Home / ಕಥೆ / ಸಣ್ಣ ಕಥೆ / ರಾಜಭಕ್ತ ಮೈಸೂರಿನ ಸೆಟ್ಟಿ

ರಾಜಭಕ್ತ ಮೈಸೂರಿನ ಸೆಟ್ಟಿ

ಇಮ್ಮಡಿ ತಿಮ್ಮರಾಜಒಡೆಯರು ದೊರೆತನಮಾಡುತ್ತಿದ್ದ ಕಾಲದಲ್ಲಿ ಸಿಂಧುವಳ್ಳಿ, ಹುಣಸನಾಳುಗಳ ಪಾಳಯಗಾರರು ಅವರ ಅಶ್ರಿತರಾಗಿದ್ದರು.

ಒಂದುಸಲ ನಂಜನಗೂಡಿನ ರಥೋತ್ಸವ ಕಾಲದಲ್ಲಿ ದೊರೆಗಳು ಅಲ್ಲಿಗೆ ಬಂದಿದ್ದರು. ಅಲ್ಲಿಗೆ ಕೆಲವರು ಪಾಳಯಗಾರರು ದೇವರ ಸೇವೆಗೆಂದು ಬಂದಿದ್ದರು. ಪಾಳಯಗಾರರು ಬಹಳ ಅಟ್ಟಹಾಸದಿಂದ ಮೆರೆಯುತ್ತಲಿದ್ದು `ಬಿರುದೆಂತೆಂಬರಗಂಡ’ ನೆಂದು ಹೊಗಳಿಸಿ ಕೊಳ್ಳುತ್ತ ತಮ್ಮ ಸಮಾನರಿಲ್ಲವೆಂಬ ಜಂಭವನ್ನು ತೋರುತ್ತಿದ್ದರು.

ಇದನ್ನು ಕಂಡು ಮೈಸೂರಿನವರು ಸಹಿಸಲಿಲ್ಲ. ಅವರಲ್ಲಿ ಮುಖ್ಯನೂ ರಾಜಭಕ್ತನೂ ಆಗಿದ್ದ ಮೈಸೂರ ಸೆಟ್ಟಿಯು ಸಾಹಸದಿಂದ ಅವರೆದುರಿಗೆ ಹೋಗಿ “ಬಿರುದೆಂತೆಂಬರಗಂಡನೆಂಬ ಬಿರುದು ನಮ್ಮ ಮೈಸೂರಿನ ಒಡೆಯರಿಗೇ ಅಲ್ಲದೆ ನಿಮ್ಮಂತಹವರಿಗೆ ಸಲ್ಲುವುದಿಲ್ಲ; ನೀವು ಆ ಬಿರುದನ್ನು ಬಿಟ್ಟುಬಿಡಬೇಕು” ಎಂದು ಗಂಭೀರವಾಗಿ ಹೇಳಿದನು. ಪಾಳಯಗಾರರಿಗೆ ಕೋಪ ಬಂತು; ಈ ಅಧಿಕಪ್ರಸಂಗಿ ಸೆಟ್ಟಿಯನ್ನು ಶಿಕ್ಷಿಸಬೇಕೆಂದು ಅವನನ್ನು ಸೆರೆಹಿಡಿಸಿ ಒಯ್ದರು.

ಈ ಸಮಾಚಾರವು ಒಡೆಯರಿಗೆ ತಲಪಿತು; “ನಮ್ಮ ಧೀರ ಪ್ರಜೆಯಾದ ಸೆಟ್ಟಿಯನ್ನು ಹಿಡಿದುಕೊಂಡು ಹೋಗಲು ಆ ಪಾಳಯಗಾರರಿಗೆಷ್ಟು ಗರ್ವ! ನಮ್ಮ ಆಪ್ತನಾದ ಸೆಟ್ಟಿಯನ್ನು ಹಾಗೆ ಬಿಟ್ಟುಕೊಟ್ಟೇವೆಯೆ ನಾವು!” ಎಂದು ತಾವೇ ಸೈನ್ಯದೊಡನೆ ಹೊರಟು ಪಾಳಯಗಾರರ ಶಿಬಿರಕ್ಕೆ ಹೋಗಿ ಕೂಗಿಸಿ ಹೇಳಿಸಿದರು : “ಪಾಳಯಗಾರರಲ್ಲಿ ಯಾರಾದರೂ ಧೀರರೂ ಸಾಹಸಿಗಳೂ ಇದ್ದರೆ ಯುದ್ಧಕ್ಕೆ ಬರಬಹುದು; ಇಲ್ಲವಾದರೆ ಎಲ್ಲರೂ ಬಂದು ಸೆಟ್ಟಿಯನ್ನೊಪ್ಪಿಸಿ ತಪ್ಪಾಯಿತೆಂದು ದೊರೆಗಳ ಮನ್ನಣೆಯ ಬೇಡಬಹುದು” ಎಂದು. ಮದಿಸಿದ್ದ ಪಾಳಯಗಾರರು ಯುದ್ಧಕ್ಕೆ ಬಂದರು. ಒಡೆಯರು ಅವರೆಲ್ಲರನ್ನು ಸೋಲಿಸಿ ಸೆರೆಯಾದ ಸೆಟ್ಟಿಯನ್ನು ಕರೆತರಿಸಿ ಮರ್ಯಾದೆಯಿಂದ ಕಂಡು ಮೈಸೂರಿಗೆ ಜಯಶೀಲರಾಗಿ ಹಿಂತಿರುಗಿದರು. ಈ ಸಂಗತಿಯಿಂದ ರಾಜರಿಗೆ ‘ಮೊನೆಗಾರ’ ನೆಂಬ ಬಿರುದು ವಾಡಿಕೆಯಾಯ್ತು. ಅಂದಿನಿಂದ ಅರಮನೆಯಲ್ಲಿ ಸೆಟ್ಟಿಗೆ ಗೌರವವೂ ಹೆಚ್ಚಿತು.
*****
[ವಂಶರತ್ನಾಕರ ಪುಟ ೧೯; ವಂಶಾವಳಿ ಸಂಪುಟ ೧ ಪುಟ ೧೫- ೧೬]

Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...