಟ್ಟ
ಮುದ್ದು ಮರಿಯೆ ಎಂದ
ಕೊಟ್ಟ ಮುತ್ತನೊಂದ

ಹೆದರಬೇಡ ನಡುಗಬೇಡ
ಕೇಳೋ ಇಲ್ಲಿ ಪೋರ
ತಿನ್ನೋದಿಲ್ಲ ನಿನ್ನ ನಾನು
ಗೆಳೆಯ ನೀನು ಬಾರ

ಗೆಳೆಯನಲ್ಲ ನೀನು
ಹೆದರಿಹೆನು ನಾನು
ನೀನು ನರ ಭಕ್ಷಕ
ನಾನು ಶಾಲಾ ಬಾಲಕ

ನಾನು ಶಾಲೆಗೆ ಬರುವೆ
ನಿನ್ನ ಜೊತೆಗೆ ಆಡುವೆ
ಬಿಸಿಊಟವನ್ನೆ ಮಾಡುವೆ
ಆಪ್ ಎಂದು ತೇಗುವೆ

ಬೇಡ, ಬೇಡ ರಕ್ಕಸ
ನನ್ನ ಕಾಡಬೇಡ
ನೀನು ಜೊತೆಗೆ ಬಂದರೆ
ನನಗೆ ಭಾರಿ ತೊಂದರೆ

ತಂಟೆ ಮಾಡೆನು
ಮಾಂಸ ಮಜ್ಜೆ ಕೇಳೆನು
ಗೆಳೆಯನಲ್ವೆ ನೀನು
ಪಪ್ಪಿ ಕೊಡುವೆ ನಾನು

ಶಾಲೆಗೆ ಬಂದ್ರೆ ನೀನು
ಪಾಠಕಲಿಯ ಬೇಕು
ಹೋಂವರ್ಕ ಮಾಡಬೇಕು
ಅಲ್ಲಿ ಏಟು ತಿನ್ನಬೇಕು

ಪಾಠ ಗೀಟ ಓದುವೆ
ಮಗ್ಗಿ ಹಾಡು ಹೇಳುವೆ
ಏಟು ಕೊಡಲು ಮೇಷ್ಟ್ರು ಬಂದ್ರೆ
ಅವರನ್ನೆ ಮಾಯ ಮಾಡುವೆ

ನರ-ರಾಕ್ಷಸ ಒಂದಾದರು
ಸಂತಸದೀ ಕುಣಿದರು
ಶಾಲೆ ಕಡೆಗೆ ನಡೆದರು
ಗೇಟು ತೆರೆದು ಬಿಟ್ಟರು

ರಕ್ಕಸನ ಕಂಡರು
ಮಕ್ಕಳು ಬೆರಗಾದರು
ಚಿಳ್ಳೆ ಪಿಳ್ಳೆ ಎಲ್ಲರೂ
ಚೆಡ್ಡಿ ತೋಯಿಸಿಕೊಂಡರು

ಹೆದರಬೇಡಿ ಮಕ್ಕಳೆ
ಮುದ್ದು ಮುದ್ದು ಹೂಗಳೆ
ನಾನು ನಿಮ್ಮ ತಿನ್ನೆನು
ಆಗುವೆ ನಿಮ್ಮ ಗೆಳೆಯನು

ಮಕ್ಕಳೆಲ್ಲ ನಕ್ಕರು
ಹತ್ತಿರಕ್ಕೆ ಬಂದರು
ಕೈಯ ಹಿಡಿದು ಎಳೆದರು
ಭಾರಿ ಖಷಿಯಪಟ್ಟರು

ಮಾಸ್ತರ್ ಮಾತು ಮರೆತರು
ಶಿಕ್ಷಕಿ ಶಿಲೆಯಾದರು
ಕನಸೆ ಇರಬೇಕೆಂದುಕೊಂಡು
ಕೈಯ ಚಿವುಟಿಕೊಂಡರು

ಪುರದ ಜನರು ನೆರೆದರು
ಬಡಿಗೆ ಹಿಡಿದು ಬಂದರು
ರಕ್ಕಸನ ಕಂಡ ಅವರು
ಅವಾಕ್ಕಾಗಿ ನಿಂತರು

ಕೇಳಿ ಪುರದ ಜನಗಳೇ
ಇಲ್ಲ ನನ್ನಿಂದ ತೊಂದರೆ
ಬೇರೆ ಏನು ಬಯಸೆನು
ವಿದ್ಯೆ ಕಲಿಯ ಬಂದೆನು

ಬಡಿಯ ಬೇಡಿ ನನ್ನ
ತಿನ್ನುವುದಿಲ್ಲ ನಿಮ್ಮ
ವಿದ್ಯೆ ಕಲಿಸಿ ನನಗೆ
ನಾನು ಶರಣು ನಿಮಗೆ

ಟೀಚರ್ ಒಪ್ಪಿಬಿಟ್ಟರು
ಶಾಲೆಯೊಳಗೆ ಕರೆದರು
ಸ್ಟೇಟು ಬಳಪ ಕೊಟ್ಟರು
ಅಕ್ಷರ ಕಲಿಸಿ ಬಿಟ್ಟರು

ವಿದ್ಯೆ ಕಲಿತ ರಕ್ಕಸ
ವಿರೂಪ ಕಳಚಿ ಬಿಟ್ಟನು
ಕೋರೆ, ದಾಡೆ, ಕೋಡು ಎಲ್ಲ
ಮಾಯವಾಗಿ ಬಿಟ್ಟವು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...