Home / ಕಥೆ / ಸಣ್ಣ ಕಥೆ / ತಿಮ್ಮರಾಜ ಒಡೆಯರು

ತಿಮ್ಮರಾಜ ಒಡೆಯರು

ಬೆಟ್ಟದ ಚಾಮರಾಜ ಒಡೆಯರಿಗೆ ಮೂವರು ಮಕ್ಕಳಿದ್ದರು. ಅವರಲ್ಲಿ ಹಿರಿಯರಾದ ತಿಮ್ಮರಾಜ ಒಡೆಯರಿಗೆ ಹೆಮ್ಮನಹಳ್ಳಿಯು ಲಭಿಸಿತು. ಈ ತಿಮ್ಮರಾಜ ಒಡೆಯರು ಒಂಭತ್ತು ಮೈಲು ದೂರದಲ್ಲಿದ್ದ ನಂಜನಗೂಡಿನ ಶ್ರೀಕಂಠೇಶ್ವರ ದೇವರಲ್ಲಿ ಬಹಳ ಭಕ್ತಿಯನ್ನಿಟ್ಟಿದ್ದರು. ಆದರೆ ನಂಜನಗೂಡಿಗೆ ಹೋಗುವ ಮಾರ್ಗದಲ್ಲಿಯೇ ಸ್ವತಂತ್ರರಾದ ಇಬ್ಬರು ಪಾಳೆಯಗಾರರು ಆಳುತ್ತಿದ್ದರು. ಹೋದಾಗಲೆಲ್ಲ ಆ ಪಾಳಯಗಾರರ ಅನುಮತಿಯನ್ನು ಕೇಳಬೇಕಾಗಿತ್ತು.

ತಿಮ್ಮರಾಜರ ವೈಭವವನ್ನ ಆ ಪಾಳೆಯಗಾರರು ಸಹಿಸದೆ ಅಸೂಯೆ ಪಡುತ್ತಿದ್ದರು. ಒಂದು ಸಲ ತಿಮ್ಮರಾಜ ಒಡೆಯರು ಮುನ್ನೂರು ಭಟರನ್ನು ಮೈಗಾವಲಿಗೆ ಕರೆದುಕೊಂಡು ಅಟ್ಟಹಾಸದಿಂದ ನಂಜನಗೂಡಿಗೆ ಹೋಗಿ ಪೂಜೆ ಮಾಡಿಸಿ ಸಮಾರಾಧನೆ ಮಾಡಿಸಿದರು. ಆಗ ಅಸೂಯೆಯನ್ನು ತಾಳಲಾರದೆ ಆ ಪಾಳಯಗಾರು ಕಾಲುಕೆರೆದು ಜಗಳವಾಡಿದರು. ಯುದ್ಧವೇ ಆಯಿತು. ಹೊಡೆದಾಟದಲ್ಲಿ ಅನೇಕರು ಸತ್ತರು. ಆದರೆ ತಿಮ್ಮರಾಜ ಒಡೆಯರು ಜಯಶೀಲರಾದರು. ಕೂಡಲೆ ತನಗೆ ಶತ್ರುವಾಗಿದ್ದ ಉಮ್ಮತ್ತೂರಿನ ಒಡೆಯರಿಂದ ಕಪ್ಪಕಾಣಿಕೆಯನ್ನು ಸುಲಿದುಕೊಂಡು. ತಮ್ಮ ಪ್ರಾಬಲ್ಯವನ್ನು ರಕ್ಷಿಸಿಕೊಂಡರು.
*****
[ವಿಸ್ಕ್ಸ್; ಸಂಪುಟ ೧- ಪುಟ ೨೨]

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...