Home / ಕಥೆ / ಸಣ್ಣ ಕಥೆ / ರಾಜ ಒಡೆಯರು ಆನೆಯನ್ನು ಬಿಟ್ಟಿದ್ದು

ರಾಜ ಒಡೆಯರು ಆನೆಯನ್ನು ಬಿಟ್ಟಿದ್ದು

ಕಾರುಗಹಳ್ಳಿಯ ಪಾಳಯಗಾರರು ಮೈಸೂರಿನಿಂದ ಓಡಿಸಿದಮೇಲೆ ಬೆಟ್ಟದ ಒಡೆಯರು ಕತ್ತಿಯನ್ನು ಹಿಡಿದು ರಾಜ ಒಡೆಯರಿಗಾಗಿ ಅನೇಕ ಜಯಗಳನ್ನು ಪಡೆದರು. ರಾಜ ಒಡೆಯರ ಪ್ರಾಬಲ್ಯವನ್ನು ಶ್ರೀರಂಗಪಟ್ಟಣದ ಅಧಿಕಾರಿಯು ಸಹಿಸಲಿಲ್ಲ; ಅದನ್ನು ತಗ್ಗಿಸುವ ಯೋಚನೆಯಿಂದ ಮೈಸೂರಿನ ಬಳಿ ಇದ್ದ ಕೆಸರೆಯೆಂಬ ಕೋಟೆಯನ್ನು ಹಿಡಿಯಲು ಸೈನ್ಯವನ್ನು ಕಳುಹಿಸಿದನು. ಆ ಅಧಿರಾಜನ ಸೈನ್ಯವನ್ನು ಬೆಟ್ಟದ ಒಡೆಯರೇ ಎದುರಿಸಿ ಸೋಲಿಸಿದರು. ಕೆಸರೆಯ ಕೋಟೆಯನ್ನು ಕೊಳ್ಳೆ ಹೊಡೆದರು. ಕೊಳ್ಳೆಯಲ್ಲಿ ಉತ್ತಮವಾದ ಒಂದಾನೆಯು ಸಿಕ್ಕಿತು. ಆ ಆನೆಯನ್ನು ತಂದು ಬೆಟ್ಟದ ಒಡೆಯರು ರಾಜ ಒಡೆಯರಿಗೆ ಒಪ್ಪಿಸಿದರು.

ರಾಜ ಒಡೆಯರು ಆನೆಯನ್ನು ಸಾಕಿಕೊಳ್ಳುವುದು ಕಷ್ಟವಾಗಿತ್ತು. ಇಟ್ಟುಕೊಂಡರೆ ವೃಥಾ ವೆಚ್ಚವಾಗುವುದೆಂದು ಯೋಚಿಸುತ್ತ ” ಈ ಆನೆಗಾಗಿ ವೆಚ್ಚ ಮಾಡತಕ್ಕ ಹಣದಿಂದ ಮೂವತ್ತು ಸೈನಿಕರ ಸಂಬಳಗಳನ್ನು ಕೊಡಬಹುದು ಆದ್ದರಿಂದ ಮೂವತ್ತು ಸೈನಿಕರನ್ನು ಸೇನೆಯಲ್ಲಿ ಹೆಚ್ಚಿಸೋಣ. ಆನೆಯನ್ನು ಕರೆದು ಕೊಂಡುಹೋಗಿ ಶ್ರೀರಂಗಪಟ್ಟಣದ ರಾಯರಿಗೆ ಕೊಟ್ಟುಬಿಡೋಣ” ಎಂದರು. ಈ ರೀತಿಯಲ್ಲಿ ಎದುರುಬಿದ್ದ ತಪ್ಪನ್ನು ತೊಡೆದುಹಾಕಲು, ರಾಜ ಒಡೆಯರು ಸಂಧಾನಮಾಡಿ ತಮ್ಮ ಹಣವನ್ನು ವ್ಯರ್ಥವ್ಯಯಕ್ಕೆ ಕೊಡದೆ ಇದ್ದರು. ಶ್ರೀರಂಗಪಟ್ಟಣದ ರಾಯನು ಅನೆಯನ್ನು ಸ್ವೀಕರಿಸಿ ಸಮಾಧಾನಪಟ್ಟು, ರಾಜ ಒಡೆಯರನ್ನು ಮನ್ನಿಸಿದನು. ತರುವಾಯ, ತಮ್ಮ ಭೂಮಿಗಳಲ್ಲಿ ಇತರರ ತೊಂದರೆ ಹೆಚ್ಚಿತೆಂದು ಜಾಣತನದಿಂದ ಹೇಳಿ ರಾಜ ಒಡೆಯರು ಕೊಡುತ್ತಿದ್ದ ಪೊಗದಿಯನ್ನು ನಿಲ್ಲಿಸಿದರು. ಮತ್ತು ಹೊಸದಾಗಿ ಒಂದೆರಡು ಹಳ್ಳಿಗಳನ್ನು ರಾಜನಿಂದ ಪಡೆದರು.
*****
[ವಿಲ್ಕ್ಸ್, ಸಂ.೧; ಪುಟ ೨೪]

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...