ಭೂನಿಧಿ ಪತ್ತೆ

ಭೂನಿಧಿ ಪತ್ತೆ

ನಮ್ಮ ದೇಶ ಚಿನ್ನ, ನಮ್ಮ ಜಲ ದಿವ್ಯ‌ಔಷಧಿ, ನಮ್ಮ ಜನ ರನ್ನರೆಂದು, ನಾನು ಈಗಾಗಲೇ ಬಹಳಷ್ಟು ಸಾರಿ ಹೇಳಿದ್ದೇನೆ ಬರೆದಿದ್ದೇನೆ.

ಈ ಮಾತುಗಳಿಗೆ ಪೂರಕವಾಗಿ ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಅಣು ಖನಿಜ ನಿರ್‍ದೇಶನಾಲಯ ನಡೆಸಿದ ಜಂಟಿ ಸಂಶೋಧನೆಯಲ್ಲಿ ಶ್ರೀಶೈಲ ಅರಣ್ಯದಲ್ಲಿ ಬೃಹತ್ ಪ್ರಮಾಣದ ಯುರೇನಿಯಮ್ ಅದಿರು ನಿಕ್ಷೇಪ ಇತ್ತೀಚೆಗೆ ಜುಲೈ-೨೦೧೫ ರ ಮಾಹೆಯಲ್ಲಿ ಪತ್ತೆಯಾಗಿರುವುದು.

ಆಂಧ್ರ ಪ್ರದೇಶದ ಕಡಪ ಬಳಿಯ ಶ್ರೀಶೈಲ ಅರಣ್ಯದಲ್ಲಿರುವ ಈ ನಿಕ್ಷೇಪದಿಂದ ಭವ್ಯ ಭಾರತದಲ್ಲಿನ ಪರಮಾಣು ಸ್ಥಾವರಗಳ ಇಂಧನ ಕೊರತೆ ನೀಗುವ ಸಾಧ್ಯತೆ ಬಹಳ ಇದೆಯೆಂದು ಈಗಾಗಲೇ ತಜ್ಞರು ಅಭಿಪ್ರಾಯ ಪಟ್ಟಿರುವರು.

ಈ ಭಾರೀ ನಿಕ್ಷೇಪ ತೆಲಂಗಾಣ ರಾಜ್ಯದಲ್ಲೂ ತೀವ್ರವಾಗಿ ವ್ಯಾಪಿಸಿದೆಯೆಂದು ಸಂಶೋಧನೆಗಳು ದೃಢಪಡಿಸಿವೆ. ಇದೊಂದು ತೀರಾ ವಿರಳವಾದ ಖನಿಜವಾಗಿದ್ದು ಇದು ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು ಆಸ್ಟ್ರೇಲಿಯಾ ಕೆನಡಾದಲ್ಲಿ ಲಭ್ಯವಿರುವ ಯೂರೇನಿಯಂ ಖನಿಜದ ಗುಣಮಟ್ಟಕ್ಕೆ ಹೋಲಿಸಬಹುದಾಗಿದೆಯೆಂದು ಅಭಿಪ್ರಾಯ ಪಟ್ಟಿರುವರು.

ಇದೇ ರೀತಿ- ಈಗಾಗಲೇ ಮೆಹಬೂಬ್ ನಗರ, ನೆಲಗೊಂಡ. ಗುಂಟೂರುಗಳಲ್ಲೂ ಈ ಮೊದಲು ಯುರೇನಿಯಂ ನಿಕ್ಷೇಪ ಪತ್ತೆಯಾಗಿದ್ದನ್ನು ಇಲ್ಲಿ ಸ್ಮರಿಸಿರುವರು. ಇಲ್ಲಿನ ಅಧಿಕಾರಿಗಳ ಪ್ರಕಾರ ಈಗ ಕಡಪದಲ್ಲಿ ಪತ್ತೆಯಾಗಿರುವ ನಿಕ್ಷೇಪದಲ್ಲಿ ಸುಮಾರು ೭ ಲಕ್ಷ ಟನ್ ಯುರೇನಿಯಂ ಲಭ್ಯವಾಗುವ ಸಾಧ್ಯತೆ ಇದ್ದು ತೆಲಂಗಾಣ ಪ್ರದೇಶದಲ್ಲಿ ೩ ಲಕ್ಷ ಟನ್ ಇರುವ ಸಾಧ್ಯತೆಯಿದೆಯೆಂದು ಅಂದಾಜಿಸಿರುವರು.

ಈ ಎರಡನ್ನೂ ಸೇರಿಸಿದರೆ ಭವ್ಯ ಭಾರತದ ಒಟ್ಟು ಯುರೇನಿಯಂ ನಿಕ್ಷೇಪದ ೨೫% ಭಾಗದಷ್ಟಾಗಲಿದೆಯೆಂದು ಅಂದಾಜಿಸಿರುವರು.

ಶ್ರೀಕಾಕುಲಂನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಅಣುಶಕ್ತಿ ಕೇಂದ್ರಕ್ಕೆ ಶ್ರೀ ಶೈಲ ನಿಕ್ಷೇಪವೇ ಇಂಧನ ಒದಗಿಸಲಿದೆ. ಆದರೆ ಪರಿಸರವಾದಿಗಳು ಈಗಾಗಲೇ ಶ್ರೀಕಾಕುಲಂನ ಪ್ರಸ್ತಾಪಿತ ಅಣುಶಕ್ತಿ ಕೇಂದ್ರಕ್ಕೆ ತೀವ್ರ ಪ್ರತಿಭಟನೆಗಳನ್ನು ತೀವ್ರಗೊಳಿಸುವ ಸಾಧ್ಯತೆ ಇದೆ.

ಒಂದು ಕಡೆ ಅಭಿವೃದ್ಧಿ, ಇನ್ನೊಂದೆಡೆ ಪರಿಸರದ ಕಾಳಜಿ, ಎರಡನ್ನು ಸಮತೋಲನ ಮಾಡಿಕೊಂಡು ಹೋಗುವುದು ಇಂದಿನ ಸವಾಲುಗಳಲ್ಲಿ ಮುಖ್ಯವಲ್ಲವೇ? ಯಾವುದಕ್ಕೂ ಏನಕ್ಕೂ ಕಾದು ನೋಡೋಣವಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಾತ್ರೆಗೆ ಹೋದ ಸುಬ್ಬು
Next post ನನ್ನ ಜನಗಳು

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…