Home / ಲೇಖನ / ವಿಜ್ಞಾನ / ಮಳೆಯ ಆಗಮನ ತಿಳಿಸುವ ಉಪಕರಣ

ಮಳೆಯ ಆಗಮನ ತಿಳಿಸುವ ಉಪಕರಣ

ಅಗತ್ಯಕ್ಕೆ ತಕ್ಕಷ್ಟು ಮಳೆಬೇಕು, ಮಳೆ ಬರದೇ ಇದ್ದರೂ ಆಗದು ಅಥವಾ ಕುಂಬದ್ರೋಣ ಮಳೆಯಾದರೂ ಕಷ್ಟವಾಗುತ್ತದೆ. ಯಾವಾಗ ಮಳೆ ಬರುತ್ತದೆ, ಬರುವದಿಲ್ಲ, ಎಂಬುದನ್ನು ತಿಳಿದುಕೊಳ್ಳಲೆಂದೇ ವಿಜ್ಞಾನಿಗಳು ಸಂಶೋಧನೆ ನಡೆಯಿಸಿ ಒಂದು ಉಪಕರಣವನ್ನು ಕಂಡುಹಿಡಿದಿದ್ದಾರೆ. ಮ್ಯಟ್ರಾಮಾರ್‍ಕೋನಿ ಅತ್ಯಾಧುನಿಕ ಮೈಕ್ರೋವೇವ್ ಸೆನ್ಸರನ್ನು ರೂಪಿಸಿದೆ. ಈ ಉಪಕರಣದ ಹೆಸರು ಆಡ್ವಾನ್ಸ್‌ಡ್ ಮೈಕ್ರೋವೇವ್ ಸೌಂಡಿಂಗ್ ಯುನಿಟ್ ಎಂದು. ಅಮೇರಿಕಾದ ನ್ಯಾಶನಲ್ ಓಷಿಯಾನಿಕ್ ಅಂಡ್ ಅಟ್ಮಾ ಸ್ಫೆರಿಕ್ ಅಡ್ಮಿನಿಸ್ಟ್ರೇಷನ್ ಎಂಬ ಸಂಸ್ಥೆ ಈಗಾಗಲೇ ಈ ಸೆನ್ಸರ್ ಉಪಕರಣವನ್ನು ಉಪಗ್ರಹದ ನೆರವಿನಿಂದ ಒಂದು ನಿರ್ದಿಷ್ಟ ಕಡೆಯೊಳಗೆ ಕಳಿಸಿದೆ. ನಮಗೀಗ ಲಭ್ಯವಿರುವ ವಾತಾವರಣದ ವಿಸ್ತಾರಿಸಲ್ಪಟ್ಟ ಪ್ರದೇಶವನ್ನು ಇದು ಗುರುತಿಸುತ್ತದೆ. ಮೋಡಗಳ ಸ್ಥಿತಿಗತಿಗಳನ್ನು ವಿವರಿಸುತ್ತದೆ. ಈ ಅತ್ಯಾಧುನಿಕ ಉಪಕರಣದ ನೆರವು ಪಡೆದು ಮಳೆಯ ಆಗಮನವನ್ನಷ್ಟೇ ಅಲ್ಲದೇ ವರ್ಷಾತಾಪವನ್ನು ನಿರ್ಧಿಷ್ಟವಾಗಿ ತಿಳಿದುಕೊಳ್ಳಬಹುದು. ವಿಪರೀತ ಮಳೆ ಸುರಿಯುವದರಿಂದ ಆಗುವ ಅಸ್ತವ್ಯಸ್ತವನ್ನು ಸಾಧ್ಯವಾದಷ್ಟು ಪಡೆಯಬಹುದು. ಇದರಿಂದ ಪರ್ಜನ್ಯಜಪದ, ಸೋಗುಹಾಕುವ ಜನಕ್ಕೆ ಒಂದಿಷ್ಟು ಬುದ್ದಿಬರಲಿದೆ.
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...