ಬೇಬಿ

ಬೇಬಿ ವಸಂತನ ಸುದ್ದಿಯಲ್ಲದೆ ಇನ್ನಾರ ಸುದ್ದಿಯನ್ನೂ ಬರೆಯಬೇಡ ಎಂದು ಹೇಳಿದ್ದೀಯಾ. ಅವನ ವಿಷಯವನ್ನೇ ಬರೆಯುತ್ತೇನೆ.

ಬೇಬಿ ನಿಲ್ಲುತ್ತಾನೆ; ಬೇಬಿ ಕೂತುಕೊಳ್ಳುತ್ತಾನೆ; ಬೇಬಿ ಮಲಗುತ್ತಾನೆ. ಬೇಬಿ ನಗುತ್ತಾನೆ; ಬೇಬಿ ಅಳುತ್ತಾನೆ ಬೇಬಿ ನಿದ್ರೆ ಮಾಡುತ್ತಾನೆ; ಬೇಬಿ ನಿದ್ರೆ ಮಾಡುವದಿಲ್ಲ. ಬೇಬಿಗೆ ನಾಲ್ಕು ಹಲ್ಲುಗಳಿವೆ; ನಾಲ್ಕೇ ಹಲ್ಲುಗಳಾದರೂ ದಿನಕ್ಕೆ ಆರು ಗ್ಲೆಕ್ಸೋ ಬಿಸ್ಕತ್ತುಗಳನ್ನು ತಿನ್ನುತ್ತಾನೆ; ಅದು ಸಾಲದೆಂತ ಅಳುತ್ತಾನೆ. ಬೇಬಿ ಹಿಡಿಯದೇ ನಿಲ್ಲುತ್ತಾನೆ. ನಾನು ಬರೆಯುತ್ತಾ ಕೂತರೆ ನನ್ನ ಬೆನ್ನ ಮೇಲೆ ಹತ್ತುತ್ತಾನೆ. ನನ್ನ ಕಿವಿಗಳನ್ನು ಕಚ್ಚುತ್ತಾನೆ; ನನ್ನ ಕಿವಿಗಳನ್ನು ಕಚ್ಚಿ ಗಾಯಮಾಡಿದ್ದಾನೆ. ಭಾರತಿಯ ಜಡೆಯನ್ನು ಹಿಡಿದು ಎಳೆಯುತ್ತಾನೆ. ಊಟ ಮಾಡುವಾಗ ಎಲೆಯನ್ನು ಹಿಡಿಯಲು ಬರುತ್ತಾನೆ. ಬೆಂಕಿಯನ್ನು ಎಳೆಯಲು ಪ್ರಯತ್ನ ಮಾಡುತ್ತಾನೆ. ನನ್ನನ್ನು ಕೇಳದೆಯೇ ಅಂಗಳಕ್ಕೆ ಓಡಿ ಹೋಗುತ್ತಾನೆ. ಬಟ್ಟೆಯನ್ನು ಕೊಳೆ ಮಾಡಿಕೊಳ್ಳುತ್ತಾನೆ. ಹೆದರಿಸಿದರೆ ನಗುತ್ತಾ ಮೈಮೇಲೆ ಹತ್ತುತ್ತಾನೆ. ಬಿಳಿ ಬಟ್ಟೆಯವರನ್ನು ಕಂಡರೆ, ನೀನೆಂತ ಅವರ ಹತ್ತಿರ ಓಡುತ್ತಾನೆ. ನಾನೆರಡು ಡೆಹಿಲಿಯಾ ಗಿಡಗಳನ್ನು ಬೆಳೆಸಿಕೊಂಡಿದ್ದೇನೆ; ಅವುಗಳನ್ನು ಹೋಗಿ ಕೀಳುತ್ತಾನೆ.

ಮೇಜಿನ ಮೇಲೆ ಒಂದು ಪಾತ್ರೆಯಲ್ಲಿ ಹೂವಿಟ್ಟಿದ್ದೆ. ಮೇಜಿನ ಬಟ್ಟೆಯನ್ನು ಬೇಬಿ ಎಳೆದ. ಹೂವಿನ ಸಮೇತ ಪಾತ್ರೆ ಕೆಳಗೆ ಬಿತ್ತು. ನೆಲವೆಲ್ಲಾ ಗಾಜಿನ ಚೂರು, ಅವುಗಳ ಮಧ್ಯೆ ಅಲ್ಲೊಂದು ಇಲ್ಲೊಂದು ಹೂವು, ಬಿದ್ದ ಹೂಗಳನ್ನು ತೆಗೆದು ತಿನ್ನಲು ಸುರುಮಾಡಿದ. ಆಫೀಸಿಗೆ ಹೋಗಿ ಮೇಜಿನಡಿಯಲ್ಲಿ ಕೂತುಕೊಳ್ಳುತ್ತಾನೆ; ಕೆಳಗೇನಾದರೂ ಇದ್ದರೆ ಅದನ್ನು ಹರಿದುಹಾಕುತ್ತಾನೆ; ಸೇಫಿನ ಬಾಗಿಲನ್ನು ಹಿಡಿದು ತೆಗೆಯಲು ಪ್ರಯತ್ನಿಸುತ್ತಾನೆ. ಸೀತಾ ರಾಮನ ಪಂಚೆಯನ್ನು ಹಿಂದುಗಡೆಯಿಂದ ಹೋಗಿ ಎಳೆಯುತ್ತಾನೆ. ನನಗೆ ಹೇಳದೆಯೆ ಮೀನಾಕ್ಷಿಯ ಜೊತೆಯಲ್ಲಿ ಅವಳ ಮನೆಗೆ ಹೋಗಿಬಿಡುತ್ತಾನೆ.

ಮೀಯಿಸುವಾಗ ಎದ್ದು ಕೂತುಕೊಂಡು ಚೊಂಬನ್ನು ಕಿತ್ತುಕೊಳ್ಳುತ್ತಾನೆ. ಸಾಬೂನನ್ನು ಬಾಯಲ್ಲಿಟ್ಟುಕೊಳ್ಳುತ್ತಾನೆ. ಮೈಯನ್ನು ಉಜ್ಜಲು ಬಿಡುವದಿಲ್ಲ; ಬಲಾತ್ಕಾರದಿಂದ ಉಜ್ಜಿದರೆ ಬಹಳ ಅಳುತ್ತಾನೆ. ವಿಶ್ವನಾಥನು ಓದುತ್ತಿದ್ದರೆ ಅವನ ಪುಸ್ತಕ ಕಿತ್ತುಕೊಂಡು ಹರಿಯುತ್ತಾನೆ. ನಾನು ಪಾತ್ರೆಯಲ್ಲಿ ನೀರಿಟ್ಟುಕೊಂಡಿದ್ದರೆ ಅದನ್ನು ಚೆಲ್ಲುತ್ತಾನೆ.

ಬೇಬಿ ಸುದ್ದಿ ಬರೆಯುವದಾದರೆ ಒಂದು ಪುಸ್ತಕ ತುಂಬಾ ಬರೆದರೂ ಮುಗಿಯುವದಿಲ್ಲ. ಇನ್ನೊಂದು ಸಾರಿ ಬರೆಯುತ್ತೇನೆ.

ನಿನ್ನ
ಗೌರಮ್ಮ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...