Home / ಲೇಖನ / ವಿಜ್ಞಾನ / ಸಸ್ಯಗಳಿಂದ ಏಡ್ಸ್, ನೀರೋಧಕ ಚುಚ್ಚು ಮದ್ದು

ಸಸ್ಯಗಳಿಂದ ಏಡ್ಸ್, ನೀರೋಧಕ ಚುಚ್ಚು ಮದ್ದು

‘ಏಡ್ಸ್’ರೋಗವೆಂದರೆ ಮಾರಕವೆಂದು, ಮರಣಾಂತಿಕವೆಂದೂ ಜನ ಹೆದರುತ್ತಾರೆ. ಇದರ ಶಮನಕ್ಕೆ ಅನೇಕ ಔಷಧಿಗಳು ಬಂದರೂ ಅಷ್ಟೇನೂ ಪರಿಣಾಮ ಬೀರಿಲ್ಲ. ಇಂಥಹ ರೋಗಗಳ ನಿವಾರಣೆಗಾಗಿ ಇತ್ತೀಚೆಗೆ ಜೈವ ತಂತ್ರಜ್ಞಾನ ವಿಧಾನಗಳಿಂದ ಸಸ್ಯಾಧಾರಿತ ಔಷಧಗಳನ್ನು ತಯಾರಿಸಲು ವಿಜ್ಞಾನಿಗಳು ಪ್ರಯತ್ನಿಸುತ್ತಿದ್ದಾರೆ. ಈ ವಿಧಾನಕ್ಕೆ Chemical virus particle platform-cvvp ಎಂದು ಕರೆಯುತ್ತಾರೆ. ಕೇಂಬ್ರಿಚ್ಡ್ ವಿಶ್ವದ್ಯಾನಿಲಯದ ಪ್ರಯೋಗಾಲಯದಲ್ಲಿ ಪೆಪ್ಟೈಡ್, ಮತ್ತು ಪ್ರೊಟೀನ್‌ಗಳನ್ನು ಬೆಳೆಸಿ ನಂತರ ಈ ಎರಡರಿಂದ ಚುಚ್ಚುಮದ್ದು ಮತ್ತು ಔಷಧಿಯನ್ನು ತಯಾರಿಸುವ ಸಂಶೋಧನೆಯಾಗಿದೆ. ಕೆಲವೇ ದಿನಗಳಲ್ಲಿ ಸಸ್ಯಗಳ ಭಾಗದಲ್ಲಿ ಪೆಪ್ಟೈಡ್ ಬೆಳೆಯಲು ಆರಂಭಿಸುತ್ತದೆ. ಅದೇವೇಳೆಗೆ ಸಸ್ಯಗಳ ಒಳನುಗ್ಗಿದ ಸಂಶೋಧಿತ ವಿಷಾಣು (Virus) ಗಳು ವಿಭಜನೆಯಿಂದ ತಮ್ಮ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತವೆ. ಈ ವಿಷಾಣುಗಳನ್ನು ಈಗ ಕಣ ರೂಪದಲ್ಲಿ ಸುಲಭವಾಗಿ ಬೇರ್‍ಪಡಿಸಬಹುದು. ಈ ಎಲ್ಲ ಕಣಗಳಲ್ಲಿ ಪೆಪ್ಟೈಡ್ ಮತ್ತು ಪ್ರೊಟೀನ್‌ಗಳ ಬಹುಖಂಡ ಪ್ರತಿಗಳು ಇರುತ್ತವೆ. ಹೀಗೆ ತಯಾರಾದ ಪೆಪ್ಟೈಡ್‌ ಮತ್ತು ಪ್ರೊಟೀನ್‌ಗಳನ್ನು ಪರಿಶ್ಕರಿಸಿ ಪ್ರಾರಂಭಿಕ ಇಂಜಕ್ಷನ್ ಮೂಲಕ ಕೊಡುವ ಚುಚ್ಚು ಮದ್ದನ್ನು ತಯಾರು ಮಾಡಬಹುದು. ಈಗ ವಿಷಾಣು ಚುಚ್ಚಿಸಿಕೊಂಡ ಸಸ್ಯಗಳ ಎಲೆಗಳಿಂದ ಪೆಪ್ಟೈಡ್‌ ಮತ್ತು ಪ್ರೋಟೀನ್‌ಗಳನ್ನು ಹೊರತೆಗೆಯುವ ಕಾರ್‍ಯಸಾಗಿದೆ.

ಬ್ರಿಟನ್ನಿನ ವಿಜ್ಞಾನಿಗಳ ಪ್ರಕಾರ ಸಸ್ಯ ಮತ್ತು ವಿಷಾಣುಗಳ ವಂಶವಾಹಿನಿಗಳ ಪ್ರಕ್ರಿಯೆಯಿಂದ ಇಂಥಹ ಸಕ್ರಿಯ ಪೆಪ್ಟೈಡ್‌ನಿಂದ ಮುಂದಿನ ಒಂದು ದಶಕದ ಒಳಗಾಗಿ ಮನುಷ್ಯ ಮತ್ತು ಪಶುಗಳಿಗೆ ಉತ್ತಮ ಚುಚ್ಚುಮದ್ದು ಹಾಗೂ ಇತರ ಔಷಧಿಗಳನ್ನು ತಯಾರುಮಾಡಬಹುದಾಗಿದೆ. ಸಸ್ಯಗಳಿಂದ ಪಡೆದ ವಿಷಾಣುಗಳು ಶರೀರದ ತಾಪಮಾನಕ್ಕೆ ಸ್ಥಿರವಾಗಿರುತ್ತವೆ. ಅಲ್ಲದೇ ಅವುಗಳ ಮೇಲೆ ಆಮ್ಲ ಮತ್ತು ಪಾಚಕ ಎಂಜಾಮ್‌ (ಕಿಣ್ವಗಳೂ ಪ್ರಭಾವ ಬಿರುವುದಿಲ್ಲ. ಆದ್ದರಿಂದ ಇದರ ಚುಚ್ಚುಮದ್ದಿನ ಬದಲಾಗಿ ನೇರವಾಗಿ ಬಾಯಿಂದ ನುಂಗುವ ಔಷಧಿಯಂತೆಯೂ ಬಳಸಬಹುದು. ಸಸ್ಯಗಳಿಂದ ಚುಚ್ಚುಮದ್ದು ಮತ್ತು ಔಷಧಿಗಳನ್ನು ತಯಾರಿಸುವ ಸಂಶೋಧನೆಗಾಗಿ ನೆದರ್ಲ್ಯಾಂಡ್ ಪ್ರಾಣಿವಿಜಾನ ಮತ್ತು ಆರೋಗ್ಯ ಸಂಸ್ಥೆ ಹಾಗೂ ಡೆನ್ಮಾರ್ಕಿನ ಸ್ಟೇಟ್ ವೆಟರ್ನರಿ ಇನ್‌ಸ್ಟಿಟ್ಯೂಟ್ ಫಾರ್ ವೈರಾ‌ಲಜಿಯಂತಹ ಸಂಸ್ಥೆಗಳು ಸಹಾಯಕ್ಕೆ ಬಂದಿವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...