Home / ಲೇಖನ / ಇತರೆ / ಆರೋಗ್ಯಕ್ಕೆ…

ಆರೋಗ್ಯಕ್ಕೆ…

ಆರೋಗ್ಯಕ್ಕೆ ಕಾಫಿ ಟೀ ಒಳ್ಳೆಯದಲ್ಲ ಎಂದು ಸಂಶೋಧನೆಗಳು ಸಾರಿ ಸಾರಿ ಹೇಳುತ್ತಿವೆ. ಆದರೂ ಬೆಳಿಗ್ಗೆ ಒಂದು ಕುಡಿದರೆ ಏನಾಗದೆಂದು ಕೆಲವು ಜನರು ಕಾಫಿ-ಟೀಯೊಂದಿಗೆ ರಾಜಿಯಾಗಿರುವರು.

ಇನ್ನು ಕೆಲವರು ಟೀ… ಅದರಲ್ಲೂ ಗ್ರೀನ್ ಟೀ ಎರಡೂ ಹೊತ್ತು ಕುಡಿಯುವುದು ಒಳ್ಳೆಯದೆಂದು ಹೇಳುವರು. ಮೊನ್ನೆ ದಿನ ಶಾಲೆಗೆ ಡಾ|| ವಿ. ನಾಗರಾಜು ಅವರು ಬಂದಿದ್ದರು. ಅವರು ಬರುವಾಗ ದಿನ ಪತ್ರಿಕೆ, ವಾರಪತ್ರಿಕೆ, ಮಾಸ ಪತ್ರಿಕೆ, ರಾಷ್ಟ್ರೀಯ ಅಂತರರಾಷ್ಟ್ರೀಯ ಪತ್ರಿಕೆಗಳನ್ನು ತಂದು ಮಕ್ಕಳಿಗೆಲ್ಲ ವಿತರಿಸಿ ಇವುಗಳನ್ನು ಓದಲು ಗ್ರೀನ್ ಟೀ ಕುಡಿಯಲು ಸಲಹೆ ಮಾಡುತ್ತಾ ನಿಂತರು.

ಪುಟಾಣಿಗಳೆ… ಗ್ರೀನ್ ಟೀ ಎಂದರೆ… ದಿವ್ಯೌಷಧಿಯಂತೆ ಕೆಲಸ ಮಾಡುವುದು. ಅದರಿಂದ ಉಪಯೋಗಗಳು ಈ ರೀತಿಯಲ್ಲಿವೆ…

೧. ಇದು ನಿದ್ದೆಯನ್ನು ಸೋಮಾರಿತನವನ್ನು ದೂರ ಮಾಡುವುದು.

೨. ಮೆದುಳನ್ನು ಚುರುಕುಗೊಳಿಸುವುದು.

೩. ನೆನಪಿನ ಶಕ್ತಿ ವೃದ್ಧಿಸುವುದು.

೪. ಬೊಜ್ಜು ಕರಗಿಸುವುದು. ತೂಕ ಇಳಿಸುವುದು, ನಿರಂತರ ಚುರುಕಾಗಿರುವಂತೆ ಮಾಡುವುದು.

೫. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಕ್ಯಾನ್ಸರ್ ಬರದಂತೆ ತಡೆಯುವ ಶಕ್ತಿ ಇದೆ.

೬. ಸಕ್ಕರೆ ಕಾಯಿಲೆ ಬರದಂತೆ, ಹೃದಯಾಘಾತವಾಗುವುದನ್ನು ತಡೆಯುವುದು.

೭. ಬಾಯಿ ವಾಸನೆ ತಡೆಯುವುದು, ಹಲ್ಲು ಹುಳುಕು ಹಿಡಿಯದಂತೆ ತಡೆಯುವುದು.

೮. ಎಲುಬುಗಳನ್ನು ಗಟ್ಟಿಗೊಳಿಸುವುದು. ಮರೆಗುಳಿತನವನ್ನು ದೂರ ಮಾಡುವುದು.

೯. ಹುರುಪು ಉತ್ಸಾಹ ತುಂಬುವುದು.

೧೦. ದೇಹವನ್ನು ಬೆಚ್ಚಗಿಡುವುದು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ