Home / ಲೇಖನ / ಇತರೆ / ಏಕಲವ್ಯನ ಕತೆ

ಏಕಲವ್ಯನ ಕತೆ

‘ಏಕಲವ್ಯ – ಗುರು ದ್ರೋಣರಿಗೆ ಗುರು ಕಾಣಿಕೆಯೆಂದು ಬಲಗೈ ಹೆಬ್ಬೆಟ್ಟನ್ನು ನೀಡಬಾರದಿತ್ತು ಕಂದಾಽ…’ ಎಂದು ಏಕಲವ್ಯನ ತಾಯಿ ಮಗನ ಕೈಗೆ ಬಟ್ಟೆ ಸುತ್ತಿ ಹಾರೈಕೆ ಮಾಡುತ್ತಾ ಕಣ್ಣೀರಿಟ್ಟಳು.

ಏಕಲವ್ಯನ ತಂದೆ- ‘ನೀ ಬೇಡ ಕುಲದಲ್ಲಿ ಹುಟ್ಟಿ ಎಲ್ಲರಿಗೂ ಬೇಡಾದೆ ಮಗು! ನಿನ್ನ ಬಿಲ್ಲು ವಿದ್ಯೆಗೆ ಶಬ್ದವೇದಿ ವಿದ್ಯೆಗೆ ಯಾವುದೋ ಆಳರಸರ ಕೈಯಲ್ಲಿ ಮೆರೆಯಬೇಕಾಗಿತ್ತು! ಆದರೆ ಈ ಜನರು ನಿನ್ನ ಶ್ರೇಯಸ್ಸು ಸಹಿಸಲಿಲ್ಲ. ನಿನ್ನ ಅವನತಿ ಕೋರಿದರು’ ಎಂದು ಕಣ್ಣೀರಿಟ್ಟ.

‘ನೀವ್ಯಾರು ಕಣ್ಣೀರು ಸುರಿಸದಿರಿ. ನನ್ನ ಹಣೆ ಬರಹಕೆ ಗುರು ದ್ರೋಣರೇನು ಮಾಡಿಯಾರು? ಇಲ್ಲಿ ಅರ್‍ಜುನ ನಿಮಿತ್ತ ಮಾತ್ರ ಎಲ್ಲ ನನ್ನ ವಿಧಿ ವಿಪರೀತ! ನನಗೆ ಒಳ್ಳೆಯದಾಗಲಿಲ್ಲವೆಂದು ನನ್ನ ಬೇಡ ಜಾತಿಯನ್ನು, ಅರ್‍ಜುನ, ಗುರುದ್ರೋಣರನ್ನು ಬೈದು ಫಲವೇನು ? ಜಾತಕ ಪಕ್ಷಿಯು ಮಳೆ ಬರುವಾಗ ಮಳೆ ಹನಿ ಬೀಳಲಿ ಎಂದು ಬಾಯಿ ತೆರೆದಿದ್ದರೂ ತೊಟ್ಟು ಹನಿ ಬೀಳದಿದ್ದರೆ ಮೋಡದ ದೋಷವೆನ್ನುವಿರೇನು? ಕರೀಲ ಮರದಲ್ಲಿ ಎಲೆಗಳಿಲ್ಲವೆಂದು ಮಾತ್ರಕ್ಕೆ ವಸಂತ ಋತುವನ್ನು ಅಳಿದರೇನು ಫಲ? ಗೂಬೆಗೆ ಹಗಲು ಹೊತ್ತಿನಲ್ಲಿ ದೃಷ್ಟಿ ಗೋಚರಿಸದಿದ್ದರೆ ಸೂರ್‍ಯದೇವನ ತಪ್ಪೇನಿದೆ? ನನ್ನ ಅದೃಷ್ಟ ಸರಿಯಾಗಿಲ್ಲವೆಂದ ಮೇಲೆ ಯಾರನ್ನು ಏನನ್ನು ದೂಷಿಸಿ ಪ್ರಯೋಜನವೇನು? ನನ್ನಲ್ಲಿರುವ ಬ್ರಹ್ಮವಿದ್ಯೆಯು ಕೋತಿ ವಿದ್ಯೆಯಾಗಿ ಹೋಯಿತು’ ಎಂದು ಏಕಲವ್ಯ ತನ್ನ ತಂದೆ ತಾಯಿ ಪರಿವಾರದವರನ್ನು ಸಂತೈಸಿದನಲ್ಲದೆ, ಧೈರ್‍ಯ ತುಂಬಿದನು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...