Home / ಲೇಖನ / ಇತರೆ / ಏಕಲವ್ಯನ ಕತೆ

ಏಕಲವ್ಯನ ಕತೆ

‘ಏಕಲವ್ಯ – ಗುರು ದ್ರೋಣರಿಗೆ ಗುರು ಕಾಣಿಕೆಯೆಂದು ಬಲಗೈ ಹೆಬ್ಬೆಟ್ಟನ್ನು ನೀಡಬಾರದಿತ್ತು ಕಂದಾಽ…’ ಎಂದು ಏಕಲವ್ಯನ ತಾಯಿ ಮಗನ ಕೈಗೆ ಬಟ್ಟೆ ಸುತ್ತಿ ಹಾರೈಕೆ ಮಾಡುತ್ತಾ ಕಣ್ಣೀರಿಟ್ಟಳು.

ಏಕಲವ್ಯನ ತಂದೆ- ‘ನೀ ಬೇಡ ಕುಲದಲ್ಲಿ ಹುಟ್ಟಿ ಎಲ್ಲರಿಗೂ ಬೇಡಾದೆ ಮಗು! ನಿನ್ನ ಬಿಲ್ಲು ವಿದ್ಯೆಗೆ ಶಬ್ದವೇದಿ ವಿದ್ಯೆಗೆ ಯಾವುದೋ ಆಳರಸರ ಕೈಯಲ್ಲಿ ಮೆರೆಯಬೇಕಾಗಿತ್ತು! ಆದರೆ ಈ ಜನರು ನಿನ್ನ ಶ್ರೇಯಸ್ಸು ಸಹಿಸಲಿಲ್ಲ. ನಿನ್ನ ಅವನತಿ ಕೋರಿದರು’ ಎಂದು ಕಣ್ಣೀರಿಟ್ಟ.

‘ನೀವ್ಯಾರು ಕಣ್ಣೀರು ಸುರಿಸದಿರಿ. ನನ್ನ ಹಣೆ ಬರಹಕೆ ಗುರು ದ್ರೋಣರೇನು ಮಾಡಿಯಾರು? ಇಲ್ಲಿ ಅರ್‍ಜುನ ನಿಮಿತ್ತ ಮಾತ್ರ ಎಲ್ಲ ನನ್ನ ವಿಧಿ ವಿಪರೀತ! ನನಗೆ ಒಳ್ಳೆಯದಾಗಲಿಲ್ಲವೆಂದು ನನ್ನ ಬೇಡ ಜಾತಿಯನ್ನು, ಅರ್‍ಜುನ, ಗುರುದ್ರೋಣರನ್ನು ಬೈದು ಫಲವೇನು ? ಜಾತಕ ಪಕ್ಷಿಯು ಮಳೆ ಬರುವಾಗ ಮಳೆ ಹನಿ ಬೀಳಲಿ ಎಂದು ಬಾಯಿ ತೆರೆದಿದ್ದರೂ ತೊಟ್ಟು ಹನಿ ಬೀಳದಿದ್ದರೆ ಮೋಡದ ದೋಷವೆನ್ನುವಿರೇನು? ಕರೀಲ ಮರದಲ್ಲಿ ಎಲೆಗಳಿಲ್ಲವೆಂದು ಮಾತ್ರಕ್ಕೆ ವಸಂತ ಋತುವನ್ನು ಅಳಿದರೇನು ಫಲ? ಗೂಬೆಗೆ ಹಗಲು ಹೊತ್ತಿನಲ್ಲಿ ದೃಷ್ಟಿ ಗೋಚರಿಸದಿದ್ದರೆ ಸೂರ್‍ಯದೇವನ ತಪ್ಪೇನಿದೆ? ನನ್ನ ಅದೃಷ್ಟ ಸರಿಯಾಗಿಲ್ಲವೆಂದ ಮೇಲೆ ಯಾರನ್ನು ಏನನ್ನು ದೂಷಿಸಿ ಪ್ರಯೋಜನವೇನು? ನನ್ನಲ್ಲಿರುವ ಬ್ರಹ್ಮವಿದ್ಯೆಯು ಕೋತಿ ವಿದ್ಯೆಯಾಗಿ ಹೋಯಿತು’ ಎಂದು ಏಕಲವ್ಯ ತನ್ನ ತಂದೆ ತಾಯಿ ಪರಿವಾರದವರನ್ನು ಸಂತೈಸಿದನಲ್ಲದೆ, ಧೈರ್‍ಯ ತುಂಬಿದನು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...