Home / ಲೇಖನ / ವಿಜ್ಞಾನ / ಮಳೆಯ ಆಗಮನ ತಿಳಿಸುವ ಉಪಕರಣ

ಮಳೆಯ ಆಗಮನ ತಿಳಿಸುವ ಉಪಕರಣ

ಅಗತ್ಯಕ್ಕೆ ತಕ್ಕಷ್ಟು ಮಳೆಬೇಕು, ಮಳೆ ಬರದೇ ಇದ್ದರೂ ಆಗದು ಅಥವಾ ಕುಂಬದ್ರೋಣ ಮಳೆಯಾದರೂ ಕಷ್ಟವಾಗುತ್ತದೆ. ಯಾವಾಗ ಮಳೆ ಬರುತ್ತದೆ, ಬರುವದಿಲ್ಲ, ಎಂಬುದನ್ನು ತಿಳಿದುಕೊಳ್ಳಲೆಂದೇ ವಿಜ್ಞಾನಿಗಳು ಸಂಶೋಧನೆ ನಡೆಯಿಸಿ ಒಂದು ಉಪಕರಣವನ್ನು ಕಂಡುಹಿಡಿದಿದ್ದಾರೆ. ಮ್ಯಟ್ರಾಮಾರ್‍ಕೋನಿ ಅತ್ಯಾಧುನಿಕ ಮೈಕ್ರೋವೇವ್ ಸೆನ್ಸರನ್ನು ರೂಪಿಸಿದೆ. ಈ ಉಪಕರಣದ ಹೆಸರು ಆಡ್ವಾನ್ಸ್‌ಡ್ ಮೈಕ್ರೋವೇವ್ ಸೌಂಡಿಂಗ್ ಯುನಿಟ್ ಎಂದು. ಅಮೇರಿಕಾದ ನ್ಯಾಶನಲ್ ಓಷಿಯಾನಿಕ್ ಅಂಡ್ ಅಟ್ಮಾ ಸ್ಫೆರಿಕ್ ಅಡ್ಮಿನಿಸ್ಟ್ರೇಷನ್ ಎಂಬ ಸಂಸ್ಥೆ ಈಗಾಗಲೇ ಈ ಸೆನ್ಸರ್ ಉಪಕರಣವನ್ನು ಉಪಗ್ರಹದ ನೆರವಿನಿಂದ ಒಂದು ನಿರ್ದಿಷ್ಟ ಕಡೆಯೊಳಗೆ ಕಳಿಸಿದೆ. ನಮಗೀಗ ಲಭ್ಯವಿರುವ ವಾತಾವರಣದ ವಿಸ್ತಾರಿಸಲ್ಪಟ್ಟ ಪ್ರದೇಶವನ್ನು ಇದು ಗುರುತಿಸುತ್ತದೆ. ಮೋಡಗಳ ಸ್ಥಿತಿಗತಿಗಳನ್ನು ವಿವರಿಸುತ್ತದೆ. ಈ ಅತ್ಯಾಧುನಿಕ ಉಪಕರಣದ ನೆರವು ಪಡೆದು ಮಳೆಯ ಆಗಮನವನ್ನಷ್ಟೇ ಅಲ್ಲದೇ ವರ್ಷಾತಾಪವನ್ನು ನಿರ್ಧಿಷ್ಟವಾಗಿ ತಿಳಿದುಕೊಳ್ಳಬಹುದು. ವಿಪರೀತ ಮಳೆ ಸುರಿಯುವದರಿಂದ ಆಗುವ ಅಸ್ತವ್ಯಸ್ತವನ್ನು ಸಾಧ್ಯವಾದಷ್ಟು ಪಡೆಯಬಹುದು. ಇದರಿಂದ ಪರ್ಜನ್ಯಜಪದ, ಸೋಗುಹಾಕುವ ಜನಕ್ಕೆ ಒಂದಿಷ್ಟು ಬುದ್ದಿಬರಲಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...