Home / ಲೇಖನ / ಇತರೆ / ಭೂನಿಧಿ ಪತ್ತೆ

ಭೂನಿಧಿ ಪತ್ತೆ

ನಮ್ಮ ದೇಶ ಚಿನ್ನ, ನಮ್ಮ ಜಲ ದಿವ್ಯ‌ಔಷಧಿ, ನಮ್ಮ ಜನ ರನ್ನರೆಂದು, ನಾನು ಈಗಾಗಲೇ ಬಹಳಷ್ಟು ಸಾರಿ ಹೇಳಿದ್ದೇನೆ ಬರೆದಿದ್ದೇನೆ.

ಈ ಮಾತುಗಳಿಗೆ ಪೂರಕವಾಗಿ ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಅಣು ಖನಿಜ ನಿರ್‍ದೇಶನಾಲಯ ನಡೆಸಿದ ಜಂಟಿ ಸಂಶೋಧನೆಯಲ್ಲಿ ಶ್ರೀಶೈಲ ಅರಣ್ಯದಲ್ಲಿ ಬೃಹತ್ ಪ್ರಮಾಣದ ಯುರೇನಿಯಮ್ ಅದಿರು ನಿಕ್ಷೇಪ ಇತ್ತೀಚೆಗೆ ಜುಲೈ-೨೦೧೫ ರ ಮಾಹೆಯಲ್ಲಿ ಪತ್ತೆಯಾಗಿರುವುದು.

ಆಂಧ್ರ ಪ್ರದೇಶದ ಕಡಪ ಬಳಿಯ ಶ್ರೀಶೈಲ ಅರಣ್ಯದಲ್ಲಿರುವ ಈ ನಿಕ್ಷೇಪದಿಂದ ಭವ್ಯ ಭಾರತದಲ್ಲಿನ ಪರಮಾಣು ಸ್ಥಾವರಗಳ ಇಂಧನ ಕೊರತೆ ನೀಗುವ ಸಾಧ್ಯತೆ ಬಹಳ ಇದೆಯೆಂದು ಈಗಾಗಲೇ ತಜ್ಞರು ಅಭಿಪ್ರಾಯ ಪಟ್ಟಿರುವರು.

ಈ ಭಾರೀ ನಿಕ್ಷೇಪ ತೆಲಂಗಾಣ ರಾಜ್ಯದಲ್ಲೂ ತೀವ್ರವಾಗಿ ವ್ಯಾಪಿಸಿದೆಯೆಂದು ಸಂಶೋಧನೆಗಳು ದೃಢಪಡಿಸಿವೆ. ಇದೊಂದು ತೀರಾ ವಿರಳವಾದ ಖನಿಜವಾಗಿದ್ದು ಇದು ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು ಆಸ್ಟ್ರೇಲಿಯಾ ಕೆನಡಾದಲ್ಲಿ ಲಭ್ಯವಿರುವ ಯೂರೇನಿಯಂ ಖನಿಜದ ಗುಣಮಟ್ಟಕ್ಕೆ ಹೋಲಿಸಬಹುದಾಗಿದೆಯೆಂದು ಅಭಿಪ್ರಾಯ ಪಟ್ಟಿರುವರು.

ಇದೇ ರೀತಿ- ಈಗಾಗಲೇ ಮೆಹಬೂಬ್ ನಗರ, ನೆಲಗೊಂಡ. ಗುಂಟೂರುಗಳಲ್ಲೂ ಈ ಮೊದಲು ಯುರೇನಿಯಂ ನಿಕ್ಷೇಪ ಪತ್ತೆಯಾಗಿದ್ದನ್ನು ಇಲ್ಲಿ ಸ್ಮರಿಸಿರುವರು. ಇಲ್ಲಿನ ಅಧಿಕಾರಿಗಳ ಪ್ರಕಾರ ಈಗ ಕಡಪದಲ್ಲಿ ಪತ್ತೆಯಾಗಿರುವ ನಿಕ್ಷೇಪದಲ್ಲಿ ಸುಮಾರು ೭ ಲಕ್ಷ ಟನ್ ಯುರೇನಿಯಂ ಲಭ್ಯವಾಗುವ ಸಾಧ್ಯತೆ ಇದ್ದು ತೆಲಂಗಾಣ ಪ್ರದೇಶದಲ್ಲಿ ೩ ಲಕ್ಷ ಟನ್ ಇರುವ ಸಾಧ್ಯತೆಯಿದೆಯೆಂದು ಅಂದಾಜಿಸಿರುವರು.

ಈ ಎರಡನ್ನೂ ಸೇರಿಸಿದರೆ ಭವ್ಯ ಭಾರತದ ಒಟ್ಟು ಯುರೇನಿಯಂ ನಿಕ್ಷೇಪದ ೨೫% ಭಾಗದಷ್ಟಾಗಲಿದೆಯೆಂದು ಅಂದಾಜಿಸಿರುವರು.

ಶ್ರೀಕಾಕುಲಂನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಅಣುಶಕ್ತಿ ಕೇಂದ್ರಕ್ಕೆ ಶ್ರೀ ಶೈಲ ನಿಕ್ಷೇಪವೇ ಇಂಧನ ಒದಗಿಸಲಿದೆ. ಆದರೆ ಪರಿಸರವಾದಿಗಳು ಈಗಾಗಲೇ ಶ್ರೀಕಾಕುಲಂನ ಪ್ರಸ್ತಾಪಿತ ಅಣುಶಕ್ತಿ ಕೇಂದ್ರಕ್ಕೆ ತೀವ್ರ ಪ್ರತಿಭಟನೆಗಳನ್ನು ತೀವ್ರಗೊಳಿಸುವ ಸಾಧ್ಯತೆ ಇದೆ.

ಒಂದು ಕಡೆ ಅಭಿವೃದ್ಧಿ, ಇನ್ನೊಂದೆಡೆ ಪರಿಸರದ ಕಾಳಜಿ, ಎರಡನ್ನು ಸಮತೋಲನ ಮಾಡಿಕೊಂಡು ಹೋಗುವುದು ಇಂದಿನ ಸವಾಲುಗಳಲ್ಲಿ ಮುಖ್ಯವಲ್ಲವೇ? ಯಾವುದಕ್ಕೂ ಏನಕ್ಕೂ ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...