Home / ಲೇಖನ / ಇತರೆ / ಭೂನಿಧಿ ಪತ್ತೆ

ಭೂನಿಧಿ ಪತ್ತೆ

ನಮ್ಮ ದೇಶ ಚಿನ್ನ, ನಮ್ಮ ಜಲ ದಿವ್ಯ‌ಔಷಧಿ, ನಮ್ಮ ಜನ ರನ್ನರೆಂದು, ನಾನು ಈಗಾಗಲೇ ಬಹಳಷ್ಟು ಸಾರಿ ಹೇಳಿದ್ದೇನೆ ಬರೆದಿದ್ದೇನೆ.

ಈ ಮಾತುಗಳಿಗೆ ಪೂರಕವಾಗಿ ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಅಣು ಖನಿಜ ನಿರ್‍ದೇಶನಾಲಯ ನಡೆಸಿದ ಜಂಟಿ ಸಂಶೋಧನೆಯಲ್ಲಿ ಶ್ರೀಶೈಲ ಅರಣ್ಯದಲ್ಲಿ ಬೃಹತ್ ಪ್ರಮಾಣದ ಯುರೇನಿಯಮ್ ಅದಿರು ನಿಕ್ಷೇಪ ಇತ್ತೀಚೆಗೆ ಜುಲೈ-೨೦೧೫ ರ ಮಾಹೆಯಲ್ಲಿ ಪತ್ತೆಯಾಗಿರುವುದು.

ಆಂಧ್ರ ಪ್ರದೇಶದ ಕಡಪ ಬಳಿಯ ಶ್ರೀಶೈಲ ಅರಣ್ಯದಲ್ಲಿರುವ ಈ ನಿಕ್ಷೇಪದಿಂದ ಭವ್ಯ ಭಾರತದಲ್ಲಿನ ಪರಮಾಣು ಸ್ಥಾವರಗಳ ಇಂಧನ ಕೊರತೆ ನೀಗುವ ಸಾಧ್ಯತೆ ಬಹಳ ಇದೆಯೆಂದು ಈಗಾಗಲೇ ತಜ್ಞರು ಅಭಿಪ್ರಾಯ ಪಟ್ಟಿರುವರು.

ಈ ಭಾರೀ ನಿಕ್ಷೇಪ ತೆಲಂಗಾಣ ರಾಜ್ಯದಲ್ಲೂ ತೀವ್ರವಾಗಿ ವ್ಯಾಪಿಸಿದೆಯೆಂದು ಸಂಶೋಧನೆಗಳು ದೃಢಪಡಿಸಿವೆ. ಇದೊಂದು ತೀರಾ ವಿರಳವಾದ ಖನಿಜವಾಗಿದ್ದು ಇದು ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು ಆಸ್ಟ್ರೇಲಿಯಾ ಕೆನಡಾದಲ್ಲಿ ಲಭ್ಯವಿರುವ ಯೂರೇನಿಯಂ ಖನಿಜದ ಗುಣಮಟ್ಟಕ್ಕೆ ಹೋಲಿಸಬಹುದಾಗಿದೆಯೆಂದು ಅಭಿಪ್ರಾಯ ಪಟ್ಟಿರುವರು.

ಇದೇ ರೀತಿ- ಈಗಾಗಲೇ ಮೆಹಬೂಬ್ ನಗರ, ನೆಲಗೊಂಡ. ಗುಂಟೂರುಗಳಲ್ಲೂ ಈ ಮೊದಲು ಯುರೇನಿಯಂ ನಿಕ್ಷೇಪ ಪತ್ತೆಯಾಗಿದ್ದನ್ನು ಇಲ್ಲಿ ಸ್ಮರಿಸಿರುವರು. ಇಲ್ಲಿನ ಅಧಿಕಾರಿಗಳ ಪ್ರಕಾರ ಈಗ ಕಡಪದಲ್ಲಿ ಪತ್ತೆಯಾಗಿರುವ ನಿಕ್ಷೇಪದಲ್ಲಿ ಸುಮಾರು ೭ ಲಕ್ಷ ಟನ್ ಯುರೇನಿಯಂ ಲಭ್ಯವಾಗುವ ಸಾಧ್ಯತೆ ಇದ್ದು ತೆಲಂಗಾಣ ಪ್ರದೇಶದಲ್ಲಿ ೩ ಲಕ್ಷ ಟನ್ ಇರುವ ಸಾಧ್ಯತೆಯಿದೆಯೆಂದು ಅಂದಾಜಿಸಿರುವರು.

ಈ ಎರಡನ್ನೂ ಸೇರಿಸಿದರೆ ಭವ್ಯ ಭಾರತದ ಒಟ್ಟು ಯುರೇನಿಯಂ ನಿಕ್ಷೇಪದ ೨೫% ಭಾಗದಷ್ಟಾಗಲಿದೆಯೆಂದು ಅಂದಾಜಿಸಿರುವರು.

ಶ್ರೀಕಾಕುಲಂನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಅಣುಶಕ್ತಿ ಕೇಂದ್ರಕ್ಕೆ ಶ್ರೀ ಶೈಲ ನಿಕ್ಷೇಪವೇ ಇಂಧನ ಒದಗಿಸಲಿದೆ. ಆದರೆ ಪರಿಸರವಾದಿಗಳು ಈಗಾಗಲೇ ಶ್ರೀಕಾಕುಲಂನ ಪ್ರಸ್ತಾಪಿತ ಅಣುಶಕ್ತಿ ಕೇಂದ್ರಕ್ಕೆ ತೀವ್ರ ಪ್ರತಿಭಟನೆಗಳನ್ನು ತೀವ್ರಗೊಳಿಸುವ ಸಾಧ್ಯತೆ ಇದೆ.

ಒಂದು ಕಡೆ ಅಭಿವೃದ್ಧಿ, ಇನ್ನೊಂದೆಡೆ ಪರಿಸರದ ಕಾಳಜಿ, ಎರಡನ್ನು ಸಮತೋಲನ ಮಾಡಿಕೊಂಡು ಹೋಗುವುದು ಇಂದಿನ ಸವಾಲುಗಳಲ್ಲಿ ಮುಖ್ಯವಲ್ಲವೇ? ಯಾವುದಕ್ಕೂ ಏನಕ್ಕೂ ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...